AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು

ಇಂದು ಬೆಳಿಗ್ಗೆ ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ಪಾಕ್​​ ವಾಯುನೆಲೆಯ ಮೇಲೆ ಉಗ್ರರು ಹಲವಾರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ ಭಾರೀ ಶಸ್ತ್ರಸಜ್ಜಿತ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಿಂದ ಮೂವರು ಪಾಕ್​​ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ.

ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 04, 2023 | 10:15 AM

Share

ಇಂದು ಬೆಳಿಗ್ಗೆ ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ಪಾಕ್​​ ವಾಯುನೆಲೆಯ ಮೇಲೆ ಉಗ್ರರು ಹಲವಾರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ ಭಾರೀ ಶಸ್ತ್ರಸಜ್ಜಿತ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಿಂದ ಮೂವರು ಪಾಕ್​​ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ. ದಾಳಿಯ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ವದರಿಗಳ ಪ್ರಕಾರ ಈ ದಾಳಿ ಹೊಣೆಯನ್ನು ತೆಹ್ರಿಕ್-ಎ-ಜಿಹಾದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇನ್ನು ಈ ಭಯೋತ್ಪಾದಕರು ಪಾಕಿಸ್ತಾನ ವಾಯುನೆಲೆಯ ಭಾಗದಲ್ಲಿ ಸುತ್ತುವರಿದ್ದ ಗೋಡೆಗಳಿಗೆ ಏಣಿಯನ್ನು ಬಳಸಿ ಒಳಗೆ ಬಂದಿದ್ದಾರೆ ಎಂದು ಹೇಳಲಾಗಿದೆ.

ಉಗ್ರರ ಈ ದಾಳಿಯಿಂದ ಪಾಕ್​​ ವಾಯುನೆಲೆಯಲ್ಲಿರುವ ಯುದ್ಧ ವಿಮಾನಗಳು ಕೂಡ ನಾಶವಾಗಿದೆ ಎಂದು ಕೆಲವೊಂದು ವರದಿಗಳು ತಿಳಿಸಿದೆ. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಕ್​​ ಸೇನೆ, ಭಯೋತ್ಪಾದಕರು ದಾಳಿ ಮಾಡಿರುವುದು ನಿಜ, ಆದರೆ ಅವರ ದಾಳಿಯನ್ನು ವಿಫಲಗೊಳಿಸಲಾಗಿದೆ. ಸೈನ್ಯದ ಸಮಯಪ್ರಜ್ಞೆ ಮತ್ತು ಉಗ್ರರ ದಾಳಿಗೆ ಪ್ರತಿ ದಾಳಿ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಸಂಸತ್ ಭವನದ ಮೇಲೆ ಉಗ್ರರ ದಾಳಿ ನಡೆದು 21 ವರ್ಷ; ಭಾರತ-ಪಾಕ್ ಸಂಬಂಧ ಈಗ ಹೇಗಿದೆ?

ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

ಇನ್ನು ಸೇನೆ ನಡೆಸಿದ ದಾಳಿಯಿಂದ ಮೂವರು ಉಗ್ರರ ಹತ್ಯೆ ಮಾಡಲಾಗಿದೆ. ದಾಳಿಯ ಸಂದರ್ಭದಲ್ಲಿ ಮೂರು ಯುದ್ಧ ವಿಮಾನ ಹಾಗೂ ಇಂಧನ ಬೌಸರ್‌ಗೆ ಸ್ವಲ್ಪ ಹಾನಿಯಾಗಿದೆ. ಇನ್ನು ಉಗ್ರರ ನೆಲೆಯ ಮೇಲೆಯು ದಾಳಿಯನ್ನು ಸೇನೆ ಮಾಡಿದೆ. ಇದರ ಜತೆಗೆ ವಾಯುನೆಲೆಯಲ್ಲಿ ಸಂಪೂರ್ಣ ಕಾರ್ಯಚರಣೆಯನ್ನು ಮಾಡಲಾಗಿದೆ ಎಂದು ಪಾಕ್​​​ ಸೇನೆ ಹೇಳಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು