AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್ ಉಗ್ರರೂ ಸಾಮಾನ್ಯ ಪ್ರಜೆಗಳು, ಅವರನ್ನು ನಾವು ಹೇಗೆ ಕೊಲ್ಲಲು ಸಾಧ್ಯ?; ಪಾಕ್ ಪ್ರಧಾನಿ ಇಮ್ರಾನ್ ಖಾನ್

Pakistan PM Imran Khan: ನಾವು ತಾಲಿಬಾನ್ ಉಗ್ರರಿಗೆ ಆಶ್ರಯ ನೀಡುತ್ತಿದ್ದೇವೆ ಎಂಬುದಕ್ಕೆ ಯಾರಾದರೂ ಸಾಕ್ಷಿ ನೀಡಲು ಸಿದ್ಧರಿದ್ದಾರಾ? ತಾಲಿಬಾನಿಗರು ಸಾಮಾನ್ಯ ನಾಗರಿಕರು ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.

ತಾಲಿಬಾನ್ ಉಗ್ರರೂ ಸಾಮಾನ್ಯ ಪ್ರಜೆಗಳು, ಅವರನ್ನು ನಾವು ಹೇಗೆ ಕೊಲ್ಲಲು ಸಾಧ್ಯ?; ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್
TV9 Web
| Edited By: |

Updated on:Jul 29, 2021 | 2:17 PM

Share

ಇಸ್ಲಮಾಬಾದ್: ತಾಲಿಬಾನ್ ಉಗ್ರರ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅಫ್ಘಾನಿಸ್ತಾನದ (Afghanistan)  ಗಡಿಯಲ್ಲಿ ಸೇನೆ ಮತ್ತು ತಾಲಿಬಾನ್ (Taliban) ನಡುವಿನ ಸಂಘರ್ಷ ಇನ್ನೂ ನಿಂತಿಲ್ಲ. ತಾಲಿಬಾನ್​ನ ದಾಳಿಯಿಂದ ಅನೇಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ವಿಶ್ವದ ಅತಿ ಡೇಂಜರಸ್ ಉಗ್ರ ಸಂಘಟನೆಯಲ್ಲೊಂದಾದ ತಾಲಿಬಾನ್ ಉಗ್ರರಿಗೆ ಪಾಕಿಸ್ತಾನ (Pakistan) ಆಶ್ರಯ ನೀಡುತ್ತಿದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ (Pakistan Prime Minister Imran Khan) , ತಾಲಿಬಾನ್ ಎಂಬುದು ಯಾವುದೇ ಮಿಲಿಟರಿ ಸಂಘಟನೆಯಲ್ಲ, ಅವರೂ ನಮ್ಮಂತೆ ಸಾಮಾನ್ಯ ನಾಗರಿಕರು. ಅವರನ್ನು ಪಾಕಿಸ್ತಾನ ಹೊಡೆದುರುಳಿಸಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಪಿಬಿಎಸ್ ನ್ಯೂಸ್​ ಜೊತೆಗೆ ನಡೆದ ದೀರ್ಘ ಸಂದರ್ಶನದಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರಿಸಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಅಫ್ಘಾನಿಸ್ತಾನದ ವಿರುದ್ಧ ದಾಳಿ ನಡೆಸಲು ತಾಲಿಬಾನ್​ಗೆ ಪಾಕಿಸ್ತಾನ ಶಸ್ತ್ರಾಸ್ತ್ರ, ಹಣಕಾಸಿನ ಸಹಾಯ ನೀಡಿ, ಆಶ್ರಯ ನೀಡುತ್ತಿದೆ ಎಂಬ ಆರೋಪ ನಿರಾಧಾರ ಎಂದಿದ್ದಾರೆ. ನಾವು ತಾಲಿಬಾನ್ ಉಗ್ರರಿಗೆ ಆಶ್ರಯ ನೀಡುತ್ತಿದ್ದೇವೆ ಎಂಬುದಕ್ಕೆ ಯಾರಾದರೂ ಸಾಕ್ಷಿ ನೀಡಲು ಸಿದ್ಧರಿದ್ದಾರಾ? ವಿನಾಕಾರಣ ನಮ್ಮ ದೇಶದ ಮೇಲೆ ಆರೋಪ ಮಾಡುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪಾಕಿಸ್ತಾನದ ಗಡಿಯಲ್ಲಿ 3 ಮಿಲಿಯನ್ ಅಫ್ಘಾನಿಸ್ತಾನದ ಬಂದ ನಿರಾಶ್ರಿತರಿದ್ದಾರೆ. ಹೀಗಿರುವಾಗ ವೃಥಾ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಪಾಕಿಸ್ತಾನದ ಗಡಿಯಲ್ಲಿರುವ 3 ಮಿಲಿಯನ್ ಅಫ್ಘಾನಿಸ್ತಾನದ ವಲಸಿಗರ ಪೈಕಿ ಬಹುತೇಕರು ಪಶ್ತೂನ್ ಸಮುದಾಯದವರಾಗಿದ್ದಾರೆ. ತಾಲಿಬಾನ್ ಸಂಘಟನೆಯಲ್ಲಿ ಇರುವವರೂ ಅದೇ ಸಮುದಾಯದವರಾಗಿದ್ದಾರೆ. ತಾಲಿಬಾನ್ ಅನ್ನು ಒಂದು ಉಗ್ರ ಸಂಘಟನೆಯಂತೆ ಮಾತ್ರ ನೋಡಲಾಗುತ್ತಿದೆ. ಆದರೆ, ತಾಲಿಬಾನಿಗರಲ್ಲಿ ಅನೇಕರು ಸಾಮಾನ್ಯ ಜನರೂ ಇದ್ದಾರೆ. ಅವರನ್ನು ನಾವು ಹೊಡೆದುರುಳಿಸುವುದು ಸರಿಯೇ? ಅವರನ್ನು ಹೇಗೆ ಆತಂಕವಾದಿಗಳ ಪಟ್ಟಿಗೆ ಸೇರಿಸಲು ಸಾಧ್ಯ? ಅದು ತಪ್ಪಲ್ಲವೇ? ಎಂದು ಇಮ್ರಾನ್ ಖಾನ್ ಕೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನೂ ಓದಿ: ಖ್ಯಾತ ಹಾಸ್ಯ ನಟನ ಹತ್ಯೆಗೂ ಮುನ್ನ ಚಿತ್ರಹಿಂಸೆ ನೀಡಿದ ತಾಲಿಬಾನ್ ಉಗ್ರರು; ಶಾಕಿಂಗ್ ವಿಡಿಯೋ ವೈರಲ್

ಅಫ್ಘಾನಿಸ್ತಾನದ ಕಂದಹಾರ್​ನಲ್ಲಿ ಬಂದೂಕುಧಾರಿಗಳಿಂದ 100 ಕ್ಕೂ ಹೆಚ್ಚು ನಾಗರಿಕರ ಹತ್ಯೆ; ತಾಲೀಬಾನ್ ಕೃತ್ಯ ಎಂದ ಸರ್ಕಾರ

(Taliban are normal civilians how is Pakistan supposed to hunt them down asks Pakistan Prime Minister Imran Khan)

Published On - 2:10 pm, Thu, 29 July 21

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ