AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು

ಇಂದು ಬೆಳಿಗ್ಗೆ ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ಪಾಕ್​​ ವಾಯುನೆಲೆಯ ಮೇಲೆ ಉಗ್ರರು ಹಲವಾರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ ಭಾರೀ ಶಸ್ತ್ರಸಜ್ಜಿತ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಿಂದ ಮೂವರು ಪಾಕ್​​ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ.

ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 04, 2023 | 10:15 AM

Share

ಇಂದು ಬೆಳಿಗ್ಗೆ ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ಪಾಕ್​​ ವಾಯುನೆಲೆಯ ಮೇಲೆ ಉಗ್ರರು ಹಲವಾರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ ಭಾರೀ ಶಸ್ತ್ರಸಜ್ಜಿತ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಿಂದ ಮೂವರು ಪಾಕ್​​ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ. ದಾಳಿಯ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ವದರಿಗಳ ಪ್ರಕಾರ ಈ ದಾಳಿ ಹೊಣೆಯನ್ನು ತೆಹ್ರಿಕ್-ಎ-ಜಿಹಾದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇನ್ನು ಈ ಭಯೋತ್ಪಾದಕರು ಪಾಕಿಸ್ತಾನ ವಾಯುನೆಲೆಯ ಭಾಗದಲ್ಲಿ ಸುತ್ತುವರಿದ್ದ ಗೋಡೆಗಳಿಗೆ ಏಣಿಯನ್ನು ಬಳಸಿ ಒಳಗೆ ಬಂದಿದ್ದಾರೆ ಎಂದು ಹೇಳಲಾಗಿದೆ.

ಉಗ್ರರ ಈ ದಾಳಿಯಿಂದ ಪಾಕ್​​ ವಾಯುನೆಲೆಯಲ್ಲಿರುವ ಯುದ್ಧ ವಿಮಾನಗಳು ಕೂಡ ನಾಶವಾಗಿದೆ ಎಂದು ಕೆಲವೊಂದು ವರದಿಗಳು ತಿಳಿಸಿದೆ. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಕ್​​ ಸೇನೆ, ಭಯೋತ್ಪಾದಕರು ದಾಳಿ ಮಾಡಿರುವುದು ನಿಜ, ಆದರೆ ಅವರ ದಾಳಿಯನ್ನು ವಿಫಲಗೊಳಿಸಲಾಗಿದೆ. ಸೈನ್ಯದ ಸಮಯಪ್ರಜ್ಞೆ ಮತ್ತು ಉಗ್ರರ ದಾಳಿಗೆ ಪ್ರತಿ ದಾಳಿ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಸಂಸತ್ ಭವನದ ಮೇಲೆ ಉಗ್ರರ ದಾಳಿ ನಡೆದು 21 ವರ್ಷ; ಭಾರತ-ಪಾಕ್ ಸಂಬಂಧ ಈಗ ಹೇಗಿದೆ?

ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

ಇನ್ನು ಸೇನೆ ನಡೆಸಿದ ದಾಳಿಯಿಂದ ಮೂವರು ಉಗ್ರರ ಹತ್ಯೆ ಮಾಡಲಾಗಿದೆ. ದಾಳಿಯ ಸಂದರ್ಭದಲ್ಲಿ ಮೂರು ಯುದ್ಧ ವಿಮಾನ ಹಾಗೂ ಇಂಧನ ಬೌಸರ್‌ಗೆ ಸ್ವಲ್ಪ ಹಾನಿಯಾಗಿದೆ. ಇನ್ನು ಉಗ್ರರ ನೆಲೆಯ ಮೇಲೆಯು ದಾಳಿಯನ್ನು ಸೇನೆ ಮಾಡಿದೆ. ಇದರ ಜತೆಗೆ ವಾಯುನೆಲೆಯಲ್ಲಿ ಸಂಪೂರ್ಣ ಕಾರ್ಯಚರಣೆಯನ್ನು ಮಾಡಲಾಗಿದೆ ಎಂದು ಪಾಕ್​​​ ಸೇನೆ ಹೇಳಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ