AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಮ್ಮಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲೂ ನಡೆಯುತ್ತದೆ ಇಂತಹ ಅಮಾನುಷ ಘಟನೆಗಳು..

ಮನೆ ಮಕ್ಕಳನ್ನೇ ದಶಕಗಟ್ಟಲೆ ಗೃಹ ಬಂಧನದಲ್ಲಿಡುವ ಸುದ್ದಿಗಳು ಭಾರತಲ್ಲಿ ಆಗಾಗ ಸುದ್ದಿಯಾಗುತ್ತಲೇ ಇರುತ್ತವೆ. ಇಂಥದ್ದೇ ಒಂದು ಅಮಾನವೀಯ ಘಟನೆ ಸ್ವೀಡನ್​ನಲ್ಲಿ ನಡೆದಿದೆ.

ಇದು ನಮ್ಮಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲೂ ನಡೆಯುತ್ತದೆ ಇಂತಹ ಅಮಾನುಷ ಘಟನೆಗಳು..
ಮನೆ ಮಕ್ಕಳನ್ನೇ ದಶಕಗಟ್ಟಲೆ ಗೃಹ ಬಂಧನದಲ್ಲಿಡುವ ಸುದ್ದಿಗಳು ನಮ್ಮ ಕರ್ನಾಟಕ, ಭಾರತದಲ್ಲಿ ಆಗಾಗ ಸುದ್ದಿಯಾಗುತ್ತಲೇ ಇರುತ್ತವೆ. ಆದರೆ ಇಂತಹ ಅಮಾನುಷ ಘಟನೆಗಳು ನಮ್ಮಲ್ಲಷ್ಟೇ ಅಲ್ಲ, ಮುಂದುವರಿದ ದೇಶಗಳಲ್ಲೂ ಜರುಗುತ್ತವೆ
guruganesh bhat
| Edited By: |

Updated on: Dec 02, 2020 | 2:31 PM

Share

ಮನೆ ಮಕ್ಕಳನ್ನೇ ದಶಕಗಟ್ಟಲೆ ಗೃಹ ಬಂಧನದಲ್ಲಿಡುವ ಸುದ್ದಿಗಳು ನಮ್ಮ ಕರ್ನಾಟಕ, ಭಾರತದಲ್ಲಿ ಆಗಾಗ ಸುದ್ದಿಯಾಗುತ್ತಲೇ ಇರುತ್ತವೆ. ಆದರೆ ಇಂತಹ ಅಮಾನುಷ ಘಟನೆಗಳು ನಮ್ಮಲ್ಲಷ್ಟೇ ಅಲ್ಲ, ಮುಂದುವರಿದ ದೇಶಗಳಲ್ಲೂ ಜರುಗುತ್ತವೆ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ.

ಸ್ವೀಡನ್​ ದೇಶದ ಸ್ಟಾಕ್​ಹೋಮ್​ನ ಮಹಿಳೆಯೋರ್ವಳು ತನ್ನ ಮಗನನ್ನು ಬರೋಬ್ಬರಿ 30 ವರ್ಷದಿಂದ ಗೃಹ ಬಂಧನದಲ್ಲಿ ಇರಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕಳೆದ ತಿಂಗಳು ಮಹಿಳೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಗ, ಸಂಬಂಧಿಯೋರ್ವರು ಆಕೆಯ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಬಂಧನದಲ್ಲಿದ್ದ ಮಹಿಳೆಯ ಆ ನತದೃಷ್ಟ ಮಗ ಕಣ್ಣಿಗೆ ಬಿದ್ದಿದ್ದಾನೆ. ಮನೆ ಭೂತ ಬಂಗಲೆಯಂತೆ ಭಾಸವಾಗುತ್ತಿತ್ತು ಎಂದು ಸಂಬಂಧಿ ಹೇಳಿದ್ದಾರೆ.

12 ವರ್ಷವಾಗುವ ಮೊದಲಿಂದಲೇ ಬಂಧನ.. ಮಗನಿಗೆ 12 ವರ್ಷ ಆಗುವ ಮೊದಲೇ ಈ ಮಹಾತಾಯಿ ತನ್ನದೇ ಕರುಳ ಕುಡಿಯನ್ನು ಗೃಹ ಬಂಧನದಲ್ಲಿರಿಸಿದ್ದಾಳೆ. ಈ ಕುರಿತು ನೆರೆ ಮನೆಯವರಿಗೆ ಕಿಂಚಿತ್ ಸುಳಿವೂ ಸಿಗದಂತೆ ನಿಭಾಯಿಸಿದ್ದಾಳೆ. ಅಕ್ಕ ಪಕ್ಕದ ಮನೆಯವರು ಈ ಹುಡುಗ ಯಾಕೋ ಶಾಲೆಗೆ ಹೋಗುತ್ತಿಲ್ಲ ಎಂದು ಒಮ್ಮೆ ಯೋಚಿಸಿದ್ದಾರೆ. ಹೆಚ್ಚು ತಲೆಕೆಡಿಸಿಕೊಳ್ಳದೇ, ಮಗನನ್ನು ಮನೆಯಲ್ಲೇ ಬೆಳೆಸುತ್ತಿರಬಹುದು ಎಂದು ಭಾವಿಸಿ ಸುಮ್ಮನಾಗಿದ್ದಾರೆ.

41 ವರ್ಷವಾದರೂ ಬೆಳೆದಿಲ್ಲ ಹಲ್ಲುಗಳು

ಆ ಬಂಧಿತ ವ್ಯಕ್ತಿಗೆ ಪೌಷ್ಠಿಕಾಂಶದ ಕೊರತೆಯಿಂದ 41 ವರ್ಷವಾದರೂ ಹಲ್ಲುಗಳೇ ಬೆಳೆದಿಲ್ಲ! ನಡೆದಾಡಲು ಮತ್ತು ಮಾತನಾಡಲೂ ಆಗದ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮಹಾತಾಯಿಯನ್ನು ಬಂಧಿಸಿದ್ದಾರೆ. ಆದರೆ, ಆಕೆ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾಳೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್