Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲೆಂಡ್​ನಲ್ಲಿ ಜರ್ಮನ್​ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮಹಾರಾಷ್ಟ್ರದ ಇಬ್ಬರ ಬಂಧನ

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವುದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸವಾಲನ್ನು ಒಡ್ಡಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವುದು ನಾಗರಿಕರಲ್ಲಿ ಕಳವಳದ ವಾತಾವರಣವನ್ನು ಸೃಷ್ಟಿಸಿದೆ. ಸತಾರಾದ ಇಬ್ಬರು ಯುವಕರು ವಿದೇಶಕ್ಕೆ ಹೋದಾಗ ಅಲ್ಲಿ ಅತ್ಯಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ.

ಥೈಲೆಂಡ್​ನಲ್ಲಿ ಜರ್ಮನ್​ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮಹಾರಾಷ್ಟ್ರದ ಇಬ್ಬರ ಬಂಧನ
ಪೊಲೀಸ್​ Image Credit source: Delta Optimist
Follow us
ನಯನಾ ರಾಜೀವ್
|

Updated on: Mar 25, 2025 | 12:09 PM

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವುದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸವಾಲನ್ನು ಒಡ್ಡಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವುದು ನಾಗರಿಕರಲ್ಲಿ ಕಳವಳದ ವಾತಾವರಣವನ್ನು ಸೃಷ್ಟಿಸಿದೆ. ಸತಾರಾದ ಇಬ್ಬರು ಯುವಕರು ವಿದೇಶಕ್ಕೆ ಹೋದಾಗ ಅಲ್ಲಿ ಅತ್ಯಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ.

ಥೈಲೆಂಡ್​ನಲ್ಲಿ ಜರ್ಮನ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಇಬ್ಬರನ್ನು ಬಂಧಿಸಲಾಗಿದೆ. ಈ ಇಬ್ಬರು ಪ್ರವಾಸಕ್ಕೆಂದು ಥೈಲೆಂಡ್​ಗೆ ಹೋಗಿದ್ದರು. ಸೂರತ್ ಥಾನಿ ಪ್ರಾಂತ್ಯದ ರಿನ್ ಬೀಚ್‌ಗೆ ಹೋಗಿದ್ದರು ಆಗ ಇಬ್ಬರೂ ಜರ್ಮನ್ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಮಾಹಿತಿ ಲಭ್ಯವಾಗಿದೆ.

ಸಂತ್ರಸ್ತೆ ಕೊಹ್ ಫಂಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಸಿಸಿಟಿವಿ ದೃಶ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪ್ರಸ್ತುತ, ಅವರು ಜೈಲಿನಲ್ಲಿದ್ದಾರೆ ಮತ್ತು ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ವಾಷಿಂಗ್​ ಮೆಷಿನ್​ನಿಂದ ಬಯಲಾಯ್ತು ಅತ್ಯಾಚಾರ, ಆರೋಪಿಗೆ ಶಿಕ್ಷೆ

ಕೃತ್ಯವನ್ನು ವಿಜಯ್ ದಾದಾಸಾಹೇಬ್ ಒಪ್ಪಿಕೊಂಡಿದ್ದಾರೆ, ಆದರೆ ರಾಹುಲ್ ಬಾಳಾಸಾಹೇಬ್ ಅದನ್ನು ನಿರಾಕರಿಸಿದ್ದಾರೆ. ಮಹಿಳೆಯ ಮೇಲೆ ಅತ್ಯಾಚಾರ ಮಾಡಿಲ್ಲ ಆದರೆ ಆಕೆ ವಿರೋಧಿಸಿದರೂ ಆಕೆಯನ್ನು ತಬ್ಬಿಕೊಂಡು ಕೆನ್ನೆಗೆ ಮುತ್ತುಕೊಟ್ಟಿರುವುದು ಸತ್ಯ ಎಂದಿದ್ದಾರೆ. ಈ ಅಪರಾಧಕ್ಕೆ 4-20 ವರ್ಷಗಳವರೆಗೂ ಶಿಕ್ಷೆ ವಿಧಿಸಬಹುದು. 10.33 ಲಕ್ಷದವರೆಗೂ ದಂಡ ವಿಧಿಸಬಹುದು.

ಈ ಘಟನೆ ಮಾರ್ಚ್ 14 ರಂದು ಬೆಳಗಿನ ಜಾವ 4.50 ಕ್ಕೆ ಹಾದ್ ರಿನ್ ಬೀಚ್‌ನಲ್ಲಿ ನಡೆದಿದೆ. ಘಟನೆ ನಡೆದ ಸಮಯದಲ್ಲಿ ತಾನು ಕುಡಿದ ಮತ್ತಿನಲ್ಲಿದ್ದ ಕಾರಣ ಆರೋಪಿಯ ಗುರುತು ಖಚಿತವಿಲ್ಲ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಪ್ರದೇಶದ ಭದ್ರತಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಇವರಿಬ್ಬರು ಪತ್ತೆಯಾಗಿದ್ದಾರೆ. ಆರಂಭದಲ್ಲಿ ತಪ್ಪು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಬಳಿಕ ಒಪ್ಪಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ