AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ಸರ್ಕಾರದ ಮಾಧ್ಯಮ-ಮಾಹಿತಿ ಕೇಂದ್ರದ ಉನ್ನತಾಧಿಕಾರಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು..

ಇತ್ತೀಚೆಗೆ ತಾಲಿಬಾನ್​ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಕಾದಾಟ ಹೆಚ್ಚಾಗಿದೆ. ಹಿಂಸಾಚಾರವೂ ಮಿತಿಮೀರಿದೆ. ಉಗ್ರರಿಂದ ರಾಕೆಟ್​ ದಾಳಿ ಅದಕ್ಕೆ ಪ್ರತಿಯಾಗಿ ವಾಯುಸೇನೆಗಳ ಏರ್​ಸ್ಟ್ರೈಕ್​ ನಡೆಯುತ್ತಲೇ ಇದೆ.

ಅಫ್ಘಾನಿಸ್ತಾನ ಸರ್ಕಾರದ ಮಾಧ್ಯಮ-ಮಾಹಿತಿ ಕೇಂದ್ರದ ಉನ್ನತಾಧಿಕಾರಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು..
ಮೃತ ಅಧಿಕಾರಿ
TV9 Web
| Edited By: |

Updated on: Aug 06, 2021 | 4:51 PM

Share

ಕಾಬೂಲ್​: ಅಫ್ಘಾನಿಸ್ತಾನ ಸರ್ಕಾರ (Afghanistan Government)ದ ಉನ್ನತ ಮಾಧ್ಯಮ ಮತ್ತು ಮಾಹಿತಿ ಅಧಿಕಾರಿಯನ್ನು ಕಾಬೂಲ್​​ನಲ್ಲಿ, ತಾಲಿಬಾನ್​ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಭಯೋತ್ಪಾದಕ ಸಂಘಟನೆಯ ವಕ್ತಾರ ತಿಳಿಸಿದ್ದಾರೆ. ಸರ್ಕಾರದ ಮಾಧ್ಯಮ ಮತ್ತು ಮಾಹಿತಿ ಕೇಂದ್ರ (GMIC) ಮುಖ್ಯಸ್ಥ ದವಾ ಖಾನ್​ ಮಿನಪಾಲ್​ ಹತ್ಯೆಯಾದ ಅಧಿಕಾರಿಯಾಗಿದ್ದಾರೆ. ಇವರು ಹತ್ಯೆಯಾಗಿದ್ದನ್ನು ಫೆಡರಲ್​ ಇಂಟೀರಿಯರ್​ ಸಚಿವಾಲಯ ಕೂಡ ದೃಢಪಡಿಸಿದೆ. ಆದರೆ ಹತ್ಯೆ ಮಾಡಿದ್ದು ಯಾರು ಎಂಬುದನ್ನು ಸಚಿವಾಲಯ ತಿಳಿಸಿಲ್ಲ.

ಮಿನಪಾಲ್​ ಅವರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್​ ಘನಿ ಅವರ ವಕ್ತಾರರಾಗಿಯೂ ಕೆಲಸ ಮಾಡಿದ್ದರು. ಮಿನಪಾಲ್​ ಇನ್ನೂ ಯುವಕನಾಗಿದ್ದು, ಶತ್ರುಗಳಿಗೆ ಸದಾ ದುಃಸ್ವಪ್ನದಂತೆ ಇದ್ದರು. ಅಫ್ಘಾನ್​ ಸರ್ಕಾರದ ಪ್ರಮುಖ ಬೆಂಬಲಿಗರಲ್ಲಿ ಒಬ್ಬರಾಗಿದ್ದರು ಎಂದು ಆಂತರಿಕ ಸಚಿವಾಲಯದ ವಕ್ತಾರ, ಮಿರ್ವೈಸ್​ ಸ್ಟಾನಿಕ್​ಜಾಯ್ ಹೇಳಿದ್ದಾರೆ.

ಇತ್ತೀಚೆಗೆ ತಾಲಿಬಾನ್​ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಕಾದಾಟ ಹೆಚ್ಚಾಗಿದೆ. ಹಿಂಸಾಚಾರವೂ ಮಿತಿಮೀರಿದೆ. ಉಗ್ರರಿಂದ ರಾಕೆಟ್​ ದಾಳಿ ಅದಕ್ಕೆ ಪ್ರತಿಯಾಗಿ ವಾಯುಸೇನೆಗಳ ಏರ್​ಸ್ಟ್ರೈಕ್​ ನಡೆಯುತ್ತಲೇ ಇದೆ. ಉದಾರವಾದ ಇಸ್ಲಾಮಿಕ್​ ಆಡಳಿತ ಬೆಂಬಲಿಸುವ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತರು, ಅಧಿಕಾರಶಾಹಿಗಳು, ನ್ಯಾಯಾಧೀಶರು ಮತ್ತು ಸಾರ್ವಜನಿಕ ವ್ಯಕ್ತಿಗಳನ್ನು ತಾಲಿಬಾನ್​ ಉಗ್ರರು ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ, ಮೈದಾನ್ ವಾರ್ಡಕ್ ಪ್ರಾಂತ್ಯದ ಸಯ್ಯದ್ ಜಿಲ್ಲಾ ಗವರ್ನರ್​​ನನ್ನೂ ಕೂಡ ತಾಲಿಬಾನ್ ಉಗ್ರರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಹೇಳುವ ಹಾಗೆ ರಾಮಮಂದಿರದ ಲೋಕಾರ್ಪಣೆ 2023 ರಲ್ಲಿ ಆಗುತ್ತದೆಯೇ?

57 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆಯೇ ಕೈಕೊಟ್ಟ ಮೋಟಾರ್! ಅಧಿಕಾರಿಗಳ ವಿರುದ್ಧ ಎಚ್ ಡಿ ರೇವಣ್ಣ ಗರಂ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ