AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ಭೀಕರ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ ಆರ್ಗೌ ಕ್ಯಾಂಟನ್‌ನಲ್ಲಿ ನಡೆದ ಈ ಘಟನೆ ನೂರಾರು ಯುವಕರನ್ನು ಆತಂಕಗೊಳಿಸಿದೆ. ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಕಟ್ಟುನಿಟ್ಟಾದ ಬಂದೂಕು ನಿಯಮಗಳ ನಡುವೆಯೂ ಇಂತಹ ಘಟನೆ ನಡೆದಿರುವುದು ಆಶ್ಚರ್ಯಕರವಾಗಿದೆ.

ಸ್ವಿಟ್ಜರ್‌ಲ್ಯಾಂಡ್‌ನ ಆರಾವ್ ರೇವ್ ಪಾರ್ಟಿಯಲ್ಲಿ ಭೀಕರ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ
ಪೊಲೀಸ್
ನಯನಾ ರಾಜೀವ್
|

Updated on: Aug 30, 2026 | 12:22 PM

Share

ಆರಾವ್ , ಆಗಸ್ಟ್ 30: ಉತ್ತರ ಸ್ವಿಟ್ಜರ್‌ಲ್ಯಾಂಡ್‌ನ ಆರ್ಗೌ ಕ್ಯಾಂಟನ್ ವ್ಯಾಪ್ತಿಯ ಆರಾವ್‌ನಲ್ಲಿರುವ ಶಾಚೆನ್ ಕುದುರೆ ರೇಸಿಂಗ್ ಮೈದಾನದಲ್ಲಿ ಭಾನುವಾರ ಬೆಳಗಿನ ಜಾವ ನಡೆದ ಸಂಗೀತ ಸಮಾರಂಭದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ(Firing) ನಡೆಸಿದ್ದಾರೆ. ಈ ಭೀಕರ ಘಟನೆಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ನೂರಾರು ಯುವಕರು ಸಂಗೀತ ಪಾರ್ಟಿಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಬೆಳಗಿನ ಜಾವ ಸುಮಾರು 2.30 ರಿಂದ 2.35 ರ ವೇಳೆಗೆ ಏಕಾಏಕಿ ಸರಣಿ ಗುಂಡಿನ ಶಬ್ದಗಳು ಕೇಳಿಬಂದಿದ್ದು, ಸ್ಥಳದಲ್ಲಿ ತೀವ್ರ ಕಾಲ್ತುಳಿತ ಹಾಗೂ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಗುಂಪಿನ ಮೇಲೆ ಗುಂಡಿನ ಸುರಿಮಳೆ: ಅಪಾರ ಸಂಖ್ಯೆಯ ಸಾರ್ವಜನಿಕರು ನೆರೆದಿದ್ದ ಗುಂಪಿನ ಮೇಲೆ ದುಷ್ಕರ್ಮಿಗಳು ಹಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಆರ್ಗೌ ಕ್ಯಾಂಟೋನಲ್ ಪೊಲೀಸರ ವಕ್ತಾರೆ ವನೆಸ್ಸಾ ರಂಪೋಲ್ಡ್ ಖಚಿತಪಡಿಸಿದ್ದಾರೆ.

ಮತ್ತಷ್ಟು ಓದಿ: ಕಾಶ್ಮೀರದ ಕುಲ್ಗಾಮ್‌ನಲ್ಲಿ ಉಗ್ರರ ದಾಳಿ; ಓರ್ವ ಸಾವು, ಒಬ್ಬರ ಸ್ಥಿತಿ ಗಂಭೀರ

ಭಾರಿ ಪೊಲೀಸ್ ಕಾರ್ಯಾಚರಣೆ: ಘಟನಾ ಸ್ಥಳಕ್ಕೆ ಆರ್ಗೌ ಕ್ಯಾಂಟನ್ ವಿಪತ್ತು ನಿರ್ವಹಣಾ ಪಡೆ (KKE), ವಿಶೇಷ ಕಮಾಂಡೋಗಳು ಹಾಗೂ ಸ್ವಿಸ್ ಸೇನೆಯ ‘ಸೂಪರ್ ಪೂಮಾ’ ಹೆಲಿಕಾಪ್ಟರ್ ಅನ್ನು ಶೋಧ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

ಸಾರ್ವಜನಿಕರಿಗೆ ನಿರ್ಬಂಧ: ಪರಿಸ್ಥಿತಿಯನ್ನು ಹತೋಟಿಗೆ ತರುವ ಸಲುವಾಗಿ ಶಾಚೆನ್ ಪ್ರದೇಶ ಮತ್ತು ಆರಾವ್‌ನಲ್ಲಿರುವ ಸಾರ್ವಜನಿಕ ಈಜುಕೊಳವನ್ನು ಮುಚ್ಚಲಾಗಿದ್ದು, ಸಾರ್ವಜನಿಕರು ಆ ಪ್ರದೇಶಕ್ಕೆ ತೆರಳದಂತೆ ಪೊಲೀಸರು ಎಕ್ಸ್ (ಟ್ವಿಟರ್) ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸ್ವಿಟ್ಜರ್‌ಲ್ಯಾಂಡ್‌ನ ಬಂದೂಕು ಸಂಸ್ಕೃತಿ: ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕಡ್ಡಾಯ ಸೇನಾ ತರಬೇತಿ ಇರುವುದರಿಂದ ಹೆಚ್ಚಿನ ನಾಗರಿಕರಲ್ಲಿ ಬಂದೂಕುಗಳಿರುತ್ತವೆ. ಆದರೆ ಕಟ್ಟುನಿಟ್ಟಿನ ನಿಯಮಾವಳಿಗಳ ಕಾರಣದಿಂದಾಗಿ ದೇಶದಲ್ಲಿ ಇಂತಹ ಸಾರ್ವಜನಿಕ ಗುಂಡಿನ ದಾಳಿಗಳು ಅತ್ಯಂತ ಅಪರೂಪವಾಗಿವೆ.

ದಾಳಿಕೋರರ ಪತ್ತೆಗೆ ಶೋಧ: ಗುಂಡು ಹಾರಿಸಿದ ದುಷ್ಕರ್ಮಿಗಳು ಯಾರು ಮತ್ತು ದಾಳಿಗೆ ನಿಖರ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಆರೋಪಿಗಳ ಪತ್ತೆಗಾಗಿ ಸುತ್ತಮುತ್ತಲಿನ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದ್ದು, ತನಿಖೆ ತೀವ್ರಗೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ