AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್ ಒತ್ತೆಯಾಳುಗಳಾಗಿದ್ದ ಐವರ ಶವ ಪತ್ತೆ ಮಾಡಿ ಇಸ್ರೇಲ್​​ ಸೇನೆ

ಇಸ್ರೇಲ್ ಹಮಾಸ್ ಸೆರೆಯಲ್ಲಿದ್ದಾಗ ಐವರು ಒತ್ತೆಯಾಳುಗಳ ಶವ ಪತ್ತೆ ಮಾಡಿದೆ ಎಂದು ಇಸ್ರೇಲ್​​ ಮಿಲಿಟರಿ ಹೇಳಿದೆ. ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) ಎರಡು ವಾರಗಳ ಹಿಂದೆ ಹಮಾಸ್​​​​ ಒತ್ತೆಯಾಳುಗಳಾಗಿದ್ದ ಇಬ್ಬರ ಶವವನ್ನು ಪತ್ತೆ ಮಾಡಲಾಗಿತ್ತು. ಇದೀಗ ಮತ್ತೆ ಮೂವರ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ಶವ ಪತ್ತೆಗೆ ಸಂಬಂಧಿಸಿದಂತೆ ಇಸ್ರೇಲ್​​​ ಮಿಲಿಟರಿ ತನ್ನ ಅಧಿಕೃತ ಎಕ್ಸ್​​ ಖಾತೆಯಲ್ಲಿ ಒಂದು ಸುರಂಗದ ಒಂದು ವಿಡಿಯೋವನ್ನು ಹಂಚಿಕೊಂಡಿದೆ.

ಹಮಾಸ್ ಒತ್ತೆಯಾಳುಗಳಾಗಿದ್ದ ಐವರ ಶವ ಪತ್ತೆ ಮಾಡಿ ಇಸ್ರೇಲ್​​ ಸೇನೆ
TV9 Web
| Edited By: |

Updated on: Dec 25, 2023 | 2:18 PM

Share

ಹಮಾಸ್​​​ – ಇಸ್ರೇಲ್​​​​​ ನಡುವಿನ ಸಂಘರ್ಷಕ್ಕೆ ಕೊನೆ ಇಲ್ಲದಂತಾಗಿದೆ. ಕದನ ವಿರಾಮದ ನಂತರವು ಸಣ್ಣ ಪುಟ್ಟ ಘರ್ಷಣೆಗಳು ನಡೆಯುತ್ತಾಳೆ ಇದೆ. ಇದೀಗ ಇಸ್ರೇಲ್ ಹಮಾಸ್ ಸೆರೆಯಲ್ಲಿದ್ದಾಗ ಐವರು ಒತ್ತೆಯಾಳುಗಳ ಶವ ಪತ್ತೆ ಮಾಡಿದೆ ಎಂದು ಇಸ್ರೇಲ್​​ ಮಿಲಿಟರಿ ಹೇಳಿದೆ. ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) ಎರಡು ವಾರಗಳ ಹಿಂದೆ ಹಮಾಸ್​​​​ ಒತ್ತೆಯಾಳುಗಳಾಗಿದ್ದ ಇಬ್ಬರ ಶವವನ್ನು ಪತ್ತೆ ಮಾಡಲಾಗಿತ್ತು. ಇದೀಗ ಮತ್ತೆ ಮೂವರ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಶವ ಪತ್ತೆಗೆ ಸಂಬಂಧಿಸಿದಂತೆ ಇಸ್ರೇಲ್​​​ ಮಿಲಿಟರಿ ತನ್ನ ಅಧಿಕೃತ ಎಕ್ಸ್​​ ಖಾತೆಯಲ್ಲಿ ಒಂದು ಸುರಂಗದ ಒಂದು ವಿಡಿಯೋವನ್ನು ಹಂಚಿಕೊಂಡಿದೆ. ಅಕ್ಟೋಬರ್​​​ 7ರಂದು ಇಸ್ರೇಲ್​​ ಮೇಲೆ ಹಮಾಸ್​​ ದಾಳಿ ಮಾಡಿದ ಸಂದರ್ಭದಲ್ಲಿ ಅಪಹರಣವಾಗಿದ್ದ 5 ಜನರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ.

ಈ ಶವವನ್ನು ಪತ್ತೆ ಮಾಡಿದ್ದು, ದಕ್ಷಿಣ ಇಸ್ರೇಲ್‌ನಲ್ಲಿ ನಡೆದ ಸಂಗೀತ ಉತ್ಸವದಲ್ಲಿ ಭಾಗವಹಿಸಿದ್ದ 36 ವರ್ಷದ ಇಸ್ರೇಲಿ ಸೈನಿಕ ಝಿವ್ ದಾಡೋ ಮತ್ತು 27 ವರ್ಷದ ಈಡನ್ ಜಕಾರಿಯಾ ಅವರ ದೇಹ ಎಂದು ಹೇಳಲಾಗಿದೆ. ಉಳಿದ ಮೂರು ದೇಹವನ್ನು ಸಾರ್ಜೆಂಟ್ ರಾನ್ ಶೆರ್ಮನ್, ಸಿಪಿಎಲ್ ನಿಕ್ ಬೀಜರ್ ಮತ್ತು ಎಲಿಯಾ ಟೊಲೆಡಾನೊ ಎಂದು ಗುರುತಿಸಲಾಗಿದೆ,. ಇವರ ಶವ ಭಾನುವಾರ ಪತ್ತೆಯಾಗಿದೆ.

ಇದನ್ನೂ ಓದಿ: ಇಸ್ರೇಲ್, ಹಮಾಸ್ ನಡುವಿನ ತಾತ್ಕಾಲಿಕ ಕದನ ವಿರಾಮ ಅಂತ್ಯ, ಗಾಜಾದಲ್ಲಿ ಘರ್ಷಣೆ ಆರಂಭ

ಇನ್ನು ಈ ಮೂರು ದೇಹಗಳನ್ನು ಇಸ್ರೇಲ್​​ಗೆ ತೆಗೆದುಕೊಂಡು ಹೋಗಲಾಗುವುದು. ಹಾಗೂ ಅವರಿಗೆ ಸೈನ್ಯದ ಗೌರವ ಸಿಗಲಿದೆ. ಇಸ್ರೇಲ್​​ನಲ್ಲಿ ಅವರನ್ನು ಸಮಾಧಿ ಮಾಡಲಾಗುವುದು. ಮೂರು ಸಾವಿಗೆ ಹಮಾಸ್​​​ ಕಾರಣ ಎಂದು ಹೇಳಲಾಗಿದೆ. ಭಾನುವಾರ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದಲ್ಲಿ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ. ಅಕ್ಟೋಬರ್​​​ 7ರಿಂದ ಆರಂಭವಾದ ಈ ಸಂಘರ್ಷಣೆ, ಇನ್ನು ಮುಗಿದಿಲ್ಲ. ಇಲ್ಲಿಯವರೆಗೆ 20,424 ಬಲಿ ತೆಗೆದುಕೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?