AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ, ಶಿಕ್ಷಕ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ

Thailand School Firing: ಥೈಲ್ಯಾಂಡ್‌ನ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಮತ್ತು ಶಿಕ್ಷಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಓರ್ವ ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದುರ್ಘಟನೆ ಥೈಲ್ಯಾಂಡ್‌ನಲ್ಲಿ ಬಂದೂಕು ನಿಯಂತ್ರಣದ ಬಗ್ಗೆ ತೀವ್ರ ಆತಂಕ ಮೂಡಿಸಿದೆ.

ಥೈಲ್ಯಾಂಡ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ, ಶಿಕ್ಷಕ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ
ಪೊಲೀಸ್
ನಯನಾ ರಾಜೀವ್
|

Updated on: Aug 07, 2026 | 10:43 AM

Share

ಬ್ಯಾಂಕಾಕ್, ಆಗಸ್ಟ್ 07: ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಬಳಿಯ ಪ್ರಸಿದ್ಧ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಹಾಗೂ ಶಿಕ್ಷಕರ ಮೇಲೆ ದಿಢೀರ್ ಗುಂಡಿನ ದಾಳಿ(Firing) ನಡೆಸಿದ್ದಾನೆ. ಈ ದಾರುಣ ಘಟನೆಯಲ್ಲಿ ಓರ್ವ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಕನಿಷ್ಠ 15 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿಯು ಕೃತ್ಯದ ಬೆನ್ನಲ್ಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ.

ಬ್ಯಾಂಕಾಕ್ ಸಮೀಪದ ನೊಂಥಬುರಿಯ ಬ್ಯಾಂಗ್ ಕ್ರುವಾಯಿ ಜಿಲ್ಲೆಯಲ್ಲಿರುವ ದೇಬ್ಸಿರಿನ್ ನೊಂಥಬುರಿ ಶಾಲೆಯಲ್ಲಿ ಶುಕ್ರವಾರ ಬೆಳಗ್ಗೆ ತರಗತಿಗಳು ಆರಂಭವಾಗುವ ವೇಳೆಗೆ ಈ ಭೀಕರ ಘಟನೆ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿ ಬಂದೂಕಿನೊಂದಿಗೆ ಶಾಲೆಗೆ ಆಗಮಿಸಿ ದಿಢೀರನೆ ಗುಂಡಿನ ಸುರಿಮಳೆ ಗೈದಿದ್ದಾನೆ. ಗುಂಡೇಟಿನಿಂದ ಶಿಕ್ಷಕರೊಬ್ಬರು ಕೊನೆಯುಸಿರೆಳೆದಿದ್ದು, ಗಾಯಗೊಂಡ 15 ಜನರಲ್ಲಿ ಮೂವರು ವಿದ್ಯಾರ್ಥಿಗಳ ಪರಿಸ್ಥಿತಿ ಗಂಭೀರವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ದಾಳಿಕೋರ: ಘಟನೆಯ ಬಳಿಕ ಭದ್ರತಾ ಪಡೆಗಳು ಶಾಲೆಯನ್ನು ಸುತ್ತುವರೆಯುತ್ತಿದ್ದಂತೆ, ದಾಳಿಕೋರ ವಿದ್ಯಾರ್ಥಿಯು ಶಾಲಾ ಆವರಣದಲ್ಲೇ ತನ್ನ ಮೇಲೆ ಗುಂಡು ಹಾರಿಸಿಕೊಂಡು ಶವವಾಗಿದ್ದಾನೆ. ಪ್ಲೈ ಬ್ಯಾಂಗ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣವೇ ಶಾಲಾ ಕ್ಯಾಂಪಸ್‌ಗೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತಷ್ಟು ಓದಿ: Video: ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ

ಶಾಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ಹಾಗೂ ಮಾಧ್ಯಮಗಳು ಘಟನೆಯ ದೃಶ್ಯಗಳನ್ನು ಸೋಷಿಯಲ್ ಮೀಡಿಯಾದಲ್ಲಿ ನೇರ ಪ್ರಸಾರ ಮಾಡದಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕಿರಿಯ ವಯಸ್ಸಿನ ವಿದ್ಯಾರ್ಥಿ ಬಂದೂಕನ್ನು ಹೇಗೆ ಪಡೆದುಕೊಂಡ ಮತ್ತು ದಾಳಿ ನಡೆಸಲು ಇದ್ದ ಮಾನಸಿಕ ಅಥವಾ ವೈಯಕ್ತಿಕ ಉದ್ದೇಶವೇನು ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಗ್ನೇಯ ಏಷ್ಯಾದ ದೇಶಗಳ ಪೈಕಿ ಥೈಲ್ಯಾಂಡ್‌ನಲ್ಲಿ ಸಾರ್ವಜನಿಕರಲ್ಲಿ ಬಂದೂಕು ಹೊಂದುವ ಪ್ರಮಾಣ ಹೆಚ್ಚಾಗಿದೆ. ಕಾನೂನುಬದ್ಧ ಹಾಗೂ ಅಕ್ರಮ ಬಂದೂಕುಗಳು ಸುಲಭವಾಗಿ ಸಿಗುವುದೇ ಇಂತಹ ದುರಂತಗಳಿಗೆ ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಪೋಸ್ಟ್​

2022 ರಲ್ಲಿ ಥೈಲ್ಯಾಂಡ್‌ನ ಮಕ್ಕಳ ಆರೈಕೆ ಕೇಂದ್ರವೊಂದರಲ್ಲಿ ಮಾಜಿ ಪೊಲೀಸ್ ಅಧಿಕಾರಿಯೊಬ್ಬ ನಡೆಸಿದ ಮಾರಣಾಂತಿಕ ದಾಳಿಯಲ್ಲಿ 24ಮಕ್ಕಳು ಸೇರಿದಂತೆ 36 ಜನರು ಮೃತಪಟ್ಟಿದ್ದರು. ಆ ಘಟನೆಯ ನಂತರ ಬಂದೂಕು ಕಾಯ್ದೆಯನ್ನು ಕಠಿಣಗೊಳಿಸಲಾಗಿದ್ದರೂ, ಶಾಲಾ ಮಟ್ಟದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿರುವುದು ದೇಶಾದ್ಯಂತ ಭಾರಿ ಆತಂಕ ಮೂಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್
ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್
ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ
ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು!
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು!
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?