AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತವದಲ್ಲಿ ರಷ್ಯಾ ಉದ್ದೇಶವೇನು?-ಯುದ್ಧ 8ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದೇನು?

ಝೆಲೆನ್ಸ್ಕಿ ಅವರು ಭದ್ರತಾ ಖಾತರಿ ಬೇಡಿಕೆ ಇಟ್ಟಿದ್ದಾರೆ. ಇದೊಂದು ಧನಾತ್ಮಕ ಹೆಜ್ಜೆಯಾಗಿದ್ದು, ಈ ಬಗ್ಗೆ ಉಕ್ರೇನ್​ನೊಂದಿಗೆ ಎರಡನೇ ಸುತ್ತಿನ ಮಾತುಕತೆಯಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ರಷ್ಯಾ ವಿದೇಶಾಂಗ ಸಚಿವ ಹೇಳಿದ್ದಾರೆ.

ವಾಸ್ತವದಲ್ಲಿ ರಷ್ಯಾ ಉದ್ದೇಶವೇನು?-ಯುದ್ಧ 8ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದೇನು?
ರಷ್ಯಾ ವಿದೇಶಾಂಗ ಇಲಾಖೆ ಮಂತ್ರಿ
TV9 Web
| Edited By: |

Updated on: Mar 03, 2022 | 3:24 PM

Share

ಉಕ್ರೇನ್​ ಮೇಲೆ ರಷ್ಯಾ ದಾಳಿ (Russia Attack On Ukraine) ನಡೆಸಿ 8ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ, ಇಂದು ರಷ್ಯಾದ ವಿದೇಶಾಂಗ ಇಲಾಖೆ ಸಚಿವ ಸೆರ್ಗೆ ಲಾವ್ರೊವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಉಕ್ರೇನ್​ನಲ್ಲಿ ನಡೆಸಲಾಗುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಮೂಲ ಉದ್ದೇಶ ಉಕ್ರೇನ್​ ಸೇನೆ ಶಸ್ತ್ರತ್ಯಜಿಸುವಂತೆ ಮಾಡುವುದೇ ಹೊರತು ಇನ್ನೇನೂ ಅಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಉಕ್ರೇನ್​ ಅಧ್ಯಕ್ಷರು ತಮ್ಮ ಮಾತುಗಳ ಮೂಲಕ ಜನರಲ್ಲಿ ರಷ್ಯಾ ವಿರೋಧಿ ಮನೋಭಾವವನ್ನು ಉತ್ತೇಜಿಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿಯೂ ರಷ್ಯಾ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ವೊಲೊಡಿಮಿರ್​ ಝೆಲೆನ್ಸ್ಕಿಯವರು ಉಕ್ರೆನ್​​ನ ಕಾನೂನು ಬದ್ಧ ಅಧ್ಯಕ್ಷ ಎಂದೇ ರಷ್ಯಾ ಮಾನ್ಯ ಮಾಡುತ್ತದೆ. ನಮ್ಮ ಗುರಿ ಏನಿದ್ದರೂ ಉಕ್ರೇನ್​​ ಸೈನ್ಯವನ್ನು ಹಿಮ್ಮೆಟ್ಟಿಸುವುದು. ಅವರು ತಮ್ಮ ಶಸ್ತ್ರ ತ್ಯಜಿಸಬೇಕು ಎಂದು ಸೆರ್ಗೆ ಲಾವ್ರೊವ್ ಪುನರುಚ್ಚರಿಸಿದ್ದಾರೆ.  ಪ್ರಾರಂಭದಿಂದಲೂ ರಷ್ಯಾ ಇದನ್ನೇ ಹೇಳುತ್ತ ಬಂದಿದ್ದರೂ, ಅದಕ್ಕೂ ಮಿಗಿಲಾಗಿ ಯುದ್ಧ ನಡೆಸುತ್ತಿದೆ ಎಂದು ಉಕ್ರೇನ್ ಆರೋಪಿಸುತ್ತಲೇ ಬಂದಿದೆ. ಫೆ.24ರಂದು ಯುದ್ಧ ಶುರುವಾದಾಗಿನಿಂದಲೂ ಇಲ್ಲಿಯವರೆಗೆ ಉಕ್ರೇನ್​ನಲ್ಲಿ 2 ಸಾವಿರಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾಗಿ ವರದಿಯಾಗಿದೆ.

ಝೆಲೆನ್ಸ್ಕಿ ಅವರು ಭದ್ರತಾ ಖಾತರಿ ಬೇಡಿಕೆ ಇಟ್ಟಿದ್ದಾರೆ. ಇದೊಂದು ಧನಾತ್ಮಕ ಹೆಜ್ಜೆಯಾಗಿದ್ದು, ಈ ಬಗ್ಗೆ ಉಕ್ರೇನ್​ನೊಂದಿಗೆ ಎರಡನೇ ಸುತ್ತಿನ ಮಾತುಕತೆಯಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ. ಆದರೆ ಉಕ್ರೇನ್​ ನಮ್ಮೊಂದಿಗೆ ಎರಡನೇ ಸುತ್ತಿನ ಮಾತುಕತೆ ನಡೆಸಲು ವಾಷಿಂಗ್ಟನ್​​ ಅನುಮತಿಗಾಗಿ ಕಾಯುತ್ತಿದೆ. ಹಾಗಾಗಿ ಇನ್ನೂ ಸಮಯ ನಿಗದಿಯಾಗಿಲ್ಲ. ಅಮರಿಕ ಒಪ್ಪಿಗೆ ಕೊಡುತ್ತಿಲ್ಲ ಎಂದು ಅನ್ನಿಸುತ್ತಿದೆ ಎಂದು ಸೆರ್ಗೆ ಲಾವ್ರೊವ್ ಹೇಳಿದ್ದಾರೆ.  ರಷ್ಯಾ ಯುದ್ದ ಕಾನೂನುಗಳನ್ನು ಉಲ್ಲಂಘಿಸುತ್ತಿದೆ. ವಾರ್​ಕ್ರೈಮ್​ ನಡೆಸುತ್ತಿದೆ ಎಂದು ಉಕ್ರೇನ್​ ಈಗಾಗಲೇ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೂ ದೂರು ನೀಡಿದೆ. ಆದರೆ ರಷ್ಯಾ ತಮ್ಮ ಉದ್ದೇಶ ಉಕ್ರೇನ್​ ಸೇನೆಯನ್ನು ಹಿಮ್ಮೆಟ್ಟಿಸುವುದು ಎಂದೇ ಹೇಳಿಕೊಂಡು ಬರುತ್ತಿದೆ.

ಇದನ್ನೂ ಓದಿ: ಮೈಸೂರು: ಐ ಫೋನ್ ಖರೀದಿಗಾಗಿ ಮನೆಯವರ ಜೊತೆ ಮುನಿಸಿಕೊಂಡು ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ

Follow Us
TV9 Web
TV9 Web

TV9 Kannada

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!