AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ವಿರುದ್ಧ ತನ್ನ ಹಠ ಸಾಧಿಸಲು ಮತ್ತೆ ಭಾರತ ಹಾಗೂ ಚೀನಾವನ್ನು ಬಲಿಪಶು ಮಾಡಲು ಹೊರಟ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತಕ್ಕೆ ಮತ್ತೊಂದು ಹೊಡೆತ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ. ಅಮೆರಿಕದ ಅಧಿಕಾರಿಗಳು ಮತ್ತು ಯುರೋಪಿಯನ್ ಒಕ್ಕೂಟದ (ಇಯು) ರಾಜತಾಂತ್ರಿಕರ ಪ್ರಕಾರ, ಚೀನಾ ಮತ್ತು ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸುವಂತೆ ಟ್ರಂಪ್ ಯುರೋಪಿಯನ್ ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ. ಭಾರತ ಮತ್ತು ಚೀನಾ ಮೇಲೆ ಶೇ.100 ರಷ್ಟು ಸುಂಕ ವಿಧಿಸುವುದರಿಂದ ರಷ್ಯಾದ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಆ ಮೂಲಕ ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳುತ್ತದೆ ಎಂದು ಡೊನಾಲ್ಡ್ ಟ್ರಂಪ್ ಮಂಗಳವಾರ ಯುರೋಪಿಯನ್ ಒಕ್ಕೂಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಷ್ಯಾದ ವಿರುದ್ಧ ತನ್ನ ಹಠ ಸಾಧಿಸಲು ಮತ್ತೆ ಭಾರತ ಹಾಗೂ ಚೀನಾವನ್ನು ಬಲಿಪಶು ಮಾಡಲು ಹೊರಟ ಟ್ರಂಪ್
ಡೊನಾಲ್ಡ್​ ಟ್ರಂಪ್ Image Credit source: Deccan Chronicle
ನಯನಾ ರಾಜೀವ್
|

Updated on: Sep 10, 2025 | 11:18 AM

Share

ವಾಷಿಂಗ್ಟನ್, ಸೆಪ್ಟೆಂಬರ್ 10: ಇನ್ನೇನು ಎಲ್ಲಾ ಸರಿ ಹೋಯಿತು, ಟ್ರಂಪ್ ಭಾರತದ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿದ್ದಾರೆ, ಮತ್ತೆ ಉಭಯ ದೇಶಗಳ ಸಂಬಂಧ ಹಳಿಗೆ ಬರುತ್ತದೆ ಎಂದು ಎಲ್ಲರೂ ಕಾತುರವಾಗಿದ್ದಾರೆ. ಡೊನಾಲ್ಡ್​ ಟ್ರಂಪ್(Donald Trump) ಮತ್ತೆ ತನ್ನ ನರಿ ಬುದ್ಧಿಯ ಪ್ರದರ್ಶನ ಮಾಡಿದ್ದಾರೆ. ಭಾರತವು ಅಮೆರಿಕದ ಮಿತ್ರ, ಶೀಘ್ರ ನಮ್ಮ ಸಂಬಂಧ ಸರಿಯಾಗುತ್ತೆ ಎಂದು ಹೇಳುತ್ತಾ ಭಾರತವನ್ನು ಬಲಿಪಶು ಮಾಡಲು ಮುಂದಾಗಿದ್ದಾರೆ.

ಭಾರತ ಹಾಗೂ ಚೀನಾ ಮೇಲೆ ಶೇ.100ರಷ್ಟು ತೆರಿಗೆಯನ್ನು ಹೇರಿ ಆಗ ರಷ್ಯಾದ ಮೇಲೆ ಒತ್ತಡ ಹಾಕಬಹುದು ಆಗ ರಷ್ಯಾ ಉಕ್ರೇನ್ ಯುದ್ಧ ನಿಲ್ಲುತ್ತದೆ ಎಂದು ಟ್ರಂಪ್ ಯುರೋಪಿಯನ್ ಒಕ್ಕೂಟವನ್ನು ಒತ್ತಾಯಿಸಿದ್ದಾರೆ. ಇತ್ತ ಅಮೆರಿಕವು ನೀವು ರಷ್ಯಾದಿಂದ ತೈಲ ಆಮದು ನಿಲ್ಲಿಸದಿದ್ದರೆ ಸುಂಕ ಹೆಚ್ಚಳ ಮಾಡುತ್ತೇವೆ ಎಂದು ಬೆದರಿಕೆ ಹಾಕಿ ಈಗಾಗಲೇ ಇದ್ದ ಶೇ.25ರಷ್ಟು ಸುಂಕಕ್ಕೆ ಹೆಚ್ಚುವರಿಯಾಗಿ ಮತ್ತೆ ಶೇ.25ರಷ್ಟು ಸುಂಕವನ್ನು ವಿಧಿಸಿದ್ದಾರೆ.

ಮತ್ತಷ್ಟು ಓದಿ:  ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಟ್ರಂಪ್: ಮತ್ತೆ ಮೋದಿಯ ಹೊಗಳಿದ ಅಮೆರಿಕ ಅಧ್ಯಕ್ಷ!

ಅಷ್ಟೇ ಅಲ್ಲದೆ ಮತ್ತಷ್ಟು ಸುಂಕ ವಿಧಿಸುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಆದರೆ ಇದ್ಯಾವುದಕ್ಕೂ ಪ್ರಧಾನಿ ಮೋದಿ ಬಗ್ಗಲಿಲ್ಲ. ಕೆಲ ಸಮಯದ ಬಳಿಕ ಟ್ರಂಪ್ ಟ್ರೂಥ್ ಸೋಶಿಯಲ್​​ನಲ್ಲಿ ಪೋಸ್ಟ್ಮಾಡಿ, ಭಾರತ ನಮ್ಮ ಒಳ್ಳೆಯ ಸ್ನೇಹಿತ ಎಂದು ಹೊಗಳಿದ್ದರು. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿ ನಾವು ಕೂಡ ಟ್ರಂಪ್ ಜತೆ ಮಾತುಕತೆಗೆ ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದರು.

ಆದರೆ ಟ್ರಂಪ್ ಎದುರಿನಲ್ಲಿ ಚೆಂದವಾಗಿ ಮಾತನಾಡುತ್ತಾ, ಹಿಂದಿನಿಂದ ನರಿ ಬುದ್ಧಿ ತೋರಿಸಿದ್ದಾರೆ. ಭಾರತ ಮತ್ತು ಚೀನಾದ ಮೇಲೆ ಶೇ.100 ರಷ್ಟು ಸುಂಕ ವಿಧಿಸುವಂತೆ ಡೊನಾಲ್ಡ್ ಟ್ರಂಪ್ ಮಂಗಳವಾರ ಯುರೋಪಿಯನ್ ಒಕ್ಕೂಟದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಅಮೆರಿಕದ ಅಧಿಕಾರಿ ಮತ್ತು ಯುರೋಪಿಯನ್ ಒಕ್ಕೂಟದ ರಾಜತಾಂತ್ರಿಕರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ಈ ಮಾಹಿತಿಯನ್ನು ನೀಡಿದೆ. ಟ್ರಂಪ್ ಅವರ ಈ ಕ್ರಮವನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಲೆ ಒತ್ತಡ ಹೇರುವ ತಂತ್ರವೆಂದು ಪರಿಗಣಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತ ಮತ್ತು ಚೀನಾ ವಿರುದ್ಧ ಸಮಗ್ರ ಸುಂಕ ವಿಧಿಸಲು ಟ್ರಂಪ್ ಯುರೋಪಿಯನ್ ಒಕ್ಕೂಟವನ್ನು ಪ್ರೋತ್ಸಾಹಿಸಿದ್ದಾರೆ ಎಂದು ಹೇಳಿದ್ದಾರೆ. ಭಾರತ ಸೇರಿದಂತೆ ರಷ್ಯಾದ ತೈಲವನ್ನು ಖರೀದಿಸುವ ದೇಶಗಳ ಮೇಲೆ ಸುಂಕವನ್ನು ಹೆಚ್ಚಿಸಬೇಕು ಎಂಬುದು ಟ್ರಂಪ್ ಒತ್ತಾಯವಾಗಿದೆ.

ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಅಧಿಕಾರಿಗಳ ನಡುವಿನ ಸಂಭಾಷಣೆಯಲ್ಲಿ, ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತದಂತಹ ರಷ್ಯಾದ ತೈಲ ಖರೀದಿದಾರರ ಮೇಲೆ 50 ರಿಂದ 100 ಪ್ರತಿಶತದಷ್ಟು ತೆರಿಗೆ ವಿಧಿಸಲು ಸೂಚಿಸಿದ್ದಾರೆ. ರಷ್ಯಾದ ಯುದ್ಧ ಯಂತ್ರಕ್ಕೆ ಹಣಕಾಸಿನ ಮೂಲ ಚೀನಾ ಮತ್ತು ಭಾರತದ ತೈಲ ಖರೀದಿ.

ಚೀನಾ ಮತ್ತು ಭಾರತ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರರು ಎಂಬುದು ಟ್ರಂಪ್ ವಾದ. ರಷ್ಯಾದ ಆರ್ಥಿಕತೆಯು ಅವರ ಹಣದ ಮೇಲೆ ನಿಂತಿದೆ. 2022 ರಿಂದ ರಷ್ಯಾ ಉಕ್ರೇನ್‌ನಲ್ಲಿ ನಿರಂತರವಾಗಿ ಹಿಡಿತ ಸಾಧಿಸುತ್ತಿರುವುದಕ್ಕೆ ಇದೇ ಕಾರಣ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ