AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಯುದ್ಧ ಸನ್ನಿವೇಶ ಸೃಷ್ಟಿಸಿ, ಭಾರತವನ್ನು ಹೊಗಳಿದ ತಾಲಿಬಾನ್​..

Taliban Attack in Afghanistan: ಸದ್ಯ ಅಫ್ಘಾನಿಸ್ತಾನದಲ್ಲಿ ಯುದ್ಧಸನ್ನಿವೇಶ ಇದೆ. ತಾಲಿಬಾನ್​ ವ್ಯಾಪ್ತಿ ಹೆಚ್ಚುತ್ತಿದೆ. ಇದೇ ಹೊತ್ತಲ್ಲಿ ಹಲವು ದೇಶಗಳು, ಅಫ್ಘಾನ್​​ನಲ್ಲಿರುವ ತಮ್ಮ ರಾಯಭಾರಿ ಕಚೇರಿಗಳನ್ನು ಬಂದ್​ ಮಾಡಿವೆ.

ಅಫ್ಘಾನಿಸ್ತಾನದಲ್ಲಿ ಯುದ್ಧ ಸನ್ನಿವೇಶ ಸೃಷ್ಟಿಸಿ, ಭಾರತವನ್ನು ಹೊಗಳಿದ ತಾಲಿಬಾನ್​..
ಮಹಮ್ಮದ್​ ಸುಹೇಲ್​ ಶಹೀನ್
TV9 Web
| Updated By: Lakshmi Hegde|

Updated on:Aug 14, 2021 | 9:33 AM

Share

ದೆಹಲಿ: ಅಫ್ಘಾನಿಸ್ತಾನದಲ್ಲಿ ಈಗಾಗಲೇ 18 ಪ್ರಾಂತ್ಯಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡಿರುವ ತಾಲಿಬಾನ್​, ಇದೀಗ ಭಾರತವನ್ನು ಹೊಗಳಿಗೆ. ಯುದ್ಧ ಪೀಡಿತ ಅಫ್ಘಾನ್​ನ ಜನರಿಗೆ ಸಹಾಯ ಮಾಡುತ್ತಿರುವ ಮತ್ತು ಅಲ್ಲಿ ಆಗಿರುವ ಅವ್ಯವಸ್ಥೆಗಳನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿರುವ ಭಾರತದ ಕ್ರಮ ಶ್ಲಾಘನೀಯ ಎಂದು ತಾಲಿಬಾನ್​ ಹೇಳಿದೆ. ಎಎನ್​ಐ ಸುದ್ದಿಸಂಸ್ಥೆಯ ಜತೆ ಮಾತನಾಡಿದ ತಾಲಿಬಾನ್​ ವಕ್ತಾರ ಮಹಮ್ಮದ್​ ಸುಹೇಲ್​ ಶಹೀನ್​, ಭಾರತ ಅಫ್ಘಾನಿಸ್ತಾನ ಜನರಿಗೆ ಸಹಾಯ ಮಾಡುತ್ತಿದೆ. ಅಲ್ಲದೆ, ಈ ದೇಶದ ಅಭಿವೃದ್ಧಿ ಯೋಜನೆಗಳಿಗೆ ತುಂಬ ಸಹಕಾರ ನೀಡುತ್ತಿದೆ ಎಂದು ಹೇಳಿದ್ದಾರೆ.

ಭಾರತ ಅಫ್ಘಾನಿಸ್ತಾನಕ್ಕಾಗಿ ಅಣೆಕಟ್ಟು ನಿರ್ಮಾಣದಲ್ಲಿ ಸಹಕಾರ ನೀಡಿದೆ. ರಾಷ್ಟ್ರೀಯ ಮತ್ತು ಮೂಲಸೌಕರ್ಯಗಳಿಗೆ ಸಂಬಂಧಪಟ್ಟ ಯೋಜನೆಗಳ ಅನುಷ್ಠಾನಕ್ಕೆ ಬೆಂಬಲ ನೀಡಿದೆ. ಒಟ್ಟಾರೆ ಅಫ್ಘಾನಿಸ್ತಾನದ ಅಭಿವೃದ್ಧಿ, ಮರುನಿರ್ಮಾಣ ಮತ್ತು ಆರ್ಥಿಕ ಅಭಿವೃದ್ಧಿಗೆ ಭಾರತದ ಕೊಡುಗೆ ಅಪಾರ. ಅದೆಲ್ಲವನ್ನೂ ನಾವು ಶ್ಲಾಘಿಸಲೇಬೇಕಾಗಿದೆ ಎಂದು ಮಹಮ್ಮದ್​ ಸುಹೇಲ್​ ಶಹೀನ್ ತಿಳಿಸಿದ್ದಾರೆ.

ಪಾಕ್​ ಉಗ್ರರೊಂದಿಗೆ ನಂಟಿಲ್ಲ ತಾಲಿಬಾನ್​ ಹೋರಾಟಗಾರರು ಪಾಕಿಸ್ತಾನ ಮೂಲದ ಯಾವುದೇ ಉಗ್ರರೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸುಹೇಲ್​ ತಿಳಿಸಿದ್ದಾರೆ. ತಾಲಿಬಾನ್​ ಉಗ್ರರು ಪಾಕ್​ನ ಭಯೋತ್ಪಾದಕರೊಂದಿಗೆ ನಂಟು ಹೊಂದಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಆದರೆ ಇದು ಹುರುಳಿಲ್ಲದ ಆರೋಪ. ನಾವು ಪಾಕ್​ ಭಯೋತ್ಪಾದಕರ ಸಂಪರ್ಕ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯ ಅಫ್ಘಾನಿಸ್ತಾನದಲ್ಲಿ ಯುದ್ಧಸನ್ನಿವೇಶ ಇದೆ. ತಾಲಿಬಾನ್​ ವ್ಯಾಪ್ತಿ ಹೆಚ್ಚುತ್ತಿದೆ. ಇದೇ ಹೊತ್ತಲ್ಲಿ ಹಲವು ದೇಶಗಳು, ಅಫ್ಘಾನ್​​ನಲ್ಲಿರುವ ತಮ್ಮ ರಾಯಭಾರಿ ಕಚೇರಿಗಳನ್ನು ಬಂದ್​ ಮಾಡಿವೆ. ಯುಎಸ್, ಡೆನ್ಮಾರ್ಕ್​ ಸೇರಿ ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ಅಫ್ಘಾನ್​ನಲ್ಲಿರುವ ತಮ್ಮ ಜನರನ್ನು, ಧೂತಾವಾಸ ಸಿಬ್ಬಂದಿಯನ್ನು ವಾಪಸ್​ ಕರೆಸಿಕೊಳ್ಳುತ್ತಿವೆ. ಭಾರತದ ರಾಯಭಾರಿ ಕಚೇರಿ ಕೂಡ, ಇಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಿ ಎಂದು ಸೂಚನೆ ನೀಡಿದೆ.

ಇದನ್ನೂ ಓದಿ: ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ನರಕವಾಗಿದೆ ಅಫ್ಘಾನಿಸ್ತಾನ; ಆಟವಾಡುವ ಮಕ್ಕಳೂ ಇಲ್ಲಿ ತಾಲಿಬಾನ್ ಉಗ್ರರ ಲೈಂಗಿಕ ಕ್ರಿಯೆಗೆ ಮೀಸಲು!

Published On - 9:24 am, Sat, 14 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!