ವಾಸ್ತವದಲ್ಲಿ ರಷ್ಯಾ ಉದ್ದೇಶವೇನು?-ಯುದ್ಧ 8ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದೇನು?

ಝೆಲೆನ್ಸ್ಕಿ ಅವರು ಭದ್ರತಾ ಖಾತರಿ ಬೇಡಿಕೆ ಇಟ್ಟಿದ್ದಾರೆ. ಇದೊಂದು ಧನಾತ್ಮಕ ಹೆಜ್ಜೆಯಾಗಿದ್ದು, ಈ ಬಗ್ಗೆ ಉಕ್ರೇನ್​ನೊಂದಿಗೆ ಎರಡನೇ ಸುತ್ತಿನ ಮಾತುಕತೆಯಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ರಷ್ಯಾ ವಿದೇಶಾಂಗ ಸಚಿವ ಹೇಳಿದ್ದಾರೆ.

ವಾಸ್ತವದಲ್ಲಿ ರಷ್ಯಾ ಉದ್ದೇಶವೇನು?-ಯುದ್ಧ 8ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದೇನು?
ರಷ್ಯಾ ವಿದೇಶಾಂಗ ಇಲಾಖೆ ಮಂತ್ರಿ
Follow us
| Updated By: Lakshmi Hegde

Updated on: Mar 03, 2022 | 3:24 PM

ಉಕ್ರೇನ್​ ಮೇಲೆ ರಷ್ಯಾ ದಾಳಿ (Russia Attack On Ukraine) ನಡೆಸಿ 8ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ, ಇಂದು ರಷ್ಯಾದ ವಿದೇಶಾಂಗ ಇಲಾಖೆ ಸಚಿವ ಸೆರ್ಗೆ ಲಾವ್ರೊವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಉಕ್ರೇನ್​ನಲ್ಲಿ ನಡೆಸಲಾಗುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಮೂಲ ಉದ್ದೇಶ ಉಕ್ರೇನ್​ ಸೇನೆ ಶಸ್ತ್ರತ್ಯಜಿಸುವಂತೆ ಮಾಡುವುದೇ ಹೊರತು ಇನ್ನೇನೂ ಅಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಉಕ್ರೇನ್​ ಅಧ್ಯಕ್ಷರು ತಮ್ಮ ಮಾತುಗಳ ಮೂಲಕ ಜನರಲ್ಲಿ ರಷ್ಯಾ ವಿರೋಧಿ ಮನೋಭಾವವನ್ನು ಉತ್ತೇಜಿಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿಯೂ ರಷ್ಯಾ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ವೊಲೊಡಿಮಿರ್​ ಝೆಲೆನ್ಸ್ಕಿಯವರು ಉಕ್ರೆನ್​​ನ ಕಾನೂನು ಬದ್ಧ ಅಧ್ಯಕ್ಷ ಎಂದೇ ರಷ್ಯಾ ಮಾನ್ಯ ಮಾಡುತ್ತದೆ. ನಮ್ಮ ಗುರಿ ಏನಿದ್ದರೂ ಉಕ್ರೇನ್​​ ಸೈನ್ಯವನ್ನು ಹಿಮ್ಮೆಟ್ಟಿಸುವುದು. ಅವರು ತಮ್ಮ ಶಸ್ತ್ರ ತ್ಯಜಿಸಬೇಕು ಎಂದು ಸೆರ್ಗೆ ಲಾವ್ರೊವ್ ಪುನರುಚ್ಚರಿಸಿದ್ದಾರೆ.  ಪ್ರಾರಂಭದಿಂದಲೂ ರಷ್ಯಾ ಇದನ್ನೇ ಹೇಳುತ್ತ ಬಂದಿದ್ದರೂ, ಅದಕ್ಕೂ ಮಿಗಿಲಾಗಿ ಯುದ್ಧ ನಡೆಸುತ್ತಿದೆ ಎಂದು ಉಕ್ರೇನ್ ಆರೋಪಿಸುತ್ತಲೇ ಬಂದಿದೆ. ಫೆ.24ರಂದು ಯುದ್ಧ ಶುರುವಾದಾಗಿನಿಂದಲೂ ಇಲ್ಲಿಯವರೆಗೆ ಉಕ್ರೇನ್​ನಲ್ಲಿ 2 ಸಾವಿರಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾಗಿ ವರದಿಯಾಗಿದೆ.

ಝೆಲೆನ್ಸ್ಕಿ ಅವರು ಭದ್ರತಾ ಖಾತರಿ ಬೇಡಿಕೆ ಇಟ್ಟಿದ್ದಾರೆ. ಇದೊಂದು ಧನಾತ್ಮಕ ಹೆಜ್ಜೆಯಾಗಿದ್ದು, ಈ ಬಗ್ಗೆ ಉಕ್ರೇನ್​ನೊಂದಿಗೆ ಎರಡನೇ ಸುತ್ತಿನ ಮಾತುಕತೆಯಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ. ಆದರೆ ಉಕ್ರೇನ್​ ನಮ್ಮೊಂದಿಗೆ ಎರಡನೇ ಸುತ್ತಿನ ಮಾತುಕತೆ ನಡೆಸಲು ವಾಷಿಂಗ್ಟನ್​​ ಅನುಮತಿಗಾಗಿ ಕಾಯುತ್ತಿದೆ. ಹಾಗಾಗಿ ಇನ್ನೂ ಸಮಯ ನಿಗದಿಯಾಗಿಲ್ಲ. ಅಮರಿಕ ಒಪ್ಪಿಗೆ ಕೊಡುತ್ತಿಲ್ಲ ಎಂದು ಅನ್ನಿಸುತ್ತಿದೆ ಎಂದು ಸೆರ್ಗೆ ಲಾವ್ರೊವ್ ಹೇಳಿದ್ದಾರೆ.  ರಷ್ಯಾ ಯುದ್ದ ಕಾನೂನುಗಳನ್ನು ಉಲ್ಲಂಘಿಸುತ್ತಿದೆ. ವಾರ್​ಕ್ರೈಮ್​ ನಡೆಸುತ್ತಿದೆ ಎಂದು ಉಕ್ರೇನ್​ ಈಗಾಗಲೇ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೂ ದೂರು ನೀಡಿದೆ. ಆದರೆ ರಷ್ಯಾ ತಮ್ಮ ಉದ್ದೇಶ ಉಕ್ರೇನ್​ ಸೇನೆಯನ್ನು ಹಿಮ್ಮೆಟ್ಟಿಸುವುದು ಎಂದೇ ಹೇಳಿಕೊಂಡು ಬರುತ್ತಿದೆ.

ಇದನ್ನೂ ಓದಿ: ಮೈಸೂರು: ಐ ಫೋನ್ ಖರೀದಿಗಾಗಿ ಮನೆಯವರ ಜೊತೆ ಮುನಿಸಿಕೊಂಡು ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ