AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರ ದಾಳಿ, 6 ಪಾಕ್ ಸೈನಿಕರು ಸಾವು

Pakistan Terror Attack: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರಯ ನಡೆಸಿದ ಗುಂಡಿನ ದಾಳಿಯಲ್ಲಿ 6 ಮಂದಿ ಪಾಕ್ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ದಿನ ಭಯೋತ್ಪಾದಕರ ದಾಳಿಯಿಂದಾಗಿ ಸರ್ಕಾರದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಹುಟ್ಟಿಕೊಂಡಿವೆ.

Pakistan: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರ ದಾಳಿ, 6 ಪಾಕ್ ಸೈನಿಕರು ಸಾವು
ಪಾಕಿಸ್ತಾನ
ನಯನಾ ರಾಜೀವ್
|

Updated on: Sep 20, 2024 | 2:19 PM

Share

ಭಯೋತ್ಪಾದನೆಯ ಮೂಲಕ ಇತರ ದೇಶಗಳನ್ನು ನಾಶ ಮಾಡಲು ಸದಾ ಹಾತೊರೆಯುತ್ತಿರುವ ಪಾಕಿಸ್ತಾನ ಇದೀಗ ಭಯೋತ್ಪಾದನೆಯ ಮೂಲಕ ವಿನಾಶದತ್ತ ಸಾಗುತ್ತಿದೆ. ಪ್ರತಿ ದಿನ ಭಯೋತ್ಪಾದಕರ ದಾಳಿಯಿಂದಾಗಿ ಸರ್ಕಾರದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಹುಟ್ಟಿಕೊಂಡಿವೆ.

ಇದೀಗ ಮತ್ತೆ ವಜೀರಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಡೆದಿದೆ. ಇದರಲ್ಲಿ ಪಾಕಿಸ್ತಾನದ 6 ಪಾಕ್ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ತೆಹ್ರೀಕ್-ಎ-ತಾಲಿಬಾನ್ (ಟಿಟಿಪಿ) ಹೊತ್ತುಕೊಂಡಿದೆ.

ಪಾಕಿಸ್ತಾನದ ಮಾಧ್ಯಮ ವರದಿಯ ಪ್ರಕಾರ, ಟಿಟಿಪಿ ಯೋಧರು ಮೇಲಿನ ದಕ್ಷಿಣ ವಜಿರಿಸ್ತಾನದ ಲಾಧಾ ಬಳಿ ಪಾಕಿಸ್ತಾನದ ಸೇನಾ ಪೋಸ್ಟ್ ಮೇಲೆ ಕ್ರೂರ ದಾಳಿ ನಡೆಸಿದರು. ಆರು ಯೋಧರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 4 ಜನರ ಸ್ಥಿತಿ ಚಿಂತಾಜನಕವಾಗಿದೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ದಾಳಿಯ ಹೊಣೆ ಹೊತ್ತುಕೊಂಡಿದೆ.

ಶಾಂತಿಯನ್ನು ತರಲು ನಿರಂತರ ಪ್ರಯತ್ನಗಳ ಹೊರತಾಗಿಯೂ, ವಜಿರಿಸ್ತಾನದಲ್ಲಿ ಸೇನೆಯ ಕಡೆಗೆ ಪರಿಸ್ಥಿತಿ ಗಂಭೀರವಾಗುತ್ತಿರುವುದು ಆತಂಕಕಾರಿಯಾಗಿದೆ. ಕಳೆದ ಒಂದು ತಿಂಗಳಲ್ಲಿ, ಪಾಕಿಸ್ತಾನದಲ್ಲಿ 10 ಕ್ಕೂ ಹೆಚ್ಚು ಸೇನಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕ ದಾಳಿಗಳು ವರದಿಯಾಗಿವೆ. ಈ ದಾಳಿಯಲ್ಲಿ 100ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ.

ಅಂತಾರಅಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು