AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಹಿಟ್ಟು ಕದ್ದಿದ್ದಾನೆಂದು ಬಾಲಕನನ್ನು ಕಟ್ಟಿಹಾಕಿ ಹೊಡೆದು ಚಿತ್ರಹಿಂಸೆ ಕೊಟ್ಟ ಅಂಗಡಿಯವ

ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ, ಹೆಚ್ಚು ಬೆಲೆಯನ್ನು ಕೊಟ್ಟು ಅಗತ್ಯ ವಸ್ತುಗಳನ್ನು ಖರೀದಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಾಲಕನೊಬ್ಬ ಹಿಟ್ಟು ಕದ್ದಿದ್ದಾನೆಂದು ಆರೋಪಿಸಿ ಅಂಗಡಿಯವ ಆತನನ್ನು ಕಟ್ಟಿಹಾಕಿ, ಚಿತ್ರಹಿಂಸೆ ನೀಡಿರುವ ಘಟನೆ ವರದಿಯಾಗಿದೆ. ಬಾಲಕನನ್ನು ಕಂಬಕ್ಕೆ ಕಟ್ಟಿಹಾಕಿ ಸಾದಿಕ್ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಿಯಾನ್ ಚನ್ನುವಿನ ಬೋರಾ ಚೌಕ್ ನೆರೆಹೊರೆಯಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನ: ಹಿಟ್ಟು ಕದ್ದಿದ್ದಾನೆಂದು ಬಾಲಕನನ್ನು ಕಟ್ಟಿಹಾಕಿ ಹೊಡೆದು ಚಿತ್ರಹಿಂಸೆ ಕೊಟ್ಟ ಅಂಗಡಿಯವ
ಪೊಲೀಸ್
ನಯನಾ ರಾಜೀವ್
|

Updated on: Aug 29, 2023 | 9:58 AM

Share

ಪಾಕಿಸ್ತಾನ(Pakistan)ದಲ್ಲಿ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ, ಹೆಚ್ಚು ಬೆಲೆಯನ್ನು ಕೊಟ್ಟು ಅಗತ್ಯ ವಸ್ತುಗಳನ್ನು ಖರೀದಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಾಲಕನೊಬ್ಬ ಹಿಟ್ಟು ಕದ್ದಿದ್ದಾನೆಂದು ಆರೋಪಿಸಿ ಅಂಗಡಿಯವ ಆತನನ್ನು ಕಟ್ಟಿಹಾಕಿ, ಚಿತ್ರಹಿಂಸೆ ನೀಡಿರುವ ಘಟನೆ ವರದಿಯಾಗಿದೆ. ಬಾಲಕನನ್ನು ಕಂಬಕ್ಕೆ ಕಟ್ಟಿಹಾಕಿ ಸಾದಿಕ್ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಿಯಾನ್ ಚನ್ನುವಿನ ಬೋರಾ ಚೌಕ್ ನೆರೆಹೊರೆಯಲ್ಲಿ ಈ ಘಟನೆ ನಡೆದಿದೆ.

ವೈರಲ್ ವೀಡಿಯೊವನ್ನು ನೋಡಿ ಜನರು ಆಕ್ರೋಶಗೊಂಡಿದ್ದಾರೆ ಮತ್ತು ಈ ಘಟನೆ ಬಗ್ಗೆ ಸ್ಥಳೀಯರು ಅಥವಾ ಅಧಿಕಾರಿಗಳು ಏನೂ ಮಾಡಿಲ್ಲ ಎಲ್ಲರೂ ನೋಡುತ್ತಾ ನಿಂತಿರುವ ಬಗ್ಗೆ ಟೀಕಿಸಿದ್ದಾರೆ. ARY ನ್ಯೂಸ್ ವರದಿ ಮಾಡಿದಂತೆ ಸಿಟಿ ಪೊಲೀಸ್ ಠಾಣೆಯ ಸ್ಕ್ವಾಡ್ ನಂತರ ಸ್ಥಳಕ್ಕೆ ಆಗಮಿಸಿ ಆರೋಪಿ ಅಂಗಡಿಯವರನ್ನು ಕಸ್ಟಡಿಗೆ ತೆಗೆದುಕೊಂಡಿತು.

ಜೂನ್‌ನಲ್ಲಿ, ಪಂಜಾಬ್‌ನ ಚಿಶ್ತಿಯಾನ್ ನಗರದಲ್ಲಿ ವ್ಯಕ್ತಿಯೊಬ್ಬರು ಚಿನ್ನದ ಉಂಗುರಗಳನ್ನು ಕದ್ದ ಆರೋಪದ ಮೇಲೆ ವ್ಯಕ್ತಿಯನ್ನು ತಲೆಕೆಳಗಾಗಿ ನೇತುಹಾಕಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಚಿನ್ನಾಭರಣ ದೋಚಿದ್ದಕ್ಕಾಗಿ ವ್ಯಕ್ತಿ ತನ್ನ ಸಂಬಂಧಿಗೆ ಚಿತ್ರಹಿಂಸೆ ನೀಡಿದ್ದ, ಚಿತ್ರಹಿಂಸೆಗೆ ಒಳಗಾದ ಆರೋಪಿ ಮತ್ತು ವ್ಯಕ್ತಿ ಇಬ್ಬರನ್ನೂ ದೃಶ್ಯಗಳಲ್ಲಿ ಕಾಣಬಹುದು.

ಮತ್ತಷ್ಟು ಓದಿ: Pakistan Crisis: ಸ್ವಯಂಕೃತ ಅಪರಾಧಗಳಿಗೆ ತತ್ತರಿಸಿದ ಪಾಕಿಸ್ತಾನ; ಆರ್ಥಿಕ ಅಧಃಪತನಕ್ಕೆ ಭಾರತ ದ್ವೇಷವೇ ಮುಖ್ಯ ಕಾರಣ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿಲ್ಲ, ಘಟನೆಯು ಸಿಟಿ ಎ ಡಿವಿಷನ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ ಎಂದು ಎಆರ್​ಐ ನ್ಯೂಸ್ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?