AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syria Earthquake: ಹುಟ್ಟು ಸಾವು ಎಲ್ಲವೂ ದೈವಿಚ್ಛೆ: ಅವಶೇಷಗಳಡಿ ಹುಟ್ಟಿ, ತಾಯಿ ಮೃತಪಟ್ಟರೂ ಹೊಕ್ಕುಳ ಬಳ್ಳಿ ಸಮೇತ ಬದುಕಿ ಬಂದ ಕೂಸು

ಹುಟ್ಟು ಸಾವು ಎಲ್ಲವೂ ದೈವಿಚ್ಛೆ ಎನ್ನುವ ಮಾತು ಅಕ್ಷರಶಃ ನಿಜವಾಗಿದೆ. ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ, ಇನ್ನೂ ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಆದರೆ ಅದೇ ಅವಶೇಷಗಳಡಿ ಮಗುವೊಂದು ಜನಿಸಿದ್ದು, ಹೊಕ್ಕುಳ ಬಳ್ಳಿ ಕತ್ತರಿಸುವ ಮುನ್ನವೇ ತಾಯಿ ಮೃತಪಟ್ಟಿದ್ದು, ಮಗುವನ್ನು ಜೀವಂತವಾಗಿ ಹೊರತೆಗೆಯಲಾಗಿದೆ.

Syria Earthquake: ಹುಟ್ಟು ಸಾವು ಎಲ್ಲವೂ ದೈವಿಚ್ಛೆ: ಅವಶೇಷಗಳಡಿ ಹುಟ್ಟಿ, ತಾಯಿ ಮೃತಪಟ್ಟರೂ ಹೊಕ್ಕುಳ ಬಳ್ಳಿ ಸಮೇತ ಬದುಕಿ ಬಂದ ಕೂಸು
ಸಿರಿಯಾ ಭೂಕಂಪ
ನಯನಾ ರಾಜೀವ್
|

Updated on: Feb 08, 2023 | 8:50 AM

Share

ಹುಟ್ಟು ಸಾವು ಎಲ್ಲವೂ ದೈವಿಚ್ಛೆ ಎನ್ನುವ ಮಾತು ಅಕ್ಷರಶಃ ನಿಜವಾಗಿದೆ. ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ, ಇನ್ನೂ ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಆದರೆ ಅದೇ ಅವಶೇಷಗಳಡಿ ಮಗುವೊಂದು ಜನಿಸಿದ್ದು, ಹೊಕ್ಕುಳ ಬಳ್ಳಿ ಕತ್ತರಿಸುವ ಮುನ್ನವೇ ತಾಯಿ ಮೃತಪಟ್ಟಿದ್ದು, ಮಗುವನ್ನು ಜೀವಂತವಾಗಿ ಹೊರತೆಗೆಯಲಾಗಿದೆ.

ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಭಾರತದಿಂದ ಪರಿಹಾರ ಮತ್ತು ರಕ್ಷಣಾ ತಂಡಗಳು ಟರ್ಕಿ ತಲುಪಿವೆ. ವೈದ್ಯಕೀಯ ತಂಡವೂ ಇದೆ.

ಅವಶೇಷಗಳಡಿ ಇನ್ನೂ ಸಾವಿರಾರು ಜನರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರ ರಕ್ಷಣಾ ಕಾರ್ಯ ವೇಗವಾಗಿ ನಡೆಯುತ್ತಿದೆ. ಜನರು ರಾತ್ರಿಯಿಡೀ ತಮ್ಮ ಪ್ರೀತಿಪಾತ್ರರನ್ನು ಹುಡುಕುತ್ತಲೇ ಇದ್ದಾರೆ.

ಮತ್ತಷ್ಟು ಓದಿ:Footballer Death: ಟರ್ಕಿ ಭೂಕಂಪದಲ್ಲಿ ಫುಟ್ಬಾಲ್ ಆಟಗಾರ ಅಹ್ಮತ್ ಎಯುಪ್ ಟುರ್ಕಾಸ್ಲಾನ್ ಸಾವು

ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜೀವಂತವಾಗಿರಬಹುದು, ಅದಕ್ಕಾಗಿಯೇ ರಕ್ಷಣಾ ತಂಡವು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಇದೇ ವೇಳೆ ಭೂಕಂಪನದ ಅನಾಹುತದ ಇಂತಹ ಕೆಲವು ಕಥೆಗಳು ಮುನ್ನೆಲೆಗೆ ಬಂದಿದ್ದು, ಕೇಳಿ ಎಲ್ಲರ ಮನದಲ್ಲಿ ತುಂಬಿಕೊಂಡಿದೆ.

ಅವಶೇಷಗಳಡಿ ಸಿಲುಕಿದ್ದ ಗರ್ಭಿಣಿ ಹೆಣ್ಣುಮಗುವಿಗೆ ಜನ್ಮ ನೀಡಿ ಪ್ರಾಣಬಿಟ್ಟಿದ್ದಾರೆ. 34 ವರ್ಷದ ಖಲೀಲ್ ಅಲ್ ಶಮಿ, ಸೋಮವಾರ ಸಿರಿಯಾದ ಜಿಂಡರೆಸ್ ನಗರದಲ್ಲಿ ಸಂಭವಿಸಿದ ಭೂಕಂಪದಿಂದ ತನ್ನ ಸಹೋದರನ ಮನೆಯೂ ನಾಶವಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಾ, ಕುಟುಂಬದ ಸದಸ್ಯರನ್ನು ಹುಡುಕಲು ಅವಶೇಷಗಳನ್ನು ಒಂದೊಂದಾಗಿಯೇ ಬದಿಗೆ ಸರಿಸುತ್ತಾ ಹೋಗುತ್ತಿದ್ದರು.

ಆ ಸಂದರ್ಭದಲ್ಲಿ ತನ್ನ ಅತ್ತಿಗೆಯ ಹೊಕ್ಕುಳ ಬಳ್ಳಿಗೆ ಜೋಡಿಸಲಾದ ಸುಂದರವಾದ ಹೆಣ್ಣುಮಗುವನ್ನು ಕಂಡು ಮನಸ್ಸು ತುಂಬಿ ಬಂದಿತ್ತು, ಆದರೆ ಮಗುವು ಜೀವಂತವಾಗಿರುವುದು ಕಂಡುಬಂದಿತ್ತು, ಆಗ ತಕ್ಷಣವೇ ಹೊಕ್ಕುಳ ಬಳ್ಳಿಯನ್ನು ಕತ್ತರಿಸಿ ಮಗುವನ್ನು ಹೊರತೆಗೆಯಲಾಯಿತು. ಆದರೆ ತಾಯಿ ಮೃತಪಟ್ಟಿದ್ದಾರೆ. ಅತ್ತಿಗೆ ತುಂಬು ಗರ್ಭಿಣಿಯಾಗಿದ್ದರು, ಒಂದು ಅಥವಾ ಎರಡು ದಿನಗಳಲ್ಲಿ ಹೆರಿಗೆಯಾಗುತ್ತಿತ್ತು ಎಂದು ಖಲೀಲ್ ತಿಳಿಸಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!