AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮಾದಕವಸ್ತು ವ್ಯಸನ ಮುಕ್ತಿ ಕೇಂದ್ರದಲ್ಲಿ ಶುಕ್ರವಾರ ಭಾರೀ ಅಗ್ನಿ ದುರಂತ: 32 ಮಂದಿ ಸಾವು

ಕೇಂದ್ರವು 40 ರೋಗಿಗಳ ಸಾಮರ್ಥ್ಯವನ್ನು ಹೊಂದಿದೆ ಎಂದು ಟಿವಿ ವರದಿ ಹೇಳಿದೆ. ಮುಂಜಾನೆ ಬೆಂಕಿ ಹೊತ್ತಿಕೊಂಡಾಗ ಎಷ್ಟು ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಹಿಂದಿನ ಪ್ರಸಾರದಲ್ಲಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿತ್ತು.

ಇರಾನ್ ಮಾದಕವಸ್ತು ವ್ಯಸನ ಮುಕ್ತಿ ಕೇಂದ್ರದಲ್ಲಿ ಶುಕ್ರವಾರ ಭಾರೀ ಅಗ್ನಿ ದುರಂತ: 32 ಮಂದಿ ಸಾವು
ಇರಾನ್ ಮಾದಕವಸ್ತು ವ್ಯಸನ ಮುಕ್ತಿ ಕೇಂದ್ರದಲ್ಲಿ ಶುಕ್ರವಾರ ಭಾರೀ ಅಗ್ನಿ ದುರಂತ
Follow us
ಸಾಧು ಶ್ರೀನಾಥ್​
|

Updated on: Nov 04, 2023 | 10:01 AM

ಟೆಹ್ರಾನ್, ನವೆಂಬರ್​ 4: ಉತ್ತರ ಇರಾನ್‌ನಲ್ಲಿರುವ ಖಾಸಗಿ ಮಾದಕವಸ್ತು ವ್ಯಸನ ಮುಕ್ತಿ ಕೇಂದ್ರದಲ್ಲಿ ನಿನ್ನೆ ಶುಕ್ರವಾರ ಸಂಭವಿಸಿದ ಬೆಂಕಿಯಲ್ಲಿ 32 ಜನರು ಸಾವನ್ನಪ್ಪಿದ್ದಾರೆ. ಇರಾನ್ ಮಾಧ್ಯಮಗಳು ಈ ಹಿಂದೆ ವರದಿ ಮಾಡಿದ್ದಕ್ಕಿಂತ ಐದು ಮಂದಿ ಹೆಚ್ಚು ಸಾವಿಗೀಡಾಗಿದ್ದಾರೆ. ರಾಜಧಾನಿ ಟೆಹ್ರಾನ್‌ನ ವಾಯವ್ಯಕ್ಕೆ 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್‌ರೌಡ್‌ನಲ್ಲಿ ಈ ಅವಘಡವಾಗಿದ್ದು, ಇತರೆ 16 ಜನರು ಗಾಯಗೊಂಡಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಸ್ಟೇಟ್ ಟಿವಿ ಹೇಳಿದೆ.

ಕೇಂದ್ರವು 40 ರೋಗಿಗಳ ಸಾಮರ್ಥ್ಯವನ್ನು ಹೊಂದಿದೆ ಎಂದು ಟಿವಿ ವರದಿ ಹೇಳಿದೆ. ಮುಂಜಾನೆ ಬೆಂಕಿ ಹೊತ್ತಿಕೊಂಡಾಗ ಎಷ್ಟು ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಹಿಂದಿನ ಪ್ರಸಾರದಲ್ಲಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿತ್ತು. ಕತ್ತಲೆಯ ಆಕಾಶದಲ್ಲಿ ಭಾರೀ ಜ್ವಾಲೆಗಳು ಮತ್ತು ಹೊಗೆ ಉಗುಳುತ್ತಿರುವುದನ್ನು ವೀಡಿಯೊ ಕಾಣಬಹುದಾಗಿದೆ. ನಂತರ ಬೆಂಕಿಯನ್ನು ನಂದಿಸಲಾಯಿತು. ಅಗ್ನಿ ಆಕಸ್ಮಿಕಕ್ಕೆ ಕಾರಣವೇನೆಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಟಿವಿ ವರದಿ ತಿಳಿಸಿದೆ.

ಇರಾನ್‌ನ ನ್ಯಾಯಾಂಗ ಇಲಾಖೆ ಮುಖ್ಯಸ್ಥ ಘೋಲಮ್‌ಹೊಸ್ಸೇನ್ ಮೊಹ್ಸೇನಿ ಎಜೀ ಅವರು ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ಮುಖ್ಯವಾಗಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ, ಹಳೆಯದಾದ ಸೌಲಭ್ಯಗಳು ಮತ್ತು ಅಸಮರ್ಪಕ ತುರ್ತು ಸೇವೆಗಳ ಕಾರಣದಿಂದಾಗಿ ಸಂಭವಿಸಿದೆ. ಆದರೆ ಇಂತಹ ಮಾರಣಾಂತಿಕ ಬೆಂಕಿ ಅವಘಡಗಳು ದೇಶದಲ್ಲಿ ಅಪರೂಪವಲ್ಲ. ಕಳೆದ ಸೆಪ್ಟೆಂಬರ್‌ನಲ್ಲಿ ಇರಾನ್‌ನ ರಕ್ಷಣಾ ಸಚಿವಾಲಯದ ಒಡೆತನದ ಕಾರ್ ಬ್ಯಾಟರಿ ಕಾರ್ಖಾನೆಯಲ್ಲಿ ಒಂದು ವಾರದೊಳಗೆ ಎರಡನೇ ಬಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ.

ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ