AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್ ಕಬ್ಜಕ್ಕೆ ಕಾಬೂಲ್: ಉಗ್ರಗಾಮಿಗಳಿಂದ ಅಧಿಕೃತ ಹೇಳಿಕೆ, ಅಫ್ಗಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ

ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಫ್ಗನ್ ಅಧ್ಯಕ್ಷ ಅಶ್ರಫ್ ಘನಿ ತರಾತುರಿಯಲ್ಲಿ ದೇಶ ತೊರೆದಿದ್ದಾರೆ. ಅವರು ತಜಕಿಸ್ತಾನದಲ್ಲಿ ಆಶ್ರಯ ಪಡೆದಿರಬಹುದು ಎಂದು ಹೇಳಲಾಗಿದೆ.

ತಾಲಿಬಾನ್ ಕಬ್ಜಕ್ಕೆ ಕಾಬೂಲ್: ಉಗ್ರಗಾಮಿಗಳಿಂದ ಅಧಿಕೃತ ಹೇಳಿಕೆ, ಅಫ್ಗಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ
ತಾಲಿಬಾನ್ ಉಗ್ರರು (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Aug 15, 2021 | 8:59 PM

Share

ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್​ ನಗರವನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ. ಹಂಗಾಮಿ ಸರ್ಕಾರ ರಚನೆ, ಸುಸೂತ್ರ ಅಧಿಕಾರ ಹಸ್ತಾಂತರದ ನಂತರ ತಾಲಿಬಾನಿಗಳು ದೇಶವನ್ನು ವಶಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಫ್ಗನ್ ಅಧ್ಯಕ್ಷ ಅಶ್ರಫ್ ಘನಿ ತರಾತುರಿಯಲ್ಲಿ ದೇಶ ತೊರೆದಿದ್ದಾರೆ. ಅವರು ತಜಕಿಸ್ತಾನದಲ್ಲಿ ಆಶ್ರಯ ಪಡೆದಿರಬಹುದು ಎಂದು ಹೇಳಲಾಗಿದೆ. ಈ ನಡುವೆ ತಾಲಿಬಾನಿಗಳು ಕಾಬೂಲ್ ನಗರವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿರುವ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಫ್ಗಾನಿಸ್ತಾನದ ಸುದ್ದಿಸಂಸ್ಥೆ ಟೊಕೊ, ಅಧ್ಯಕ್ಷ ಘನಿ ದೇಶದಿಂದ ತೆರಳಿರುವುದನ್ನು ಟ್ವೀಟ್ ಮೂಲಕ ದೃಢಪಡಿಸಿದೆ. ಇಬ್ಬರು ವಿಶ್ವಾಸಾರ್ಹ ವ್ಯಕ್ತಿಗಳು ಈ ವಿಚಾರ ಖಚಿತಪಡಿಸಿರುವಾಗಿಯೂ ಟೊಕೊ ಹೇಳಿದೆ. ಆದರೆ ಘನಿ ಎಲ್ಲಿಗೆ ಹೋಗಿದ್ದಾರೆ ಎಂಬ ಬಗ್ಗೆ ಟೊಕೊ ಸುದ್ದಿಸಂಸ್ಥೆ ಯಾವುದೇ ಮಾಹಿತಿ ನೀಡಿಲ್ಲ.

ಅಫ್ಗನ್ ಸರ್ಕಾರದಲ್ಲಿ ಉನ್ನತ ಸ್ಥಾನದಲ್ಲಿರುವ ಅಬ್ದುಲ್ಲಾ ಅಬ್ದುಲ್ಲಾ ಸಹ ಘನಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಾಗೂ ದೇಶ ಬಿಟ್ಟಿರುವುದನ್ನು ದೃಢಪಡಿಸಿದ್ದಾರೆ. ಘನಿ ಅವರನ್ನು ಸಂಬೋಧಿಸುವಾಗ ಮಾಜಿ ಅಧ್ಯಕ್ಷ ಎಂದು ಹೇಳಿದ್ದಾರೆ. ಅಫ್ಗನ್ ಭದ್ರತಾ ಪಡೆಗಳ ಸಿಬ್ಬಂದಿ ಅಧಿಕಾರ ಹಸ್ತಾಂತರ ಸುಸೂತ್ರವಾಗಿ ನಡೆಯಲು ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

ಕಾಬೂಲ್​ ನಗರದಲ್ಲಿ ಹಿಂಸಾಚಾರ ನಡೆಸುವುದಿಲ್ಲ, ನಗರದೊಳಗೆ ನುಗ್ಗುವುದಿಲ್ಲ ಎಂದು ಹೇಳಿದ್ದ ತಾಲಿಬಾನ್ ಉಗ್ರರು ಕಾಬೂಲ್‌ನಲ್ಲಿ ಸೇನಾ ಹೊರಠಾಣೆ ವಶಕ್ಕೆ ಪಡೆದುಕೊಂಡಿದ್ದಾರೆ.

ಅಮೆರಿಕ ಕಾಬೂಲ್​ನ ರಾಜತಾಂತ್ರಿಕ ಸಿಬ್ಬಂದಿಯನ್ನು ಸ್ವದೇಶಕ್ಕೆ ಕರೆದೊಯ್ಯುತ್ತಿದೆ. ಅಮೆರಿಕ ದೂತಾವಾಸದಿಂದ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಟಿವಿ ಚಿತ್ರಾವಳಿಗಳಲ್ಲಿ ಹೆಲಿಕಾಪ್ಟರ್ ಹಾರಾಟ ಎದ್ದು ಕಾಣುವಂತಿತ್ತು.

(Taliban took control of Kabul official release by terrorists)

ಇದನ್ನೂ ಓದಿ: ಅಫ್ಗಾನಿಸ್ತಾನದ ಅಭಿವೃದ್ಧಿಗೆ ಭಾರತ ಖರ್ಚು ಮಾಡಿತ್ತು 2 ಲಕ್ಷ ಕೋಟಿ ರೂಪಾಯಿ: ಏನಾಗಲಿದೆ ಅದರ ಭವಿಷ್ಯ?

ಇದನ್ನೂ ಓದಿ: ಕಾಬೂಲ್ ಪತನ: ಮತ್ತೆ ತಾಲೀಬಾನ್ ವಶಕ್ಕೆ ಅಫ್ಗಾನಿಸ್ತಾನ, ಮುಲ್ಲಾ ಅಬ್ದುಲ್ ನೂತನ ಅಧ್ಯಕ್ಷ

Published On - 8:29 pm, Sun, 15 August 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು