AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ಭೀಕರ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ ಆರ್ಗೌ ಕ್ಯಾಂಟನ್‌ನಲ್ಲಿ ನಡೆದ ಈ ಘಟನೆ ನೂರಾರು ಯುವಕರನ್ನು ಆತಂಕಗೊಳಿಸಿದೆ. ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಕಟ್ಟುನಿಟ್ಟಾದ ಬಂದೂಕು ನಿಯಮಗಳ ನಡುವೆಯೂ ಇಂತಹ ಘಟನೆ ನಡೆದಿರುವುದು ಆಶ್ಚರ್ಯಕರವಾಗಿದೆ.

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ಭೀಕರ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ
ಪೊಲೀಸ್
ನಯನಾ ರಾಜೀವ್
|

Updated on: Aug 30, 2026 | 12:22 PM

Share

ಆರಾವ್ , ಆಗಸ್ಟ್ 30: ಉತ್ತರ ಸ್ವಿಟ್ಜರ್‌ಲ್ಯಾಂಡ್‌ನ ಆರ್ಗೌ ಕ್ಯಾಂಟನ್ ವ್ಯಾಪ್ತಿಯ ಆರಾವ್‌ನಲ್ಲಿರುವ ಶಾಚೆನ್ ಕುದುರೆ ರೇಸಿಂಗ್ ಮೈದಾನದಲ್ಲಿ ಭಾನುವಾರ ಬೆಳಗಿನ ಜಾವ ನಡೆದ ಸಂಗೀತ ಸಮಾರಂಭದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ(Firing) ನಡೆಸಿದ್ದಾರೆ. ಈ ಭೀಕರ ಘಟನೆಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ನೂರಾರು ಯುವಕರು ಸಂಗೀತ ಪಾರ್ಟಿಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಬೆಳಗಿನ ಜಾವ ಸುಮಾರು 2.30 ರಿಂದ 2.35 ರ ವೇಳೆಗೆ ಏಕಾಏಕಿ ಸರಣಿ ಗುಂಡಿನ ಶಬ್ದಗಳು ಕೇಳಿಬಂದಿದ್ದು, ಸ್ಥಳದಲ್ಲಿ ತೀವ್ರ ಕಾಲ್ತುಳಿತ ಹಾಗೂ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಗುಂಪಿನ ಮೇಲೆ ಗುಂಡಿನ ಸುರಿಮಳೆ: ಅಪಾರ ಸಂಖ್ಯೆಯ ಸಾರ್ವಜನಿಕರು ನೆರೆದಿದ್ದ ಗುಂಪಿನ ಮೇಲೆ ದುಷ್ಕರ್ಮಿಗಳು ಹಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಆರ್ಗೌ ಕ್ಯಾಂಟೋನಲ್ ಪೊಲೀಸರ ವಕ್ತಾರೆ ವನೆಸ್ಸಾ ರಂಪೋಲ್ಡ್ ಖಚಿತಪಡಿಸಿದ್ದಾರೆ.

ಮತ್ತಷ್ಟು ಓದಿ: ಕಾಶ್ಮೀರದ ಕುಲ್ಗಾಮ್‌ನಲ್ಲಿ ಉಗ್ರರ ದಾಳಿ; ಓರ್ವ ಸಾವು, ಒಬ್ಬರ ಸ್ಥಿತಿ ಗಂಭೀರ

ಭಾರಿ ಪೊಲೀಸ್ ಕಾರ್ಯಾಚರಣೆ: ಘಟನಾ ಸ್ಥಳಕ್ಕೆ ಆರ್ಗೌ ಕ್ಯಾಂಟನ್ ವಿಪತ್ತು ನಿರ್ವಹಣಾ ಪಡೆ (KKE), ವಿಶೇಷ ಕಮಾಂಡೋಗಳು ಹಾಗೂ ಸ್ವಿಸ್ ಸೇನೆಯ ‘ಸೂಪರ್ ಪೂಮಾ’ ಹೆಲಿಕಾಪ್ಟರ್ ಅನ್ನು ಶೋಧ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

ಸಾರ್ವಜನಿಕರಿಗೆ ನಿರ್ಬಂಧ: ಪರಿಸ್ಥಿತಿಯನ್ನು ಹತೋಟಿಗೆ ತರುವ ಸಲುವಾಗಿ ಶಾಚೆನ್ ಪ್ರದೇಶ ಮತ್ತು ಆರಾವ್‌ನಲ್ಲಿರುವ ಸಾರ್ವಜನಿಕ ಈಜುಕೊಳವನ್ನು ಮುಚ್ಚಲಾಗಿದ್ದು, ಸಾರ್ವಜನಿಕರು ಆ ಪ್ರದೇಶಕ್ಕೆ ತೆರಳದಂತೆ ಪೊಲೀಸರು ಎಕ್ಸ್ (ಟ್ವಿಟರ್) ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸ್ವಿಟ್ಜರ್‌ಲ್ಯಾಂಡ್‌ನ ಬಂದೂಕು ಸಂಸ್ಕೃತಿ: ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕಡ್ಡಾಯ ಸೇನಾ ತರಬೇತಿ ಇರುವುದರಿಂದ ಹೆಚ್ಚಿನ ನಾಗರಿಕರಲ್ಲಿ ಬಂದೂಕುಗಳಿರುತ್ತವೆ. ಆದರೆ ಕಟ್ಟುನಿಟ್ಟಿನ ನಿಯಮಾವಳಿಗಳ ಕಾರಣದಿಂದಾಗಿ ದೇಶದಲ್ಲಿ ಇಂತಹ ಸಾರ್ವಜನಿಕ ಗುಂಡಿನ ದಾಳಿಗಳು ಅತ್ಯಂತ ಅಪರೂಪವಾಗಿವೆ.

ದಾಳಿಕೋರರ ಪತ್ತೆಗೆ ಶೋಧ: ಗುಂಡು ಹಾರಿಸಿದ ದುಷ್ಕರ್ಮಿಗಳು ಯಾರು ಮತ್ತು ದಾಳಿಗೆ ನಿಖರ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಆರೋಪಿಗಳ ಪತ್ತೆಗಾಗಿ ಸುತ್ತಮುತ್ತಲಿನ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದ್ದು, ತನಿಖೆ ತೀವ್ರಗೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!