AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!

2016 ಮೇ 21ರಂದು ಮನ್ಸೂರ್​​ನನ್ನು ಪಾಕಿಸ್ತಾನ-ಇರಾನ್​ ಗಡಿಯಲ್ಲಿ ಹೊಡೆದುರುಳಿಸಲಾಗಿತ್ತು. ಈತ 2015ರ ಜುಲೈ ತಿಂಗಳಿಂದ ತಾಲಿಬಾನ್​ ಅನ್ನು ಮುನ್ನಡೆಸುತ್ತಿದ್ದ.

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Dec 13, 2020 | 9:35 PM

Share

ಇಸ್ಲಾಮಾಬಾದ್: ಅಫ್ಗಾನಿಸ್ತಾನದ ಮುಖ್ಯಸ್ಥ ಮುಲ್ಲಾ ಅಖ್ತರ್​ ಮನ್ಸೂರ್ ಅಮೆರಿಕದ ಡ್ರೋನ್​ ದಾಳಿಯಲ್ಲಿ ಸಾಯುವುದಕ್ಕೂ ಮೊದಲು 3 ಲಕ್ಷ ರೂಪಾಯಿಗೆ ಜೀವವಿಮೆ ಖರೀದಿಸಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

2016 ಮೇ 21ರಂದು ಮನ್ಸೂರ್​​ನನ್ನು ಪಾಕಿಸ್ತಾನ-ಇರಾನ್​ ಗಡಿಯಲ್ಲಿ ಹೊಡೆದುರುಳಿಸಲಾಗಿತ್ತು. ಈತ 2015ರ ಜುಲೈ ತಿಂಗಳಿಂದ ತಾಲಿಬಾನ್​ ಅನ್ನು ಮುನ್ನಡೆಸುತ್ತಿದ್ದ. ಈತ ನಕಲಿ ಐಡಿ ನೀಡಿ ಪಾಕಿಸ್ತಾನದಲ್ಲಿ 3 ಲಕ್ಷ ರೂಪಾಯಿ ಜೀವ ವಿಮೆ ಖರೀದಿ ಮಾಡಿದ್ದ. ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ ಪ್ರಕರಣದ ತನಿಖೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.

ಮನ್ಸೂರ್​ ಜೀವ ವಿಮೆ ಖರೀದಿಸಿದ ವಿಚಾರಕ್ಕೆ ಸಂಬಂಧಿಸಿ ತನಿಖಾ ತಂಡ ವಿಮೆ ಕಂಪೆನಿಯವರನ್ನು ಸಂಪರ್ಕ ಮಾಡಿತ್ತು. ಆಮೂಲಾಗ್ರವಾಗಿ ತನಿಖೆ ಮಾಡಿದಾಗ ನಕಲಿ ಗುರುತಿನ ಚೀಟಿ ನೀಡಿ ವಿಮೆ ಪಡೆದಿದ್ದ ಎಂದು ಗೊತ್ತಾಗಿದೆ. ಈ ಹಣವನ್ನು ವಿಮಾ ಕಂಪನಿ ಸರ್ಕಾರಕ್ಕೆ ನೀಡಿದೆ.

ಘೋಷಣೆ ಮಾಡಿದ್ದ ಒಬಾಮ ಅಮೆರಿಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಬರಾಕ್​ ಒಬಾಮ 2016ರಲ್ಲಿ ಮನ್ಸೂರ್​ ಸತ್ತಿದ್ದನ್ನು ಖಚಿತಪಡಿಸಿದ್ದರು. ಮನ್ಸೂರ್​ ಬಲೂಚಿಸ್ತಾನದಲ್ಲಿ ಅಡಗಿದ್ದ. ಅಮೆರಿಕ ಆತನನ್ನು ಸಾಯಿಸಲು ಯಶಸ್ವಿಯಾಗಿದೆ ಎಂದು ಒಬಾಮ ಹೇಳಿದ್ದರು. ಪಾಕಿಸ್ತಾನ 2005ರಲ್ಲಿ ಈತನಿಗೆ ರಾಷ್ಟ್ರೀಯ ಗುರುತಿನ ಚೀಟಿ ನೀಡಿತ್ತು ಎನ್ನಲಾಗಿದೆ.

ಮಹಾರಾಷ್ಟ್ರವನ್ನು ‘ತಾಲಿಬಾನ್’​ಗೆ ಹೋಲಿಸಿದ ಕ್ವೀನಾ ಕಂಗನಾ

Published On - 9:22 pm, Sun, 13 December 20

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು