AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್ ಕಬ್ಜಕ್ಕೆ ಕಾಬೂಲ್: ಉಗ್ರಗಾಮಿಗಳಿಂದ ಅಧಿಕೃತ ಹೇಳಿಕೆ, ಅಫ್ಗಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ

ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಫ್ಗನ್ ಅಧ್ಯಕ್ಷ ಅಶ್ರಫ್ ಘನಿ ತರಾತುರಿಯಲ್ಲಿ ದೇಶ ತೊರೆದಿದ್ದಾರೆ. ಅವರು ತಜಕಿಸ್ತಾನದಲ್ಲಿ ಆಶ್ರಯ ಪಡೆದಿರಬಹುದು ಎಂದು ಹೇಳಲಾಗಿದೆ.

ತಾಲಿಬಾನ್ ಕಬ್ಜಕ್ಕೆ ಕಾಬೂಲ್: ಉಗ್ರಗಾಮಿಗಳಿಂದ ಅಧಿಕೃತ ಹೇಳಿಕೆ, ಅಫ್ಗಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ
ತಾಲಿಬಾನ್ ಉಗ್ರರು (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Aug 15, 2021 | 8:59 PM

Share

ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್​ ನಗರವನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ. ಹಂಗಾಮಿ ಸರ್ಕಾರ ರಚನೆ, ಸುಸೂತ್ರ ಅಧಿಕಾರ ಹಸ್ತಾಂತರದ ನಂತರ ತಾಲಿಬಾನಿಗಳು ದೇಶವನ್ನು ವಶಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಫ್ಗನ್ ಅಧ್ಯಕ್ಷ ಅಶ್ರಫ್ ಘನಿ ತರಾತುರಿಯಲ್ಲಿ ದೇಶ ತೊರೆದಿದ್ದಾರೆ. ಅವರು ತಜಕಿಸ್ತಾನದಲ್ಲಿ ಆಶ್ರಯ ಪಡೆದಿರಬಹುದು ಎಂದು ಹೇಳಲಾಗಿದೆ. ಈ ನಡುವೆ ತಾಲಿಬಾನಿಗಳು ಕಾಬೂಲ್ ನಗರವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿರುವ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಫ್ಗಾನಿಸ್ತಾನದ ಸುದ್ದಿಸಂಸ್ಥೆ ಟೊಕೊ, ಅಧ್ಯಕ್ಷ ಘನಿ ದೇಶದಿಂದ ತೆರಳಿರುವುದನ್ನು ಟ್ವೀಟ್ ಮೂಲಕ ದೃಢಪಡಿಸಿದೆ. ಇಬ್ಬರು ವಿಶ್ವಾಸಾರ್ಹ ವ್ಯಕ್ತಿಗಳು ಈ ವಿಚಾರ ಖಚಿತಪಡಿಸಿರುವಾಗಿಯೂ ಟೊಕೊ ಹೇಳಿದೆ. ಆದರೆ ಘನಿ ಎಲ್ಲಿಗೆ ಹೋಗಿದ್ದಾರೆ ಎಂಬ ಬಗ್ಗೆ ಟೊಕೊ ಸುದ್ದಿಸಂಸ್ಥೆ ಯಾವುದೇ ಮಾಹಿತಿ ನೀಡಿಲ್ಲ.

ಅಫ್ಗನ್ ಸರ್ಕಾರದಲ್ಲಿ ಉನ್ನತ ಸ್ಥಾನದಲ್ಲಿರುವ ಅಬ್ದುಲ್ಲಾ ಅಬ್ದುಲ್ಲಾ ಸಹ ಘನಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಾಗೂ ದೇಶ ಬಿಟ್ಟಿರುವುದನ್ನು ದೃಢಪಡಿಸಿದ್ದಾರೆ. ಘನಿ ಅವರನ್ನು ಸಂಬೋಧಿಸುವಾಗ ಮಾಜಿ ಅಧ್ಯಕ್ಷ ಎಂದು ಹೇಳಿದ್ದಾರೆ. ಅಫ್ಗನ್ ಭದ್ರತಾ ಪಡೆಗಳ ಸಿಬ್ಬಂದಿ ಅಧಿಕಾರ ಹಸ್ತಾಂತರ ಸುಸೂತ್ರವಾಗಿ ನಡೆಯಲು ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

ಕಾಬೂಲ್​ ನಗರದಲ್ಲಿ ಹಿಂಸಾಚಾರ ನಡೆಸುವುದಿಲ್ಲ, ನಗರದೊಳಗೆ ನುಗ್ಗುವುದಿಲ್ಲ ಎಂದು ಹೇಳಿದ್ದ ತಾಲಿಬಾನ್ ಉಗ್ರರು ಕಾಬೂಲ್‌ನಲ್ಲಿ ಸೇನಾ ಹೊರಠಾಣೆ ವಶಕ್ಕೆ ಪಡೆದುಕೊಂಡಿದ್ದಾರೆ.

ಅಮೆರಿಕ ಕಾಬೂಲ್​ನ ರಾಜತಾಂತ್ರಿಕ ಸಿಬ್ಬಂದಿಯನ್ನು ಸ್ವದೇಶಕ್ಕೆ ಕರೆದೊಯ್ಯುತ್ತಿದೆ. ಅಮೆರಿಕ ದೂತಾವಾಸದಿಂದ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಟಿವಿ ಚಿತ್ರಾವಳಿಗಳಲ್ಲಿ ಹೆಲಿಕಾಪ್ಟರ್ ಹಾರಾಟ ಎದ್ದು ಕಾಣುವಂತಿತ್ತು.

(Taliban took control of Kabul official release by terrorists)

ಇದನ್ನೂ ಓದಿ: ಅಫ್ಗಾನಿಸ್ತಾನದ ಅಭಿವೃದ್ಧಿಗೆ ಭಾರತ ಖರ್ಚು ಮಾಡಿತ್ತು 2 ಲಕ್ಷ ಕೋಟಿ ರೂಪಾಯಿ: ಏನಾಗಲಿದೆ ಅದರ ಭವಿಷ್ಯ?

ಇದನ್ನೂ ಓದಿ: ಕಾಬೂಲ್ ಪತನ: ಮತ್ತೆ ತಾಲೀಬಾನ್ ವಶಕ್ಕೆ ಅಫ್ಗಾನಿಸ್ತಾನ, ಮುಲ್ಲಾ ಅಬ್ದುಲ್ ನೂತನ ಅಧ್ಯಕ್ಷ

Published On - 8:29 pm, Sun, 15 August 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು