ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್

ಇಸ್ಲಾಂ ಪವಿತ್ರ ಕುರಾನ್​ಗೆ ಅಪಮಾನ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ಪ್ರಸಿದ್ಧ ಅಫ್ಘಾನ್ ಫ್ಯಾಷನ್ ಮಾಡೆಲ್ ಹಾಗೂ ಅವರ ಮೂರು ಸಹೋದ್ಯೋಗಿಗಳನ್ನು ತಾಲಿಬಾನ್ ಬಂಧನಕ್ಕೊಳಪಡಿಸಿದೆ.

ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್
TalibanImage Credit source: Associate Press
Follow us
| Updated By: ನಯನಾ ರಾಜೀವ್

Updated on: Jun 09, 2022 | 10:50 AM

ಇಸ್ಲಾಂ ಪವಿತ್ರ ಕುರಾನ್​ಗೆ ಅಪಮಾನ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ಪ್ರಸಿದ್ಧ ಅಫ್ಘಾನ್ ಫ್ಯಾಷನ್ ಮಾಡೆಲ್ ಹಾಗೂ ಅವರ ಮೂರು ಸಹೋದ್ಯೋಗಿಗಳನ್ನು ತಾಲಿಬಾನ್ ಬಂಧನಕ್ಕೊಳಪಡಿಸಿದೆ. ಯೂಟ್ಯೂಬ್ ಕ್ಲಿಪ್​ಗಳು, ಫ್ಯಾಶನ್​ ಶೋಗಳು ಹಾಗೂ ಮಾಡೆಲಿಂಗ್ ಈವೆಂಟ್​ಗಳಿಗೆ ಅಜ್ಮಲ್ ಹಖಕಿ ಪ್ರಸಿದ್ಧರಾಗಿದ್ದಾರೆ, ಇದೀಗ ಅವರನ್ನು ತಾಲಿಬಾನ್ ಬಂಧಿಸಿದೆ.

ಬಂಧನದ ಕುರಿತು ತಾಲಿಬಾನ್ ಗುಪ್ತಚರ ಸಂಸ್ಥೆ ಟ್ವಿಟ್ಟರ್​ನಲ್ಲಿ ವಿವಿಯೋ ಪೋಸ್ಟ್​ ಒಂದನ್ನು ಮಾಡಿದೆ. ಬಂಧನದ ನಂತರ ತಾಲಿಬಾನ್ ಹಖಕಿ ಮತ್ತು ಅವರ ಸಹೋದ್ಯೋಗಿಗಳ ವಿಡಿಯೋವನ್ನು ಬಿಡುಗಡೆ ಮಾಡಿದೆ. ಜೈಲು ಸಮವಸ್ತ್ರದಲ್ಲಿ ನಿಂತು ತಾಲಿಬಾನ್ ಸರ್ಕಾರ ಮತ್ತು ಧಾರ್ಮಿಕ ವಿದ್ವಾಂಸರಲ್ಲಿ ಹಖಕಿ ಕ್ಷಮೆ ಯಾಚಿಸಿದ್ದಾರೆ.

ಆ ಟ್ವೀಟ್ ಧಾರಿ ಭಾಷೆಯಲ್ಲಿದ್ದು, ಕುರಾನ್ ಪದ್ಯಗಳನ್ನು ಅಥವಾ ಪ್ರವಾದಿ ಮುಹಮ್ಮದ್ ಅವರ ಮಾತುಗಳನ್ನು ಅವಮಾನಿಸಲು ಯಾರಿಗೂ ಅವಕಾಶವಿಲ್ಲ ಎಂದು ಆ ವಿಡಿಯೋ ಪೋಸ್ಟ್​ನಲ್ಲಿ ತಾಲಿಬಾನ್ ಬರೆದಿದೆ.ಬುಧವಾರ ಅಮ್ನೆಸ್ಟಿ ಇಂಟರ್​ನ್ಯಾಷನಲ್ ಹಖಿಕಿ ಹಾಗೂ ಅವರ ಸಹೋದ್ಯೋಗಿಗಳನ್ನು ಬಿಡುಗಡೆ ಮಾಡುವಂತೆ ತಾಲಿಬಾನಿಗೆ ಒತ್ತಡ ಹೇರಿದ್ದರು.

ಅಮ್ನೆಸ್ಟಿ ಹೇಳಿಕೆ ಪ್ರಕಾರ, ತಾಲಿಬಾನ್ ಅಫ್ಘಾನಿಸ್ತಾನವನ್ನು ಯಾವಾಗ ತಮ್ಮ ಹಿಡಿತಕ್ಕೆ ತೆಗೆದುಕೊಂಡಿತ್ತೋ ಆಗಿನಿಂದ ಅಫ್ಘಾನಿಸ್ತಾನದಲ್ಲಿ ಕಿರುಕುಳ, ಹಿಂಸೆ ಹೆಚ್ಚಾಗಿದೆ. ಬಂಧನಕ್ಕೊಳಗಾದ ಕುಟುಂಬದವರೊಂದಿಗೆ ಮಾತುಕತೆ ಇನ್ನೂ ಸಾಧ್ಯವಾಗಿಲ್ಲ.

ಇತರೆ ವಿದೇಶಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ