AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taliban: ಪಾಕ್ ಸೇನೆ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ಒತ್ತೆಯಾಳಾಗಿರಿಸಿಕೊಂಡ ತಾಲಿಬಾನ್

ಪಾಕಿಸ್ತಾನ(Pakistan) ಸೇನೆಯ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ತಾಲಿಬಾನ್(Taliban) ಒತ್ತೆಯಾಳಾಗಿರಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Taliban: ಪಾಕ್ ಸೇನೆ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ಒತ್ತೆಯಾಳಾಗಿರಿಸಿಕೊಂಡ ತಾಲಿಬಾನ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 19, 2022 | 8:04 AM

Share

ಪಾಕಿಸ್ತಾನ(Pakistan) ಸೇನೆಯ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ತಾಲಿಬಾನ್(Taliban) ಒತ್ತೆಯಾಳಾಗಿರಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಸ್ಲಾಮಾಬಾದ್​ನ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಭಾನುವಾರ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಭಯೋತ್ಪಾದನಾ ನಿಗ್ರಹ ಇಲಾಖೆಯನ್ನು (ಸಿಟಿಡಿ) ಗುರಿಯಾಗಿಸಿಕೊಂಡಿದೆ. ಬನ್ನು ಕಂಟೋನ್ಮೆಂಟ್ ಸೆಂಟರ್​ನಲ್ಲಿ ನಡೆದ ಈ ದಾಳಿಯಲ್ಲಿ ಹಲವು ಪಾಕಿಸ್ತಾನಿ ಸೈನಿಕರು ಮತ್ತು CTD ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು CNN News18  ವರದಿ ಮಾಡಿದೆ, ಈ ದಾಳಿಯಲ್ಲಿ ತಾಲಿಬಾನ್ ಅನೇಕ ಸೈನಿಕರನ್ನು ಒತ್ತೆಯಾಳಾಗಿ ಇರಿಸಿದೆ. 9 ಯೋಧರು ಒತ್ತೆಯಾಳುಗಳಾಗಿದ್ದಾರೆ ಎಂದು ಭಯೋತ್ಪಾದಕರು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಲಾಗಿದೆ. 15-20 ಜನರನ್ನು ಒತ್ತೆಯಾಳಾಗಿಟ್ಟುಕೊಂಡು ಇಡೀ ಕಟ್ಟಡವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು ಎನ್ನಲಾಗಿದೆ.

ಮೂಲಗಳ ಪ್ರಕಾರ, ಟಿಟಿಪಿ ಸದಸ್ಯರು ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಮತ್ತೊಂದೆಡೆ, ಅವರು CTD ಪ್ರಧಾನ ಕಚೇರಿಯಿಂದ ವೀಡಿಯೊವನ್ನು ಸಹ ಬಿಡುಗಡೆ ಮಾಡಿದ್ದಾರೆ. ಸುಬೇದಾರ್ ಮೇಜರ್ ಖುರ್ಷಿದ್ ಅಕ್ರಮ್ ಸೇರಿ 8 ಯೋಧರನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನಕ್ಕೆ ತೆರಳಲು ಮಾರ್ಗವನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಅಫ್ಘಾನಿಸ್ತಾನದಲ್ಲಿ ಕೊಲೆ ಪ್ರಕರಣದ ಅಪರಾಧಿಗೆ ಸಾರ್ವಜನಿಕ ಮರಣದಂಡನೆ ವಿಧಿಸಿದ ತಾಲಿಬಾನ್

ಪ್ರಧಾನ ಕಚೇರಿಯ ಎಲ್ಲಾ ದೂರವಾಣಿ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ತಾಲಿಬಾನ್ ಭಯೋತ್ಪಾದಕರು ಕರಪತ್ರಗಳನ್ನು ಹಂಚುವ ಮೂಲಕ ಷರಿಯಾ ಕಾನೂನನ್ನು ಪಾಲಿಸುವಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ .

ಭಯೋತ್ಪಾದಕರು ಪಾಕ್ ಸೇನೆಯ ಮೇಲೆ ಮೋರ್ಟಾರ್ ಮತ್ತು ಮೆಷಿನ್​​ ಗನ್​ಗಳಿಂದ ದಾಳಿ ನಡೆಸಿದ್ದಾರೆ. ಚಮನ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಈ ದಾಳಿಯಲ್ಲಿ ಅನೇಕ ನಾಗರಿಕರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ. ಯುಎಸ್ ಸೆಂಟ್ರಲ್ ಕಮಾಂಡ್​ನ ಕಮಾಂಡರ್ ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿಗೆ ಭೇಟಿ ನೀಡುತ್ತಿದ್ದಾಗ ಈ ಘಟನೆ ನಡೆದಿದೆ.

ಪಾಕಿಸ್ತಾನದ ಮುಖ್ಯ ಸೇನಾ ಸಿಬ್ಬಂದಿ ಜನರಲ್ ಅಸಿಮ್ ಮುನೀರ್ ಅವರನ್ನು ಭೇಟಿಯಾದರು. ಇದೀಗ ಚಮನ್ ಗಡಿ ಪ್ರದೇಶವನ್ನು ಸ್ಥಳೀಯ ಆಡಳಿತ ತೆರವು ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ