AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಮ್ಸ್ ಮ್ಯಾಗಜಿನ್​ನ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಆಫ್ಘನ್ ಉಪಪ್ರಧಾನಿ ಮುಲ್ಲಾ ಅಬ್ದುಲ್ ಘನಿ ಬರಾದರ್ ಹೆಸರು!

ಟೈಮ್ಸ್​ ಮ್ಯಾಗಜಿನ್​ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಆಫ್ಘನ್​ನ ಉಪ ಪ್ರಧಾನಿ ಮುಲ್ಲಾ ಅಬ್ದುಲ್ ಘನಿ ಬರಾದರ್ ಹೆಸರು ಪಡೆದುಕೊಂಡಿದ್ದಾರೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಸಿಎಂ ಮಮತಾ. ಸೆರಂ ಇನ್ಸ್​ಟಿಟ್ಯೂಟ್​ ಮಾಲೀಕ ಆದಾರ್ ಪೂನಾವಾಲಾಗೆ ಸ್ಥಾನ ಸಿಕ್ಕಿದೆ. ,

ಟೈಮ್ಸ್ ಮ್ಯಾಗಜಿನ್​ನ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಆಫ್ಘನ್ ಉಪಪ್ರಧಾನಿ ಮುಲ್ಲಾ ಅಬ್ದುಲ್ ಘನಿ ಬರಾದರ್ ಹೆಸರು!
ಮುಲ್ಲಾ ಬರಾದಾರ್
Follow us
TV9 Web
| Updated By: ಆಯೇಷಾ ಬಾನು

Updated on:Sep 16, 2021 | 12:06 PM

ಟೈಮ್ ಮ್ಯಾಗಜೀನ್ 2021 ನೇ ಸಾಲಿನ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಜಾಗತಿಕ ಪಟ್ಟಿಯಲ್ಲಿ ತಾಲಿಬಾನ್‌ನ ಸಹ-ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರದಾರ್ ಸ್ಥಾನ ಪಡೆದುಕೊಂಡಿದ್ದಾರೆ. ಹಾಗೂ ಟೈಮ್ಸ್ ಮ್ಯಾಗಜೀನ್ ಪ್ರಭಾವಿಗಳ ಪಟ್ಟಿಯಲ್ಲಿ ಭಾರತೀಯರ ಹೆಸರೂ ಇದ್ದು ಪ್ರಧಾನಿ ನರೇಂದ್ರ ಮೋದಿ, ಸಿಎಂ ಮಮತಾ ಬ್ಯಾನರ್ಜಿ , SII ಆದಾರ್ ಪೂನಾವಲಾ ಟೈಮ್ಸ್ ಮ್ಯಾಗಜೀನ್ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಸ್ಥಾನ ಪಡೆದಿದ್ದಾರೆ.

ದೋಹಾದಲ್ಲಿರುವ ತಾಲಿಬಾನ್ ರಾಜಕೀಯ ಕಚೇರಿಯ ಮುಖ್ಯಸ್ಥ, ಮುಲ್ಲಾ ಬರದಾರ್, ತಾಲಿಬಾನ್ ಮತ್ತು ಯುಎಸ್ ನಡುವಿನ ದೋಹಾ ಶಾಂತಿ ಒಪ್ಪಂದದ ಬಗ್ಗೆ ಮಾತುಕತೆ ನಡೆಸಿದ ಕೀರ್ತಿಗೆ ಪಾತ್ರರಾಗಿದ್ದರು. ಅವರು ತಾಲಿಬಾನ್‌ನ ಸ್ಥಾಪಕ ಸದಸ್ಯರಾಗಿದ್ದಾರೆ ಮತ್ತು ಚಳುವಳಿಯ ಸಂಸ್ಥಾಪಕ ಮುಲ್ಲಾ ಒಮರ್ ಅವರ ನಿಕಟ ಸಹವರ್ತಿಯಾಗಿದ್ದರು. ಈ ತಿಂಗಳ ಆರಂಭದಲ್ಲಿ ತಾಲಿಬಾನ್‌ನ ಹೊಸ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಲ್ಲಾ ಅಖುಂದ್‌ಗೆ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರನ್ನು ಉಪ ಪ್ರಧಾನಿಯಾಗಿ ನೇಮಿಸಲಾಗಿದೆ.

ಪಾಕಿಸ್ತಾನಿ ಪತ್ರಕರ್ತ ಅಹ್ಮದ್ ರಶೀದ್, ಟೈಮ್ ಮ್ಯಾಗಜೀನ್ನಲ್ಲಿ ಅಫ್ಘಾನಿಸ್ತಾನದ ಭವಿಷ್ಯ ಎಂದು ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರನ್ನು ಹೊಗಳಿದ್ದಾರೆ. ಮುಲ್ಲಾ ಘನಿ ಬರದಾರ್ ಒಬ್ಬ ಶಾಂತ, ರಹಸ್ಯಗಳನ್ನು ಕಾಪಾಡುವ ವ್ಯಕ್ತಿ ಹಾಗೂ ಅಪರೂಪವಾಗಿ ಸಾರ್ವಜನಿಕ ಹೇಳಿಕೆಗಳನ್ನು ಅಥವಾ ಸಂದರ್ಶನಗಳನ್ನು ನೀಡುತ್ತಾನೆ. ಆದಾಗ್ಯೂ, ಬರದಾರ್ ತಾಲಿಬಾನ್‌ನಲ್ಲಿ ಹೆಚ್ಚು ಮಧ್ಯಮ ಪ್ರತಿನಿಧಿಸುತ್ತಿದ್ದಾರೆ, ಪಾಶ್ಚಿಮಾತ್ಯ ಬೆಂಬಲವನ್ನು ಗೆಲ್ಲಲು ಮತ್ತು ಅತ್ಯಂತ ಅಗತ್ಯವಾದ ಹಣಕಾಸಿನ ನೆರವು ಪಡೆಯಲು ಇದು ಅತ್ಯಂತ ಜನಪ್ರಿಯವಾಗಿದೆ ಎಂದು ಪತ್ರಕರ್ತ ಅಹ್ಮದ್ ರಶೀದ್, ಟೈಮ್ ಮ್ಯಾಗಜೀನ್ನಲ್ಲಿ ಹೊಗಳಿ ಬರೆದಿದ್ದಾರೆ.

ಇದನ್ನೂ ಓದಿ: ಅಫಘಾನಿಸ್ತಾನದ ಮುಂದಿನ ಅಧ್ಯಕ್ಷ ಮುಲ್ಲಾ ಅಬ್ದುಲ್ ಘನಿ ಬರಾದರ್ ಅಂತ ತಾಲಿಬಾನಿಗಳು ಹೇಳುತ್ತಿದ್ದಾರೆ!

Published On - 12:02 pm, Thu, 16 September 21

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್