AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯೋಮೆಟ್ರಿಕ್​​ ಡಿವೈಸ್​​ಗಳು ತಾಲಿಬಾನಿಗಳ ವಶಕ್ಕೆ; ಯುಎಸ್​ ಸರ್ಕಾರ, ಸೇನೆಗೆ ಸಹಾಯ ಮಾಡುತ್ತಿದ್ದ ಅಫ್ಘಾನಿಗಳಿಗೆ ಆತಂಕ

ಯುಎಸ್​​ ದಶಕಗಳ ಕಾಲ ಉಗ್ರರ ವಿರುದ್ಧ ನಡೆಸಿದ ಯುದ್ಧದಲ್ಲಿ ಈ ಬಯೋಮೆಟ್ರಿಕ್​ ಸಾಧನಗಳು ಪ್ರಮುಖ ಪಾತ್ರ ವಹಿಸಿದವುಗಳಾಗಿವೆ. 2011ರಲ್ಲಿ ಪಾಕಿಸ್ತಾನದಲ್ಲಿ ರೈಡ್​ ಮಾಡಿದಾಗ, ಒಸಮಾ ಬಿನ್​ ಲಾಡೆನ್​​ನ್ನು ಪತ್ತೆಹಚ್ಚಲೂ ಈ ಡಿವೈಸ್​​ಗಳೇ ಸಹಾಯ ಮಾಡಿದ್ದು.

ಬಯೋಮೆಟ್ರಿಕ್​​ ಡಿವೈಸ್​​ಗಳು ತಾಲಿಬಾನಿಗಳ ವಶಕ್ಕೆ; ಯುಎಸ್​ ಸರ್ಕಾರ, ಸೇನೆಗೆ ಸಹಾಯ ಮಾಡುತ್ತಿದ್ದ ಅಫ್ಘಾನಿಗಳಿಗೆ ಆತಂಕ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 19, 2021 | 12:06 PM

Share

ಇಡೀ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್​ ಉಗ್ರರು ಇದೀಗ ಯುಎಸ್​ ಸೇನೆ ಬಳಸುತ್ತಿದ್ದ ಬಯೋಮೆಟ್ರಿಕ್​ ಡಿವೈಸ್​​( Biometrics Devices)ಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದು ನಿಜಕ್ಕೂ ಆತಂಕ ತರುವ ವಿಚಾರವಾಗಿದೆ. ಯುಎಸ್​ ಸರ್ಕಾರಕ್ಕಾಗಿ ಮತ್ತು ಯುಎಸ್​-ಅಫ್ಘಾನ್​ ಎರಡೂ ಸೇನಾ ಪಡೆಗಳಿಗಾಗಿ ಕೆಲಸ ಮಾಡುತ್ತಿರುವ ಅಫ್ಘಾನ್​ ಪ್ರಜೆಗಳನ್ನು ಗುರುತಿಸಲು ಈ ಬಯೋಮೆಟ್ರಿಕ್​ ಉಪಕರಣಗಳ ಬಳಕೆ ಮಾಡಲಾಗುತ್ತಿತ್ತು. ಇದೀಗ ಈ ಡಿವೈಸ್​ ವಶಪಡಿಸಿಕೊಂಡಿರುವ ತಾಲಿಬಾನ್​ ಇದರಲ್ಲಿರುವ ಮಾಹಿತಿಯನ್ನು ಬಳಸಿಕೊಂಡು ಅಂಥ ಪ್ರಜೆಗಳ ಮೇಲೆ ಪ್ರತೀಕಾರ ತೆಗೆದುಕೊಳ್ಳಬಹುದು ಎಂಬ ಆತಂಕ ವ್ಯಕ್ತವಾಗಿದೆ.

ಬಯೋಮೆಟ್ರಿಕ್​ ಡಿವೈಸ್​​ಗಳ ಹೆಸರು HIIDE (Handheld Interagency Identity Detection Equipment). ಕಳೆದವಾರ ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​​ನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಆಕ್ರಮಣ ಮಾಡಿದ ಸಂದರ್ಭದಲ್ಲೇ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಡಿವೈಸ್​​ನಲ್ಲಿ ಯುಎಸ್​ ಸರ್ಕಾರ ಮತ್ತು ಎರಡೂ ಸೇನಾಪಡೆಗಳಿಗಾಗಿ ಕೆಲಸ ಮಾಡುತ್ತಿರುವ ಅಫ್ಘಾನ್​ ಜನರ ಐರಿಸ್​ ಸ್ಕ್ಯಾನ್ (ಕಣ್ಣಿನ ಸ್ಕ್ಯಾನ್​), ಫಿಂಗರ್​ಪ್ರಿಂಟ್ಸ್​ ಮತ್ತು ಅವರ ವೈಯಕ್ತಿಕ ಮಾಹಿತಿಗಳು ಇವೆ. ಹೀಗಾಗಿ ಉಗ್ರರು ಅಂಥವರ ಡೇಟಾಬೇಸ್​​ನ್ನು ಸಲೀಸಲಾಗಿ ಪಡೆಯಬಹುದಾಗಿದೆ.

ಯುಎಸ್​​ ದಶಕಗಳ ಕಾಲ ಉಗ್ರರ ವಿರುದ್ಧ ನಡೆಸಿದ ಯುದ್ಧದಲ್ಲಿ ಈ ಬಯೋಮೆಟ್ರಿಕ್​ ಸಾಧನಗಳು ಪ್ರಮುಖ ಪಾತ್ರ ವಹಿಸಿದವುಗಳಾಗಿವೆ. 2011ರಲ್ಲಿ ಪಾಕಿಸ್ತಾನದಲ್ಲಿ ರೈಡ್​ ಮಾಡಿದಾಗ, ಒಸಮಾ ಬಿನ್​ ಲಾಡೆನ್​​ನ್ನು ಪತ್ತೆಹಚ್ಚಲೂ ಈ ಡಿವೈಸ್​​ಗಳೇ ಸಹಾಯ ಮಾಡಿದ್ದು. ಆದರೆ ಈ ಡಿವೈಸ್​​​ನ್ನು ಅಫ್ಘಾನಿಸ್ತಾನದ ಶೇ.80ರಷ್ಟು ಅಂದರೆ 25 ಮಿಲಿಯನ್​ ಜನರ ಬಯೋಮೆಟ್ರಿಕ್​ ಡಾಟಾ ಸಂಗ್ರಹ ಮಾಡಲು ಬಳಕೆ ಮಾಡಲಾಗುತ್ತಿತ್ತು ಎಂದೂ ವರದಿಯಾಗಿದೆ. ಒಟ್ಟಾರೆ ತಾಲಿಬಾನ್​ ಉಗ್ರರ ವಿರುದ್ಧ ಹೋರಾಟಕ್ಕೆ ಯುಎಸ್​ ಮತ್ತು ಅಫ್ಘಾನ್​ ಸೇನೆಗೆ ಸಹಾಯ ಮಾಡಿದ ಪ್ರತಿಯೊಬ್ಬರ ಮಾಹಿತಿಯೂ ಇದರಲ್ಲಿದ್ದು, ಅದನ್ನೇ ಇಟ್ಟುಕೊಂಡು ಉಗ್ರರು ಮತ್ತಷ್ಟು ಕ್ರೌರ್ಯ ಮೆರೆಯಬಹುದು ಎಂಬ ಆತಂಕ ಶುರುವಾಗಿದೆ.

ಇದನ್ನೂ ಓದಿ: ಕಾಬೂಲ್​ನಿಂದ ಭಾರತಕ್ಕೆ ಮರಳಿದ ಐಟಿಬಿಪಿ ಸ್ನಿಫರ್ ಶ್ವಾನಗಳು

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ; ಬಡವ, ಶ್ರೀಮಂತ ಕಾರಣ ಕೊಡುತ್ತಿರುವ ಆರೋಪಿಗಳು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ