AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಹಂಗಾಮಿ ರಾಯಭಾರಿಯನ್ನು ನೇಮಿಸಿದ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ

ತಾಲಿಬಾನ್ ಸರ್ಕಾರವು ಅಫ್ಘಾನಿನ ಇಕ್ರಮುದ್ದೀನ್ ಕಾಮಿಲ್ ಅವರನ್ನು ಭಾರತಕ್ಕೆ ಹಂಗಾಮಿ ರಾಯಭಾರಿಯಾಗಿ ನೇಮಿಸಿದೆ. ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯವು ಕಾಮಿಲ್ ಅವರ ನೇಮಕವನ್ನು ಪ್ರಕಟಿಸಿದೆ. ಇದನ್ನು ತಾಲಿಬಾನ್ ನಿಯಂತ್ರಿತ ಬಖ್ತರ್ ಸುದ್ದಿ ಸಂಸ್ಥೆ ಕೆಲವು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಭಾರತಕ್ಕೆ ಹಂಗಾಮಿ ರಾಯಭಾರಿಯನ್ನು ನೇಮಿಸಿದ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ
ಇಕ್ರಮುದ್ದಿನ್Image Credit source: Deccan Chronicle
ನಯನಾ ರಾಜೀವ್
|

Updated on:Nov 13, 2024 | 10:26 AM

Share

ತಾಲಿಬಾನ್ ಸರ್ಕಾರವು ಅಫ್ಘಾನಿನ ಇಕ್ರಮುದ್ದೀನ್ ಕಾಮಿಲ್ ಅವರನ್ನು ಭಾರತಕ್ಕೆ ಹಂಗಾಮಿ ರಾಯಭಾರಿಯಾಗಿ ನೇಮಿಸಿದೆ. ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯವು ಕಾಮಿಲ್ ಅವರ ನೇಮಕವನ್ನು ಪ್ರಕಟಿಸಿದೆ. ಇದನ್ನು ತಾಲಿಬಾನ್ ನಿಯಂತ್ರಿತ ಬಖ್ತರ್ ಸುದ್ದಿ ಸಂಸ್ಥೆ ಕೆಲವು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಈ ನೇಮಕಾತಿಯನ್ನು ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸಲು ಮತ್ತು ವಿದೇಶದಲ್ಲಿ ತನ್ನ ಅಸ್ತಿತ್ವವನ್ನು ಹೆಚ್ಚಿಸಲು ಕಾಬೂಲ್‌ನ ಪ್ರಯತ್ನವೆಂದು ಪರಿಗಣಿಸಲಾಗಿದೆ. ಕಾಮಿಲ್ ಅವರು ಅಂತರರಾಷ್ಟ್ರೀಯ ಕಾನೂನಿನಲ್ಲಿ ಪಿಎಚ್‌ಡಿ ಹೊಂದಿದ್ದಾರೆ ಮತ್ತು ಹಿಂದೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಭದ್ರತಾ ಸಹಕಾರ ಮತ್ತು ಗಡಿ ವ್ಯವಹಾರಗಳ ಇಲಾಖೆಯಲ್ಲಿ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಫ್ಘಾನಿಸ್ತಾನ ವ್ಯವಹಾರಗಳ ಮುಖ್ಯಸ್ಥರು ಇತ್ತೀಚೆಗೆ ತಾಲಿಬಾನ್‌ನ ಹಂಗಾಮಿ ರಕ್ಷಣಾ ಸಚಿವ ಮುಲ್ಲಾ ಮೊಹಮ್ಮದ್ ಯಾಕೋಬ್ ಅವರೊಂದಿಗೆ ಕಾಬೂಲ್‌ನಲ್ಲಿ ಮಾತುಕತೆ ನಡೆಸಿದ ಸಮಯದಲ್ಲಿ ಕಾಮಿಲ್‌ನ ಈ ನೇಮಕ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಮತ್ತಷ್ಟು ಓದಿ: ಅಫ್ಘಾನಿಸ್ತಾನದಲ್ಲಿ ಅಪರಾಧ ಪ್ರಮಾಣ ಶೇ.30ರಷ್ಟು ಕಡಿಮೆಯಾಗಿದೆಯಂತೆ!

ಅಫ್ಘಾನ್ ಕಾರ್ಯಾಚರಣೆಗಳಲ್ಲಿ ತಾಲಿಬಾನ್ ಆಳ್ವಿಕೆಯು ಬಂದ ನಂತರ, ಭಾರತದಲ್ಲಿ ರಾಜತಾಂತ್ರಿಕ ಸಿಬ್ಬಂದಿಗಳ ಉಪಸ್ಥಿತಿಯು ಅತ್ಯಲ್ಪವಾಗಿದೆ. ಅಶ್ರಫ್ ಘನಿ ಸರ್ಕಾರದಿಂದ ನೇಮಕಗೊಂಡ ಹೆಚ್ಚಿನ ರಾಜತಾಂತ್ರಿಕರು ಭಾರತವನ್ನು ತೊರೆದಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಸುಮಾರು 18.6 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಆರೋಪದ ಮೇಲೆ ಅಫ್ಘಾನಿಸ್ತಾನದ ಹಿರಿಯ ರಾಜತಾಂತ್ರಿಕ ಜಾಕಿಯಾ ವಾರ್ಡಕ್ ಅವರು ಮೇ ತಿಂಗಳಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಾರ್ಡಕ್ ಕಳೆದ ವರ್ಷ ನವೆಂಬರ್‌ನಲ್ಲಿ ನವದೆಹಲಿಯಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯ ಉಸ್ತುವಾರಿ ವಹಿಸಿಕೊಂಡರು, ಅಲ್ಲಿ ಅವರ ಹಿಂದಿನ ರಾಯಭಾರಿ ಫರೀದ್ ಮಮ್ನಾಜೈ ಯುಕೆಗೆ ತೆರಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:24 am, Wed, 13 November 24

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?