AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!

2016 ಮೇ 21ರಂದು ಮನ್ಸೂರ್​​ನನ್ನು ಪಾಕಿಸ್ತಾನ-ಇರಾನ್​ ಗಡಿಯಲ್ಲಿ ಹೊಡೆದುರುಳಿಸಲಾಗಿತ್ತು. ಈತ 2015ರ ಜುಲೈ ತಿಂಗಳಿಂದ ತಾಲಿಬಾನ್​ ಅನ್ನು ಮುನ್ನಡೆಸುತ್ತಿದ್ದ.

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Dec 13, 2020 | 9:35 PM

Share

ಇಸ್ಲಾಮಾಬಾದ್: ಅಫ್ಗಾನಿಸ್ತಾನದ ಮುಖ್ಯಸ್ಥ ಮುಲ್ಲಾ ಅಖ್ತರ್​ ಮನ್ಸೂರ್ ಅಮೆರಿಕದ ಡ್ರೋನ್​ ದಾಳಿಯಲ್ಲಿ ಸಾಯುವುದಕ್ಕೂ ಮೊದಲು 3 ಲಕ್ಷ ರೂಪಾಯಿಗೆ ಜೀವವಿಮೆ ಖರೀದಿಸಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

2016 ಮೇ 21ರಂದು ಮನ್ಸೂರ್​​ನನ್ನು ಪಾಕಿಸ್ತಾನ-ಇರಾನ್​ ಗಡಿಯಲ್ಲಿ ಹೊಡೆದುರುಳಿಸಲಾಗಿತ್ತು. ಈತ 2015ರ ಜುಲೈ ತಿಂಗಳಿಂದ ತಾಲಿಬಾನ್​ ಅನ್ನು ಮುನ್ನಡೆಸುತ್ತಿದ್ದ. ಈತ ನಕಲಿ ಐಡಿ ನೀಡಿ ಪಾಕಿಸ್ತಾನದಲ್ಲಿ 3 ಲಕ್ಷ ರೂಪಾಯಿ ಜೀವ ವಿಮೆ ಖರೀದಿ ಮಾಡಿದ್ದ. ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ ಪ್ರಕರಣದ ತನಿಖೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.

ಮನ್ಸೂರ್​ ಜೀವ ವಿಮೆ ಖರೀದಿಸಿದ ವಿಚಾರಕ್ಕೆ ಸಂಬಂಧಿಸಿ ತನಿಖಾ ತಂಡ ವಿಮೆ ಕಂಪೆನಿಯವರನ್ನು ಸಂಪರ್ಕ ಮಾಡಿತ್ತು. ಆಮೂಲಾಗ್ರವಾಗಿ ತನಿಖೆ ಮಾಡಿದಾಗ ನಕಲಿ ಗುರುತಿನ ಚೀಟಿ ನೀಡಿ ವಿಮೆ ಪಡೆದಿದ್ದ ಎಂದು ಗೊತ್ತಾಗಿದೆ. ಈ ಹಣವನ್ನು ವಿಮಾ ಕಂಪನಿ ಸರ್ಕಾರಕ್ಕೆ ನೀಡಿದೆ.

ಘೋಷಣೆ ಮಾಡಿದ್ದ ಒಬಾಮ ಅಮೆರಿಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಬರಾಕ್​ ಒಬಾಮ 2016ರಲ್ಲಿ ಮನ್ಸೂರ್​ ಸತ್ತಿದ್ದನ್ನು ಖಚಿತಪಡಿಸಿದ್ದರು. ಮನ್ಸೂರ್​ ಬಲೂಚಿಸ್ತಾನದಲ್ಲಿ ಅಡಗಿದ್ದ. ಅಮೆರಿಕ ಆತನನ್ನು ಸಾಯಿಸಲು ಯಶಸ್ವಿಯಾಗಿದೆ ಎಂದು ಒಬಾಮ ಹೇಳಿದ್ದರು. ಪಾಕಿಸ್ತಾನ 2005ರಲ್ಲಿ ಈತನಿಗೆ ರಾಷ್ಟ್ರೀಯ ಗುರುತಿನ ಚೀಟಿ ನೀಡಿತ್ತು ಎನ್ನಲಾಗಿದೆ.

ಮಹಾರಾಷ್ಟ್ರವನ್ನು ‘ತಾಲಿಬಾನ್’​ಗೆ ಹೋಲಿಸಿದ ಕ್ವೀನಾ ಕಂಗನಾ

Published On - 9:22 pm, Sun, 13 December 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು