ತಾಲಿಬಾನ್ ಕಬ್ಜಕ್ಕೆ ಕಾಬೂಲ್: ಉಗ್ರಗಾಮಿಗಳಿಂದ ಅಧಿಕೃತ ಹೇಳಿಕೆ, ಅಫ್ಗಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ

ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಫ್ಗನ್ ಅಧ್ಯಕ್ಷ ಅಶ್ರಫ್ ಘನಿ ತರಾತುರಿಯಲ್ಲಿ ದೇಶ ತೊರೆದಿದ್ದಾರೆ. ಅವರು ತಜಕಿಸ್ತಾನದಲ್ಲಿ ಆಶ್ರಯ ಪಡೆದಿರಬಹುದು ಎಂದು ಹೇಳಲಾಗಿದೆ.

ತಾಲಿಬಾನ್ ಕಬ್ಜಕ್ಕೆ ಕಾಬೂಲ್: ಉಗ್ರಗಾಮಿಗಳಿಂದ ಅಧಿಕೃತ ಹೇಳಿಕೆ, ಅಫ್ಗಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ
ತಾಲಿಬಾನ್ ಉಗ್ರರು (ಪ್ರಾತಿನಿಧಿಕ ಚಿತ್ರ)
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 15, 2021 | 8:59 PM

ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್​ ನಗರವನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ. ಹಂಗಾಮಿ ಸರ್ಕಾರ ರಚನೆ, ಸುಸೂತ್ರ ಅಧಿಕಾರ ಹಸ್ತಾಂತರದ ನಂತರ ತಾಲಿಬಾನಿಗಳು ದೇಶವನ್ನು ವಶಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಫ್ಗನ್ ಅಧ್ಯಕ್ಷ ಅಶ್ರಫ್ ಘನಿ ತರಾತುರಿಯಲ್ಲಿ ದೇಶ ತೊರೆದಿದ್ದಾರೆ. ಅವರು ತಜಕಿಸ್ತಾನದಲ್ಲಿ ಆಶ್ರಯ ಪಡೆದಿರಬಹುದು ಎಂದು ಹೇಳಲಾಗಿದೆ. ಈ ನಡುವೆ ತಾಲಿಬಾನಿಗಳು ಕಾಬೂಲ್ ನಗರವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿರುವ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಫ್ಗಾನಿಸ್ತಾನದ ಸುದ್ದಿಸಂಸ್ಥೆ ಟೊಕೊ, ಅಧ್ಯಕ್ಷ ಘನಿ ದೇಶದಿಂದ ತೆರಳಿರುವುದನ್ನು ಟ್ವೀಟ್ ಮೂಲಕ ದೃಢಪಡಿಸಿದೆ. ಇಬ್ಬರು ವಿಶ್ವಾಸಾರ್ಹ ವ್ಯಕ್ತಿಗಳು ಈ ವಿಚಾರ ಖಚಿತಪಡಿಸಿರುವಾಗಿಯೂ ಟೊಕೊ ಹೇಳಿದೆ. ಆದರೆ ಘನಿ ಎಲ್ಲಿಗೆ ಹೋಗಿದ್ದಾರೆ ಎಂಬ ಬಗ್ಗೆ ಟೊಕೊ ಸುದ್ದಿಸಂಸ್ಥೆ ಯಾವುದೇ ಮಾಹಿತಿ ನೀಡಿಲ್ಲ.

ಅಫ್ಗನ್ ಸರ್ಕಾರದಲ್ಲಿ ಉನ್ನತ ಸ್ಥಾನದಲ್ಲಿರುವ ಅಬ್ದುಲ್ಲಾ ಅಬ್ದುಲ್ಲಾ ಸಹ ಘನಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಾಗೂ ದೇಶ ಬಿಟ್ಟಿರುವುದನ್ನು ದೃಢಪಡಿಸಿದ್ದಾರೆ. ಘನಿ ಅವರನ್ನು ಸಂಬೋಧಿಸುವಾಗ ಮಾಜಿ ಅಧ್ಯಕ್ಷ ಎಂದು ಹೇಳಿದ್ದಾರೆ. ಅಫ್ಗನ್ ಭದ್ರತಾ ಪಡೆಗಳ ಸಿಬ್ಬಂದಿ ಅಧಿಕಾರ ಹಸ್ತಾಂತರ ಸುಸೂತ್ರವಾಗಿ ನಡೆಯಲು ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

ಕಾಬೂಲ್​ ನಗರದಲ್ಲಿ ಹಿಂಸಾಚಾರ ನಡೆಸುವುದಿಲ್ಲ, ನಗರದೊಳಗೆ ನುಗ್ಗುವುದಿಲ್ಲ ಎಂದು ಹೇಳಿದ್ದ ತಾಲಿಬಾನ್ ಉಗ್ರರು ಕಾಬೂಲ್‌ನಲ್ಲಿ ಸೇನಾ ಹೊರಠಾಣೆ ವಶಕ್ಕೆ ಪಡೆದುಕೊಂಡಿದ್ದಾರೆ.

ಅಮೆರಿಕ ಕಾಬೂಲ್​ನ ರಾಜತಾಂತ್ರಿಕ ಸಿಬ್ಬಂದಿಯನ್ನು ಸ್ವದೇಶಕ್ಕೆ ಕರೆದೊಯ್ಯುತ್ತಿದೆ. ಅಮೆರಿಕ ದೂತಾವಾಸದಿಂದ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಟಿವಿ ಚಿತ್ರಾವಳಿಗಳಲ್ಲಿ ಹೆಲಿಕಾಪ್ಟರ್ ಹಾರಾಟ ಎದ್ದು ಕಾಣುವಂತಿತ್ತು.

(Taliban took control of Kabul official release by terrorists)

ಇದನ್ನೂ ಓದಿ: ಅಫ್ಗಾನಿಸ್ತಾನದ ಅಭಿವೃದ್ಧಿಗೆ ಭಾರತ ಖರ್ಚು ಮಾಡಿತ್ತು 2 ಲಕ್ಷ ಕೋಟಿ ರೂಪಾಯಿ: ಏನಾಗಲಿದೆ ಅದರ ಭವಿಷ್ಯ?

ಇದನ್ನೂ ಓದಿ: ಕಾಬೂಲ್ ಪತನ: ಮತ್ತೆ ತಾಲೀಬಾನ್ ವಶಕ್ಕೆ ಅಫ್ಗಾನಿಸ್ತಾನ, ಮುಲ್ಲಾ ಅಬ್ದುಲ್ ನೂತನ ಅಧ್ಯಕ್ಷ

Published On - 8:29 pm, Sun, 15 August 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ