AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿಗೊಂಡು ಸ್ಯಾನಿಟೈಜರ್ ಸ್ಪ್ರೇ ಮಾಡಿದ ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಓಚಾ

Viral video: ಪ್ರಧಾನಿ ಪ್ರಯುತ್ ಚಾನ್ ಓಚಾ ಸುದ್ದಿಗೋಷ್ಠಿ ನಡೆಸುತ್ತಿದ್ದಾಗ ಪತ್ರಕರ್ತರು ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನ ತುಂಬಲು ಸಮರ್ಥ ಅಭ್ಯರ್ಥಿಗಳ ಪಟ್ಟಿ ಮಾಡಿದ್ದೀರಾ ಎಂದು ಕೇಳಿದ್ದಕ್ಕೆ ಸಿಟ್ಟುಗೊಂಡು ಸ್ಯಾನಿಟೈಜರ್ ಸ್ಪ್ರೇ ಮಾಡಿದ್ದಾರೆ.

ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿಗೊಂಡು ಸ್ಯಾನಿಟೈಜರ್ ಸ್ಪ್ರೇ ಮಾಡಿದ ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಓಚಾ
ಪ್ರಯುತ್ ಚಾನ್ ಓಚಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 12, 2021 | 4:49 PM

Share

ಬ್ಯಾಂಕಾಕ್: ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಓಚಾ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಪತ್ರಕರ್ತರ ಪ್ರಶ್ನೆಗಳಿಗೆ ಸಿಡಿಮಿಡಿಗೊಂಡು ಅವರ ಮೇಲೆ ಸ್ಯಾನಿಟೈಜರ್ ಸ್ಪ್ರೇ ಮಾಡಿದ ಘಟನೆ ನಡೆದಿದೆ. ಪ್ರಧಾನಿ ಪತ್ರಕರ್ತರ ಮೇಲೆ ಸ್ಯಾನಿಟೈಜರ್ ಸ್ಪ್ರೇ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಪ್ರಧಾನಿ ಪ್ರಯುತ್ ಚಾನ್ ಓಚಾ ಸುದ್ದಿಗೋಷ್ಠಿ ನಡೆಸುತ್ತಿದ್ದಾಗ ಪತ್ರಕರ್ತರು ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನ ತುಂಬಲು ಸಮರ್ಥ ಅಭ್ಯರ್ಥಿಗಳ ಪಟ್ಟಿ ಮಾಡಿದ್ದೀರಾ ಎಂದು ಕೇಳಿದ್ದಾರೆ. ಏಳು ವರ್ಷಗಳ ಹಿಂದೆ ನಡೆದ ಬಂಡಾಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದಕ್ಕೆ ಮೂವರು ಸಚಿವರು ಜೈಲು ಪಾಲಾಗಿದ್ದರು. ಈ ಬಗ್ಗೆ ಪ್ರಶ್ನೆ ಕೇಳಿದಾಗ ಚಾನ್ ಓಚಾ ಕೋಪಗೊಂಡಿದ್ದಾರೆ.

ರಾಯಿಟರ್ಸ್ ಸುದ್ದಿ ಸಂಸ್ಥೆಯ ವರದಿ ಪ್ರಕಾರ ವೇದಿಕೆಯಲ್ಲಿದ್ದ ಚಾನ್ ಓಚಾ, ನಿಮಗೆ ಬೇರೇನಾದರೂ ಕೇಳುವುದು ಇದೆಯೇ?. ಅಭ್ಯರ್ಥಿಗಳ ಪಟ್ಟಿ ಬಗ್ಗೆ ನನಗೇನೂ ಗೊತ್ತಿಲ್ಲ . ನಾನು ನೋಡಿಲ್ಲ. ಪ್ರಧಾನಿಯವರಿಗೆ ಇದೆಲ್ಲಾ ಮೊದಲೇ ಗೊತ್ತಾಗಲೇಬೇಕೆಂದಿದೆಯಾ? ಎಂದು ಪತ್ರಕರ್ತರ ಮೇಲೆ ಗುಡುಗಿದ್ದಾರೆ.

ಆಮೇಲೆ ವೇದಿಕೆಯಿಂದ ಹೊರ ನಡೆದ ಪ್ರಧಾನಿ ಅಲ್ಲಿದ್ದ ಸ್ಯಾನಿಟೈಜರ್ ಬಾಟಲಿಯೊಂದನ್ನು ಕೈಗೆತ್ತಿಕೊಂಡು ಪತ್ರಕರ್ತರ ಬಳಿಗೆ ಹೋಗಿ ಸ್ಪ್ರೇ ಮಾಡಿದ್ದಾರೆ. ಪ್ರಧಾನಿ ಸ್ಯಾನಿಟೈಜರ್ ಸ್ಪ್ರೇ ಮಾಡುತ್ತಿರುವಾಗಲೇ ಅದನ್ನು ತಮ್ಮ ಮೊಬೈಲ್ ನಲ್ಲಿ ಪತ್ರಕರ್ತರು ಶೂಟ್ ಮಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಆಗಿರುವ ಈ ವಿಡಿಯೊ ಬಗ್ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್​ಗಳನ್ನು ಮಾಡಿದ್ದಾರೆ.

ಇದನ್ನೂ ಓದಿViral Video: ವರ್ಚುವಲ್ ಕಾನ್ಫರೆನ್ಸ್ ಅವಾಂತರ; ವಿಡಿಯೋ ಆಫ್ ಮಾಡಲು ಮರೆತು ಭರ್ಜರಿ ಭೋಜನ ಸವಿದ ವಕೀಲ!

Published On - 4:46 pm, Fri, 12 March 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು