ನಸ್ರಲ್ಲಾ ನಂತರ, ಇಸ್ರೇಲ್ ರಕ್ಷಣಾ ಪಡೆಯ ಮುಂದಿನ ಗುರಿ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ?

ಕಳೆದ ವಾರ ಇರಾನ್‌ನ ನಿಕಟ ಮಿತ್ರ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಇಸ್ರೇಲ್ ಹತ್ಯೆ ಮಾಡಿದ ನಂತರ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ನಸ್ರಲ್ಲಾ ನಂತರ, ಇಸ್ರೇಲ್ ರಕ್ಷಣಾ ಪಡೆಯ (IDF) ಮುಂದಿನ ಗುರಿ ಖಮೇನಿ ಆಗಿರುತ್ತದೆ ಎಂಬ ಊಹಾಪೋಹಗಳ ನಡುವೆ ಇದು ಬಂದಿದೆ.

ನಸ್ರಲ್ಲಾ ನಂತರ, ಇಸ್ರೇಲ್ ರಕ್ಷಣಾ ಪಡೆಯ ಮುಂದಿನ ಗುರಿ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ?
ಅಲಿ ಖಮೇನಿ
ರಶ್ಮಿ ಕಲ್ಲಕಟ್ಟ

Updated on: Oct 02, 2024 | 6:55 PM

ಮಧ್ಯಪ್ರಾಚ್ಯದಲ್ಲಿ ಹಗೆತನ ಹೆಚ್ಚುತ್ತಿರುವಂತೆಯೇ, ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ (Ali Khamenei) “ಸುರಕ್ಷಿತ ಸ್ಥಳ” ದಲ್ಲಿದ್ದಾರೆ.ಟೆಹ್ರಾನ್ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿದ ನಂತರ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರು ಸುರಕ್ಷಿತ ಸ್ಥಳದಲ್ಲಿದ್ದಾರೆ ಎಂದು ಇರಾನ್ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಸಂಜೆ ರಾಯಿಟರ್ಸ್‌ಗೆ ತಿಳಿಸಿದರು. ಕಳೆದ ವಾರ ಇರಾನ್‌ನ ನಿಕಟ ಮಿತ್ರ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಇಸ್ರೇಲ್ ಹತ್ಯೆ ಮಾಡಿದ ನಂತರ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ನಸ್ರಲ್ಲಾ ನಂತರ, ಇಸ್ರೇಲ್ ರಕ್ಷಣಾ ಪಡೆಯ (IDF) ಮುಂದಿನ ಗುರಿ ಖಮೇನಿ ಆಗಿರುತ್ತದೆ ಎಂಬ ಊಹಾಪೋಹಗಳ ನಡುವೆ ಇದು ಬಂದಿದೆ. ಇರಾನ್‌ನ ಸರ್ವೋಚ್ಚ ನಾಯಕನನ್ನು ತಮ್ಮ ಮುಂದಿನ ಕ್ರಮವಾಗಿ ತೊಡೆದುಹಾಕಲು IDF ಗುರಿಯನ್ನು ಹೊಂದಿರಬೇಕು ಎಂದು ಹಿರಿಯ ಇಸ್ರೇಲಿ ಅಧಿಕಾರಿಯೊಬ್ಬರು ಜೆರುಸಲೆಮ್ ಪೋಸ್ಟ್‌ಗೆ ತಿಳಿಸಿದ್ದಾರೆ.

“ನಾವು ಸರ್ಕಾರಿ ಕೇಂದ್ರಗಳ ಮೇಲೆ ದಾಳಿ ಮಾಡಲು ಮತ್ತು ಖಮೇನಿಯಂತಹ ವ್ಯಕ್ತಿಗಳನ್ನು ಮೇಲೆ ಆಕ್ರಮಣ ನಿರೀಕ್ಷಿಸಲಾಗಿದೆ” ಎಂದು ಅಧಿಕಾರಿ ಹೇಳಿರುವುದಾಗಿ ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ. ಇಸ್ರೇಲ್‌ನ ಮೇಲೆ ಕ್ಷಿಪಣಿ ದಾಳಿಗೆ ಆದೇಶ ನೀಡಿದವರು ಖಮೇನಿ ಮತ್ತು ಪರಮಾಣು ಸಾಮರ್ಥ್ಯಗಳನ್ನು ಹುಡುಕುವ ಮೂಲಕ ಪ್ರದೇಶವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಹಿರಿಯ ಭದ್ರತಾ ಅಧಿಕಾರಿ, ಇಸ್ರೇಲ್‌ನ ಕ್ರಮವು ಶೀಘ್ರವಾಗಿರಬೇಕು ಎಂದು ಪ್ರತಿಪಾದಿಸಿದರು.

“ಖಮೇನಿ ಸಾಂಪ್ರದಾಯಿಕ ದಾಳಿಯನ್ನು ಬಯಸುತ್ತಾರೆ ಮತ್ತು ಪರಮಾಣು ಶಸ್ತ್ರಾಸ್ತ್ರಗಳ ಬೆಂಬಲವನ್ನು ಬಯಸುತ್ತಿದ್ದಾರೆ. ಇಸ್ರೇಲ್ ಈಗ ಇರಾನ್‌ನ ಪರಮಾಣು ತಾಣಗಳನ್ನು ನಾಶಪಡಿಸಬೇಕು, ”ಎಂದು ಅವರು ಹೇಳಿದರು.

ಇಸ್ರೇಲ್ ರಕ್ಷಣಾ ತಾಣಗಳನ್ನು ಗುರಿಯಾಗಿಸಿಕೊಂಡು ಇರಾನ್ ಸುಮಾರು 200 ಕ್ಷಿಪಣಿಗಳನ್ನು ಸುರಿಮಳೆಗೈದ ಕೆಲವೇ ಗಂಟೆಗಳ ನಂತರ, ಪಿಎಂ ಬೆಂಜಮಿನ್ ನೆತನ್ಯಾಹು ಅವರು ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದ್ದು, ದಾಳಿಯ ವಿರುದ್ಧ ಬಲವಾದ ಪ್ರತೀಕಾರ ನಡೆಸಲಾಗುವುದು ಎಂದಿದ್ದಾರೆ.

ಇರಾನ್ ಇಂದು ರಾತ್ರಿ ದೊಡ್ಡ ತಪ್ಪನ್ನು ಮಾಡಿದೆ. ಅದಕ್ಕೆ ಉತ್ತರ ನೀಡುತ್ತದೆ, ಯಾರು ನಮ್ಮ ಮೇಲೆ ದಾಳಿ ಮಾಡಿದರೂ ನಾವು ಅವರ ಮೇಲೆ ದಾಳಿ ಮಾಡುತ್ತೇವೆ ಎಂದು ದಾಳಿಯ ಗಂಟೆಗಳ ನಂತರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಾರೆ.

ಇರಾನ್ ಕ್ಷಿಪಣಿಗಳ ಪ್ರತಿಬಂಧವನ್ನು ಮೇಲ್ವಿಚಾರಣೆ ಮಾಡುವ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿದ್ದ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ “ಇರಾನ್ ಪಾಠವನ್ನು ಕಲಿತಿಲ್ಲ – ಇಸ್ರೇಲ್ ರಾಜ್ಯದ ಮೇಲೆ ದಾಳಿ ಮಾಡುವವರು ಭಾರೀ ಬೆಲೆ ತೆರಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ: ಹಮಾಸ್ ನಾಯಕ ಮತ್ತು ಮೂವರು ಪ್ಯಾಲೆಸ್ತೀನ್ ಉಗ್ರರ ಹತ್ಯೆ

ಕಳೆದ ವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಕೊಂದ ಇಸ್ರೇಲ್ ಮತ್ತು ಜುಲೈನಲ್ಲಿ ಟೆಹ್ರಾನ್ ಬಾಂಬ್ ದಾಳಿಯಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರ ಮರಣಕ್ಕೆ ಪ್ರತಿಕ್ರಿಯೆಯಾಗಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಈ ದಾಳಿಯನ್ನು ಇಸ್ರೇಲ್ ಮೇಲೆ ವ್ಯಾಪಕವಾಗಿ ಆರೋಪಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us