AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಜತೆ ಫೋನ್​​ನಲ್ಲಿ ಮಾತನಾಡುತ್ತಿರುವಾಗಲೇ ದಾಳಿ, ಇಸ್ರೇಲ್​​ನಲ್ಲಿ ಕೇರಳ ಮೂಲದ ಮಹಿಳೆಗೆ ಗಂಭೀರ ಗಾಯ

ಇಸ್ರೇಲ್​​ ಮೇಲೆ ಪ್ಯಾಲೆಸ್ತೀನ್ ಭಯೋತ್ಪಾದಕರು ದಾಳಿ ಮುಂದುವರಿದಿದ್ದು, ಇದೀಗ ಇಸ್ರೇಲ್​​ನಲ್ಲಿರುವ ಕೇರಳ ಮೂಲದ ನರ್ಸ್​ ಒಬ್ಬರ ಮೇಲೆ ದಾಳಿ ನಡೆದಿದ್ದು, ಅವರಿಗೆ ಗಂಭೀರ ಗಾಯಗಳಲಾಗಿವೆ ಎಂದು ಹೇಳಲಾಗಿದೆ. ಇವರು ತನ್ನ ಪತಿಯೊಂದಿಗೆ ವಿಡಿಯೋ ಕಾಲ್​​ನಲ್ಲಿ ಮಾತನಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಗಾಯಗೊಂಡಿರುವ ನರ್ಸ್​​ನ್ನು ಶೀಜಾ ಆನಂದ್ (41) ಎಂದು ಗುರುತಿಸಲಾಗಿದೆ.

ಪತಿ ಜತೆ ಫೋನ್​​ನಲ್ಲಿ ಮಾತನಾಡುತ್ತಿರುವಾಗಲೇ ದಾಳಿ, ಇಸ್ರೇಲ್​​ನಲ್ಲಿ ಕೇರಳ ಮೂಲದ ಮಹಿಳೆಗೆ ಗಂಭೀರ ಗಾಯ
ಶೀಜಾ ಆನಂದ್
ಅಕ್ಷಯ್​ ಪಲ್ಲಮಜಲು​​
|

Updated on: Oct 09, 2023 | 3:18 PM

Share

ಇಸ್ರೇಲ್ (Israel) ಮೇಲೆ ಪ್ಯಾಲೆಸ್ತೀನ್ (Palestine​​) ಭಯೋತ್ಪಾದಕರು ದಾಳಿ ಮುಂದುವರಿದಿದ್ದು, ಇದೀಗ ಇಸ್ರೇಲ್​​ನಲ್ಲಿರುವ ಕೇರಳ ಮೂಲದ ನರ್ಸ್​ ಒಬ್ಬರ ಮೇಲೆ ದಾಳಿ ನಡೆದಿದ್ದು, ಅವರಿಗೆ ಗಂಭೀರ ಗಾಯಗಳಲಾಗಿವೆ ಎಂದು ಹೇಳಲಾಗಿದೆ. ಇವರು ತನ್ನ ಪತಿಯೊಂದಿಗೆ ವಿಡಿಯೋ ಕಾಲ್​​ನಲ್ಲಿ ಮಾತನಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಗಾಯಗೊಂಡಿರುವ ನರ್ಸ್​​ನ್ನು ಶೀಜಾ ಆನಂದ್ (41) ಎಂದು ಗುರುತಿಸಲಾಗಿದೆ. ಸುಮಾರು ಏಳು ವರ್ಷಗಳಿಂದ ಇಸ್ರೇಲ್​ನಲ್ಲಿ ನರ್ಸ್​​ ವೃತ್ತಿಯನ್ನು ಶೀಜಾ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಶೀಜಾ ಆನಂದ್ ಅವರು ಶನಿವಾರದಂದು ಇಸ್ರೇಲ್​​ ಮೇಲೆ ದಾಳಿ ನಡೆದಾಗ ತನ್ನ ಕುಟುಂಬಕ್ಕೆ ಫೋನ್​​ ಮಾಡಿದ್ದಾರೆ. ನಾನು ಇಲ್ಲಿ ಸುರಕ್ಷಿತವಾಗಿದ್ದೇನೆ ಎಂದು ಹೇಳಿದ್ದಾರೆ. ನಂತರ ತನ್ನ ಪತಿಗೆ ಫೋನ್​​ ಮಾಡಿದಾಗ ಒಂದು ದೊಡ್ಡ ಶಬ್ದ ಕೇಳಿ, ಕರೆ ಕಟ್​​ ಆಗುತ್ತದೆ ಎಂದು ಆಕೆಯ ಪತಿ ಹೇಳಿದ್ದಾರೆ.

ಈ ಘಟನೆಯ 3-4 ಗಂಟೆಯ ನಂತರ ಇಸ್ರೇಲ್​​ನಿಂದ ಒಂದು ಫೋನ್ ಬರುತ್ತದೆ. ನಿಮ್ಮ ಪತ್ನಿ ಭಯೋತ್ಪಾದಕರ ದಾಳಿಯಿಂದ ಗಾಯಗೊಂಡಿದ್ದಾರೆ. ಈಗಾಗಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೇರೆ ಕಡೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

ಶೀಜಾ ಆನಂದ್ ಅವರ ಪತಿ ಮತ್ತು ಮಕ್ಕಳು ಭಾರತದಲ್ಲಿದ್ದಾರೆ. ಅವರ ಪತಿ ಪುಣೆಯಲ್ಲಿ ಕೆಲಸದಲ್ಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಇಸ್ರೇಲ್​​ನ ಬೆತ್ಲೆಹೆಮ್‌ನ ಹೋಟೆಲ್‌ನಲ್ಲಿ 200ಕ್ಕೂ ಹೆಚ್ಚು ಜನರ ಸಿಲುಕಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಈಗಾಗಲೇ ಅವರನ್ನು ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಹೇಳಿದ್ದಾರೆ.

ಇದರ ಜತೆಗೆ ಪ್ಯಾಲೆಸ್ತೀನ್‌ನ ಹೋಟೆಲ್‌ನಲ್ಲಿ ಕೊಚ್ಚಿಯ 45 ಜನ ಸಿಲುಕಿಕೊಂಡಿದ್ದಾರೆ. ಈಗಾಗಲೇ ಅವರನ್ನು ಭಾರತಕ್ಕೆ ಕರೆದುಕೊಂಡು ಬರುವ ಕೆಲಸವನ್ನು ಮಾಡಲಾಗುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿದೆ. ಇಸ್ರೇಲ್​ನಲ್ಲಿರುವ ಭಾರತದ ರಾಯಭಾರಿ ಜತೆಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತುಕತೆ ನಡೆಸಿದ್ದು, ಇಸ್ರೇಲ್​​ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಯಾವುದೇ ದೇಶದ ಯಹೂದಿ ಇಸ್ರೇಲ್​ನ ಪೌರತ್ವ ಪಡೆಯಬಹುದೇ?

ಇಸ್ರೇಲ್​ನಲ್ಲಿ ಅನೇಕ ಕಡೆಯಿಂದ ದಾಳಿಗಳು ನಡೆಸುತ್ತದೆ. ಈಗಾಗಲೇ ಪ್ಯಾಲೆಸ್ತೀನ್ ಹಮಾಸ್ ಭಯೋತ್ಪಾದಕರು ಇಸ್ರೇಲ್​ ಮೇಲೆ 5,000 ರಾಕೆಟ್​​ಗಳ ದಾಳಿ ಮಾಡಿದ್ದಾರೆ. ಮೂರು ದಿನದ ಈ ಯುದ್ಧದಲ್ಲಿ 1,100 ಜನ ಸಾವನ್ನಪ್ಪಿದ್ದಾರೆ. ಇಸ್ರೇಲ್‌ನಲ್ಲಿ 44 ಸೈನಿಕರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಗಾಜಾ ಪಟ್ಟಿಯಲ್ಲಿರುವ ಹಮಾಸ್‌ನ ಅಡಗುತಾಣಗಳನ್ನು ನಾಶಪಡಿಸಲು ಇಸ್ರೇಲ್ ಶನಿವಾರ ಪ್ರತಿದಾಳಿ ಆರಂಭಿಸಿದೆ. ದಕ್ಷಿಣ ಇಸ್ರೇಲ್‌ನಲ್ಲಿ ಕೆಲವು ಹಮಾಸ್ ನುಸುಳುಕೋರರು ಇಸ್ರೇಲಿ ಮಿಲಿಟರಿಯೊಂದಿಗೆ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ಸಮಯದಲ್ಲಿ ಪ್ರತಿದಾಳಿಯಾಗಿ ಇಸ್ರೇಲ್​​ ಕೂಡ ದಾಳಿ ನಡೆಸಿದೆ. ಇನ್ನು ಇಸ್ರೇಲ್​​ನಲ್ಲಿ 18 ಸಾವಿರ ಭಾರತೀಯರು ವಾಸವಾಗಿದ್ದಾರೆ. ಈ ಯುದ್ಧದಲ್ಲಿ ಭಾರತೀಯರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಲಾಗಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ