AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!

2016 ಮೇ 21ರಂದು ಮನ್ಸೂರ್​​ನನ್ನು ಪಾಕಿಸ್ತಾನ-ಇರಾನ್​ ಗಡಿಯಲ್ಲಿ ಹೊಡೆದುರುಳಿಸಲಾಗಿತ್ತು. ಈತ 2015ರ ಜುಲೈ ತಿಂಗಳಿಂದ ತಾಲಿಬಾನ್​ ಅನ್ನು ಮುನ್ನಡೆಸುತ್ತಿದ್ದ.

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Dec 13, 2020 | 9:35 PM

Share

ಇಸ್ಲಾಮಾಬಾದ್: ಅಫ್ಗಾನಿಸ್ತಾನದ ಮುಖ್ಯಸ್ಥ ಮುಲ್ಲಾ ಅಖ್ತರ್​ ಮನ್ಸೂರ್ ಅಮೆರಿಕದ ಡ್ರೋನ್​ ದಾಳಿಯಲ್ಲಿ ಸಾಯುವುದಕ್ಕೂ ಮೊದಲು 3 ಲಕ್ಷ ರೂಪಾಯಿಗೆ ಜೀವವಿಮೆ ಖರೀದಿಸಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

2016 ಮೇ 21ರಂದು ಮನ್ಸೂರ್​​ನನ್ನು ಪಾಕಿಸ್ತಾನ-ಇರಾನ್​ ಗಡಿಯಲ್ಲಿ ಹೊಡೆದುರುಳಿಸಲಾಗಿತ್ತು. ಈತ 2015ರ ಜುಲೈ ತಿಂಗಳಿಂದ ತಾಲಿಬಾನ್​ ಅನ್ನು ಮುನ್ನಡೆಸುತ್ತಿದ್ದ. ಈತ ನಕಲಿ ಐಡಿ ನೀಡಿ ಪಾಕಿಸ್ತಾನದಲ್ಲಿ 3 ಲಕ್ಷ ರೂಪಾಯಿ ಜೀವ ವಿಮೆ ಖರೀದಿ ಮಾಡಿದ್ದ. ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ ಪ್ರಕರಣದ ತನಿಖೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.

ಮನ್ಸೂರ್​ ಜೀವ ವಿಮೆ ಖರೀದಿಸಿದ ವಿಚಾರಕ್ಕೆ ಸಂಬಂಧಿಸಿ ತನಿಖಾ ತಂಡ ವಿಮೆ ಕಂಪೆನಿಯವರನ್ನು ಸಂಪರ್ಕ ಮಾಡಿತ್ತು. ಆಮೂಲಾಗ್ರವಾಗಿ ತನಿಖೆ ಮಾಡಿದಾಗ ನಕಲಿ ಗುರುತಿನ ಚೀಟಿ ನೀಡಿ ವಿಮೆ ಪಡೆದಿದ್ದ ಎಂದು ಗೊತ್ತಾಗಿದೆ. ಈ ಹಣವನ್ನು ವಿಮಾ ಕಂಪನಿ ಸರ್ಕಾರಕ್ಕೆ ನೀಡಿದೆ.

ಘೋಷಣೆ ಮಾಡಿದ್ದ ಒಬಾಮ ಅಮೆರಿಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಬರಾಕ್​ ಒಬಾಮ 2016ರಲ್ಲಿ ಮನ್ಸೂರ್​ ಸತ್ತಿದ್ದನ್ನು ಖಚಿತಪಡಿಸಿದ್ದರು. ಮನ್ಸೂರ್​ ಬಲೂಚಿಸ್ತಾನದಲ್ಲಿ ಅಡಗಿದ್ದ. ಅಮೆರಿಕ ಆತನನ್ನು ಸಾಯಿಸಲು ಯಶಸ್ವಿಯಾಗಿದೆ ಎಂದು ಒಬಾಮ ಹೇಳಿದ್ದರು. ಪಾಕಿಸ್ತಾನ 2005ರಲ್ಲಿ ಈತನಿಗೆ ರಾಷ್ಟ್ರೀಯ ಗುರುತಿನ ಚೀಟಿ ನೀಡಿತ್ತು ಎನ್ನಲಾಗಿದೆ.

ಮಹಾರಾಷ್ಟ್ರವನ್ನು ‘ತಾಲಿಬಾನ್’​ಗೆ ಹೋಲಿಸಿದ ಕ್ವೀನಾ ಕಂಗನಾ

Published On - 9:22 pm, Sun, 13 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ