AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್ ಉಗ್ರರೂ ಸಾಮಾನ್ಯ ಪ್ರಜೆಗಳು, ಅವರನ್ನು ನಾವು ಹೇಗೆ ಕೊಲ್ಲಲು ಸಾಧ್ಯ?; ಪಾಕ್ ಪ್ರಧಾನಿ ಇಮ್ರಾನ್ ಖಾನ್

Pakistan PM Imran Khan: ನಾವು ತಾಲಿಬಾನ್ ಉಗ್ರರಿಗೆ ಆಶ್ರಯ ನೀಡುತ್ತಿದ್ದೇವೆ ಎಂಬುದಕ್ಕೆ ಯಾರಾದರೂ ಸಾಕ್ಷಿ ನೀಡಲು ಸಿದ್ಧರಿದ್ದಾರಾ? ತಾಲಿಬಾನಿಗರು ಸಾಮಾನ್ಯ ನಾಗರಿಕರು ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.

ತಾಲಿಬಾನ್ ಉಗ್ರರೂ ಸಾಮಾನ್ಯ ಪ್ರಜೆಗಳು, ಅವರನ್ನು ನಾವು ಹೇಗೆ ಕೊಲ್ಲಲು ಸಾಧ್ಯ?; ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್
TV9 Web
| Updated By: ಸುಷ್ಮಾ ಚಕ್ರೆ|

Updated on:Jul 29, 2021 | 2:17 PM

Share

ಇಸ್ಲಮಾಬಾದ್: ತಾಲಿಬಾನ್ ಉಗ್ರರ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅಫ್ಘಾನಿಸ್ತಾನದ (Afghanistan)  ಗಡಿಯಲ್ಲಿ ಸೇನೆ ಮತ್ತು ತಾಲಿಬಾನ್ (Taliban) ನಡುವಿನ ಸಂಘರ್ಷ ಇನ್ನೂ ನಿಂತಿಲ್ಲ. ತಾಲಿಬಾನ್​ನ ದಾಳಿಯಿಂದ ಅನೇಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ವಿಶ್ವದ ಅತಿ ಡೇಂಜರಸ್ ಉಗ್ರ ಸಂಘಟನೆಯಲ್ಲೊಂದಾದ ತಾಲಿಬಾನ್ ಉಗ್ರರಿಗೆ ಪಾಕಿಸ್ತಾನ (Pakistan) ಆಶ್ರಯ ನೀಡುತ್ತಿದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ (Pakistan Prime Minister Imran Khan) , ತಾಲಿಬಾನ್ ಎಂಬುದು ಯಾವುದೇ ಮಿಲಿಟರಿ ಸಂಘಟನೆಯಲ್ಲ, ಅವರೂ ನಮ್ಮಂತೆ ಸಾಮಾನ್ಯ ನಾಗರಿಕರು. ಅವರನ್ನು ಪಾಕಿಸ್ತಾನ ಹೊಡೆದುರುಳಿಸಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಪಿಬಿಎಸ್ ನ್ಯೂಸ್​ ಜೊತೆಗೆ ನಡೆದ ದೀರ್ಘ ಸಂದರ್ಶನದಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರಿಸಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಅಫ್ಘಾನಿಸ್ತಾನದ ವಿರುದ್ಧ ದಾಳಿ ನಡೆಸಲು ತಾಲಿಬಾನ್​ಗೆ ಪಾಕಿಸ್ತಾನ ಶಸ್ತ್ರಾಸ್ತ್ರ, ಹಣಕಾಸಿನ ಸಹಾಯ ನೀಡಿ, ಆಶ್ರಯ ನೀಡುತ್ತಿದೆ ಎಂಬ ಆರೋಪ ನಿರಾಧಾರ ಎಂದಿದ್ದಾರೆ. ನಾವು ತಾಲಿಬಾನ್ ಉಗ್ರರಿಗೆ ಆಶ್ರಯ ನೀಡುತ್ತಿದ್ದೇವೆ ಎಂಬುದಕ್ಕೆ ಯಾರಾದರೂ ಸಾಕ್ಷಿ ನೀಡಲು ಸಿದ್ಧರಿದ್ದಾರಾ? ವಿನಾಕಾರಣ ನಮ್ಮ ದೇಶದ ಮೇಲೆ ಆರೋಪ ಮಾಡುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪಾಕಿಸ್ತಾನದ ಗಡಿಯಲ್ಲಿ 3 ಮಿಲಿಯನ್ ಅಫ್ಘಾನಿಸ್ತಾನದ ಬಂದ ನಿರಾಶ್ರಿತರಿದ್ದಾರೆ. ಹೀಗಿರುವಾಗ ವೃಥಾ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಪಾಕಿಸ್ತಾನದ ಗಡಿಯಲ್ಲಿರುವ 3 ಮಿಲಿಯನ್ ಅಫ್ಘಾನಿಸ್ತಾನದ ವಲಸಿಗರ ಪೈಕಿ ಬಹುತೇಕರು ಪಶ್ತೂನ್ ಸಮುದಾಯದವರಾಗಿದ್ದಾರೆ. ತಾಲಿಬಾನ್ ಸಂಘಟನೆಯಲ್ಲಿ ಇರುವವರೂ ಅದೇ ಸಮುದಾಯದವರಾಗಿದ್ದಾರೆ. ತಾಲಿಬಾನ್ ಅನ್ನು ಒಂದು ಉಗ್ರ ಸಂಘಟನೆಯಂತೆ ಮಾತ್ರ ನೋಡಲಾಗುತ್ತಿದೆ. ಆದರೆ, ತಾಲಿಬಾನಿಗರಲ್ಲಿ ಅನೇಕರು ಸಾಮಾನ್ಯ ಜನರೂ ಇದ್ದಾರೆ. ಅವರನ್ನು ನಾವು ಹೊಡೆದುರುಳಿಸುವುದು ಸರಿಯೇ? ಅವರನ್ನು ಹೇಗೆ ಆತಂಕವಾದಿಗಳ ಪಟ್ಟಿಗೆ ಸೇರಿಸಲು ಸಾಧ್ಯ? ಅದು ತಪ್ಪಲ್ಲವೇ? ಎಂದು ಇಮ್ರಾನ್ ಖಾನ್ ಕೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನೂ ಓದಿ: ಖ್ಯಾತ ಹಾಸ್ಯ ನಟನ ಹತ್ಯೆಗೂ ಮುನ್ನ ಚಿತ್ರಹಿಂಸೆ ನೀಡಿದ ತಾಲಿಬಾನ್ ಉಗ್ರರು; ಶಾಕಿಂಗ್ ವಿಡಿಯೋ ವೈರಲ್

ಅಫ್ಘಾನಿಸ್ತಾನದ ಕಂದಹಾರ್​ನಲ್ಲಿ ಬಂದೂಕುಧಾರಿಗಳಿಂದ 100 ಕ್ಕೂ ಹೆಚ್ಚು ನಾಗರಿಕರ ಹತ್ಯೆ; ತಾಲೀಬಾನ್ ಕೃತ್ಯ ಎಂದ ಸರ್ಕಾರ

(Taliban are normal civilians how is Pakistan supposed to hunt them down asks Pakistan Prime Minister Imran Khan)

Published On - 2:10 pm, Thu, 29 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ