AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syria: ಡಮಾಸ್ಕಸ್​ಗೆ ಬಂಡುಕೋರರ ಪ್ರವೇಶ, ಅಧ್ಯಕ್ಷ ಬಶರ್ ದೇಶದಿಂದ ಪಲಾಯನ

ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್​-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್​ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ ಪಲಾಯನ ಮಾಡಿದ್ದಾರೆ ಎಂದು ರಾಯ್ಟರ್ಸ್​ ವರದಿ ಮಾಡಿದೆ.

Syria: ಡಮಾಸ್ಕಸ್​ಗೆ ಬಂಡುಕೋರರ ಪ್ರವೇಶ, ಅಧ್ಯಕ್ಷ ಬಶರ್ ದೇಶದಿಂದ ಪಲಾಯನ
ಬಂಡುಕೋರರುImage Credit source: bloomberg
ನಯನಾ ರಾಜೀವ್
|

Updated on: Dec 08, 2024 | 9:59 AM

Share

ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್​-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್​ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ ಪಲಾಯನ ಮಾಡಿದ್ದಾರೆ ಎಂದು ರಾಯ್ಟರ್ಸ್​ ವರದಿ ಮಾಡಿದೆ.

ಅಸ್ಸಾದ್ ರಷ್ಯಾ ಅಥವಾ ಟೆಹರಾನ್‌ಗೆ ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಬಶರ್ ಅಲ್-ಅಸ್ಸಾದ್ ರಷ್ಯಾದ ಸರಕು ವಿಮಾನದಲ್ಲಿ ಸಿರಿಯಾವನ್ನು ತೊರೆದಿದ್ದಾರೆ ಮತ್ತು ಅಸ್ಸಾದ್ ಅವರ ವಿಮಾನವು ರಾಡಾರ್‌ನಿಂದ ಕಾಣೆಯಾಗಿದೆ.

ಸಿರಿಯಾದ ಪ್ರಧಾನಿ ಮೊಹಮ್ಮದ್ ಗಾಜಿ ಜಲಾಲಿ ಅವರು ತಮ್ಮ ಮನೆಯಿಂದಲೇ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದರು ಮತ್ತು ಅವರು ದೇಶದಲ್ಲಿಯೇ ಉಳಿದು ಅಧಿಕಾರದ ಸುಗಮ ಹಸ್ತಾಂತರಕ್ಕೆ ಶ್ರಮಿಸುವುದಾಗಿ ಹೇಳಿದ್ದಾರೆ. ಬಂಡುಕೋರರ ಗುಂಪು ಸಿರಿಯಾದಲ್ಲಿ ಆಕ್ರಮಣವನ್ನು ಘೋಷಿಸಿದೆ. ಅಸ್ಸಾದ್ ಸಹೋದರ ಮಹೇರ್ ಅಲ್-ಅಸ್ಸಾದ್ ಕೂಡ ಪರಾರಿಯಾಗಿದ್ದಾರೆ. ಬಂಡುಕೋರರು ಎಲ್ಲಾ ಕಡೆಯಿಂದ ರಾಜಧಾನಿ ಡಮಾಸ್ಕಸ್ ಪ್ರವೇಶಿಸಿದ್ದಾರೆ.

ಮತ್ತಷ್ಟು ಓದಿ: ಸಿರಿಯಾ ಬಿಕ್ಕಟ್ಟು: ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ

ಬಂಡುಕೋರರು ಡಮಾಸ್ಕಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಶಪಡಿಸಿಕೊಂಡಿದ್ದಾರೆ. ಸೇನಾ ಪ್ರಧಾನ ಕಛೇರಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂಡುಕೋರ ಗುಂಪುಗಳಿಗೆ ಅಮೆರಿಕ ಮತ್ತು ಇರಾನ್ ಬೆಂಬಲವಿದೆ. ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಬಂಡುಕೋರ ಗುಂಪುಗಳು ಅಧಿಕೃತ ಹೇಳಿಕೆಯಲ್ಲಿ ತಿಳಿಸಿವೆ.

ಅವರು ದೇಶ ಬಿಟ್ಟು ಓಡಿ ಹೋಗಿದ್ದಾರೆ. ಒಗ್ಗಟ್ಟಾಗಿ ಇರುವಂತೆ ಸಿರಿಯಾದ ಜನತೆಗೆ ಅವರು ಮನವಿ ಮಾಡಿದ್ದಾರೆ. ಸಿರಿಯಾದಲ್ಲಿ ಇನ್ನು ಮುಂದೆ ಯಾರೂ ಪ್ರಾಬಲ್ಯ ಸಾಧಿಸುವುದಿಲ್ಲ ಎಂದು ಅವರು ಹೇಳಿದರು. ಏತನ್ಮಧ್ಯೆ, ಡಮಾಸ್ಕಸ್‌ನಲ್ಲಿ ಸೇನೆಯ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬಶರ್ ಸರ್ಕಾರದ ವಿರುದ್ಧ ಜನರು ಪ್ರತಿಭಟನೆ ನಡೆಸುತ್ತಿದ್ದರು. ಡೌಮಾದಲ್ಲಿ ಅಸ್ಸಾದ್‌ನ ಪಡೆಗಳು ಇಬ್ಬರು ಪ್ರತಿಭಟನಾಕಾರರನ್ನು ಕೊಂದಿದ್ದಾರೆ.

ಸಿರಿಯಾದ ಅಧ್ಯಕ್ಷರ ಬ್ರಿಟಿಷ್ ಮೂಲದ ಪತ್ನಿ ಅಸ್ಮಾ ಅಲ್-ಅಸ್ಸಾದ್ ಕಳೆದ ವಾರ ತನ್ನ ಮೂರು ಮಕ್ಕಳೊಂದಿಗೆ ದೇಶದಿಂದ ಪಲಾಯನ ಮಾಡಿದ್ದಾರೆ. ರಷ್ಯಾ ಯಾವಾಗಲೂ ಸಿರಿಯಾಕ್ಕೆ ಸಹಾಯ ಮಾಡುತ್ತಿದೆ. ಆದರೆ ಪ್ರಸ್ತುತ ರಷ್ಯಾ ಉಕ್ರೇನ್ ವಿರುದ್ಧ ಯುದ್ಧದಲ್ಲಿದೆ, ಇದರಿಂದಾಗಿ ಪುಟಿನ್ ಮೊದಲಿನಂತೆ ಸಿರಿಯಾಕ್ಕೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ.

ಶನಿವಾರ ಒಂದೇ ದಿನದಲ್ಲಿ ಸಿರಿಯಾ ನಾಲ್ಕು ನಗರಗಳನ್ನು ಕಳೆದುಕೊಂಡಿತು. ದಾರಾ, ಕುನೀತ್ರಾ, ಸುವೈದಾ ಮತ್ತು ಹೋಮ್ಸ್ ಈಗ ಬಂಡುಕೋರರ ನಿಯಂತ್ರಣದಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ