AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್ ಸರ್ಕಾರದ ‘ಭಾರತ ವಿರೋಧಿ’ ನಿಲುವಿಗೆ ಅಲ್ಲಿನ ವಿರೋಧ ಪಕ್ಷಗಳು ಕೆಂಡಾಮಂಡಲ

ಮಾಲ್ಡೀವ್ಸ್​​​ನ ಪ್ರಮುಖ ವಿರೋಧ ಪಕ್ಷಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (MDP) ಮತ್ತು ಡೆಮೋಕ್ರಾಟ್‌ ಪಕ್ಷ ಅಲ್ಲಿನ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿದ್ದಾರೆ. ನೆರೆಹೊರೆಯ ರಾಷ್ಟ್ರಗಳ ಜತೆಗಿನ ಸಂಬಂಧವನ್ನು ಕಡೆಗಣಿಸುವುದು ಮತ್ತು ಚೀನಾದ ಜತೆಗೆ ಬಾಂಧ್ಯವವನ್ನು ವೃದ್ಧಿಸಿಕೊಳ್ಳುವುದು ದೊಡ್ಡ ಅಪಾಯಕಾರಿಯಾಗಿದೆ. ಇದರಿಂದ ಹಿಂದೂ ಮಹಾಸಾಗರ ಪ್ರದೇಶದಲ್ಲಿ ರಾಜಕೀಯ ಮತ್ತು ಮಿಲಿಟರಿ ಮೇಲೆ ಪರಿಣಾಮವನ್ನು ಉಂಟು ಮಾಡಬಹುದು

ಮಾಲ್ಡೀವ್ಸ್ ಸರ್ಕಾರದ 'ಭಾರತ ವಿರೋಧಿ' ನಿಲುವಿಗೆ ಅಲ್ಲಿನ ವಿರೋಧ ಪಕ್ಷಗಳು ಕೆಂಡಾಮಂಡಲ
ಅಕ್ಷಯ್​ ಪಲ್ಲಮಜಲು​​
|

Updated on: Jan 25, 2024 | 10:42 AM

Share

ಮಾಲ್ಡೀವ್ಸ್ (Maldives )ಸಚಿವರು ಮಾಡಿದ ಒಂದು ಟ್ವೀಟ್​​​ ಇದೀಗ ಆ ದೇಶವನ್ನು ಮುಳುಗುವ ಸ್ಥಿತಿಗೆ ತಂದುಬಿಟ್ಟಿದೆ. ಮಾಲ್ಡೀವ್ಸ್ ಸರ್ಕಾರದ ಸಚಿವರು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra MOdi) ಅವರ ವಿರುದ್ಧ ಮಾಡಿದ ಅವಹೇಳನಕಾರಿ ಫೋಸ್ಟ್ ಅಲ್ಲಿನ ಆಡಳಿತವನ್ನು ತಲೆಕೆಳಗೆ ಮಾಡಿದೆ. ಇದೀಗ ಅಲ್ಲಿನವರೇ ಮಾಲ್ಡೀವ್ಸ್ ಸರ್ಕಾರವನ್ನು ವಿರೋಧಿಸುತ್ತಿದ್ದಾರೆ. ಮಾಲ್ಡೀವ್ಸ್​​​ನ ಪ್ರಮುಖ ವಿರೋಧ ಪಕ್ಷಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (MDP) ಮತ್ತು ಡೆಮೋಕ್ರಾಟ್‌ ಪಕ್ಷ ಅಲ್ಲಿನ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿದ್ದಾರೆ.

ನೆರೆಹೊರೆಯ ರಾಷ್ಟ್ರಗಳ ಜತೆಗಿನ ಸಂಬಂಧವನ್ನು ಕಡೆಗಣಿಸುವುದು ಮತ್ತು ಚೀನಾದ ಜತೆಗೆ ಬಾಂಧ್ಯವವನ್ನು ವೃದ್ಧಿಸಿಕೊಳ್ಳುವುದು ದೊಡ್ಡ ಅಪಾಯಕಾರಿಯಾಗಿದೆ. ಇದರಿಂದ ಹಿಂದೂ ಮಹಾಸಾಗರ ಪ್ರದೇಶದಲ್ಲಿ ರಾಜಕೀಯ ಮತ್ತು ಮಿಲಿಟರಿ ಮೇಲೆ ಪರಿಣಾಮವನ್ನು ಉಂಟು ಮಾಡಬಹುದು ಎಂದು ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು 2023ರ ಚುನಾವಣೆಯಲ್ಲಿ ಭಾರತವನ್ನು ವಿರೋಧಿಸಿ ಗೆದ್ದರು, ಅದು ಮತ ಬ್ಯಾಂಕಿಂಗ್​​ಗಾಗಿ ಮಾಡಿದ್ದು, ನಂತರ ಭಾರತದ ಪರ ನೀತಿಯನ್ನು ರೂಪಿಸಿದರು. ನಮ್ಮ ದೇಶದ ಜತೆಗೆ ಅಭಿವೃದ್ಧಿ ಸಂಬಂಧವನ್ನು ಭಾರತ ಹೊಂದಿದೆ. ಅಭಿವೃದ್ಧಿ ಪಾಲುದಾರರನ್ನು ದೂರು ಮಾಡುವುದು ಸರಿಯಲ್ಲ, ಅದರಿಂದ ಮಾಲ್ಡೀವ್ಸ್​​​ಗೆ ದೊಡ್ಡ ನಷ್ಟ ಉಂಟಾಗಬಹುದು ಎಂದು ಹೇಳಿದ್ದಾರೆ.

ಭಾರತವು ಮಾಲ್ಡೀವ್ಸ್ ಜತೆಗೆ ದೀರ್ಘಾವಧಿಯ ಅಭಿವೃದ್ಧಿ ಸಂಬಂಧವನ್ನು ಹೊಂದಿದೆ. ಹಾಗೂ ಭಾರತ ಮತ್ತು ಮಾಲ್ಡೀವ್ಸ್ ಜತೆಗೆ ದೀರ್ಘಾವಧಿ ಸ್ನೇಹವನ್ನು ಹೊಂದಿದೆ. ಮಾಲ್ಡೀವ್ಸ್ ಸರ್ಕಾರ ವಿದೇಶಿ ನೀತಿಯನ್ನು ಪಾಲಿಸಬೇಕು ಹಾಗೂ ಸರ್ಕಾರವು ಸಾಂಪ್ರದಾಯಿಕವಾಗಿ ಸಂಬಂಧವನ್ನು ಮುಂದುವರಿಸಬೇಕು ಎಂದು ಎರಡು ವಿರೋಧ ಪಕ್ಷಗಳು ಹೇಳಿದೆ.

ಇದನ್ನೂ ಓದಿ:ಮಾಲ್ಡೀವ್ಸ್ ಸರ್ಕಾರದ ಈ ನಿರ್ಧಾರದಿಂದ ಬಾಲಕನ ಪ್ರಾಣವೇ ಹೋಯ್ತು 

ಹಿಂದೂ ಮಹಾಸಾಗರದ ಸ್ಥಿರತೆ ಮತ್ತು ಭದ್ರತೆಯು ಮಾಲ್ಡೀವ್ಸ್‌ನ ಸ್ಥಿರತೆ ಮತ್ತು ಭದ್ರತೆಗೆ ಅತ್ಯಗತ್ಯ ಎಂದು ಎಂಡಿಪಿ ಪಕ್ಷದ ಅಧ್ಯಕ್ಷ ಫಯಾಜ್ ಇಸ್ಮಾಯಿಲ್, ಸಂಸತ್ತಿನ ಉಪ ಸ್ಪೀಕರ್ ಅಹ್ಮದ್ ಸಲೀಂ, ಡೆಮಾಕ್ರಟ್ ಪಕ್ಷದ ಮುಖ್ಯಸ್ಥ ಎಂಪಿ ಹಸನ್ ಲತೀಫ್ ಮತ್ತು ಸಂಸದೀಯ ನಾಯಕ ಅಲಿ ಅಜೀಂ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಹೇಳಿಕೆಗಳನ್ನು ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಭಾರತದ ಲಕ್ಷದ್ವೀಪ ದ್ವೀಪಗಳಿಗೆ ಭೇಟಿ ನೀಡಿದ ನಂತರ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರು. ಈ ಹೇಳಿಕೆ ರಾಜತಾಂತ್ರಿಕ ವಿವಾದವನ್ನು ಸೃಷ್ಟಿಸಿತ್ತು. ಹಾಗೂ ಮಾಲ್ಡೀವ್ಸ್‌ಗೆ ಪ್ರವಾಸೋದ್ಯಮದಲ್ಲಿ ದೊಡ್ಡ ನಷ್ಟವನ್ನು ಉಂಟು ಮಾಡಿತ್ತು. ಇನ್ನು ಚೀನಾದ ಜತೆಗೆ ಮಾಲ್ಡೀವ್ಸ್‌ ಸಂಬಂಧವನ್ನು ಬೆಳಸಿಕೊಳ್ಳಲು ಮುಂದಾಗಿದೆ. ಇದು ಭಾರತದ ಕೆಂಗಣ್ಣಿಗೆ ಕಾರಣವಾಗಿದೆ. ಮಾಲ್ಡೀವ್ಸ್​​​ನ ಈ ನಡೆಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಲ್ಡೀವ್ಸ್​​​ ಬಾಯ್ಕಾಟ್ ಅಭಿಯಾನ ಕೂಡ ಆರಂಭಿಸಲಾಗಿದೆ.

ಅಂತಾರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು