AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಫ್ಘಾನ್​ಗೆ ನೆರವು ನೀಡುವುದನ್ನು ನಿಲ್ಲಿಸುವ ಮುನ್ನ ಯೋಚಿಸಿ..‘ -ಪಾಕ್​ ಪ್ರಧಾನಿ ಇಮ್ರಾನ್ ಖಾನ್​

ಅಫ್ಘಾನಿಸ್ತಾನದಲ್ಲಿ ಶಾಂತಿ ಮತ್ತು ಸ್ಥಿರತೆ ನೆಲಸಬೇಕು ಎಂಬುದು ಪಾಕಿಸ್ತಾನದ ಬಹುದೊಡ್ಡ ಆಶಯ. ಆದರೆ ಹೊರಗಿನಿಂದ ಆ ದೇಶವನ್ನು ಈಗ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಇಮ್ರಾನ್​ ಖಾನ್ ಹೇಳಿದ್ದಾರೆ.

‘ಅಫ್ಘಾನ್​ಗೆ ನೆರವು ನೀಡುವುದನ್ನು ನಿಲ್ಲಿಸುವ ಮುನ್ನ ಯೋಚಿಸಿ..‘ -ಪಾಕ್​ ಪ್ರಧಾನಿ ಇಮ್ರಾನ್ ಖಾನ್​
ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​
TV9 Web
| Updated By: Lakshmi Hegde|

Updated on: Sep 17, 2021 | 7:53 PM

Share

ಇಸ್ಲಮಾಬಾದ್​: ಅಫ್ಘಾನಿಸ್ತಾನವನ್ನು ಹೊರಗಿನವರಿಂದ ಯಾರಿಂದಲೂ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್​ ಹೇಳಿದ್ದಾರೆ. ಹಾಗೇ,  ತಾಲಿಬಾನಿಗಳು ತಾವು ನೀಡಿದ ಭರವಸೆಗಳನ್ನೆಲ್ಲ ಸರಿಯಾಗಿ ಈಡೇರಿಸಬೇಕು. ನೆರೆ ರಾಷ್ಟ್ರ ಅಫ್ಘಾನಿಸ್ತಾನಕ್ಕೆ ನಾವು ಸದಾ ಸಹಕಾರ ನೀಡುತ್ತೇವೆ ಎಂದಿದ್ದಾರೆ.  ಇಂದಿನ ಶಾಂಘೈ ಸಹಕಾರ ಸಂಘಟನೆಯ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು,  ಅಫ್ಘಾನಿಸ್ತಾಕ್ಕೆ ಮಾನವೀಯ ನೆರವು ಅಗತ್ಯವಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಇದಕ್ಕೆ ಸಜ್ಜಾಗಬೇಕು ಎಂದೂ ಹೇಳಿದ್ದಾರೆ.  

ಅಫ್ಘಾನಿಸ್ತಾನದಲ್ಲಿ ಶಾಂತಿ ಮತ್ತು ಸ್ಥಿರತೆ ನೆಲಸಬೇಕು ಎಂಬುದು ಪಾಕಿಸ್ತಾನದ ಬಹುದೊಡ್ಡ ಆಶಯ. ಆದರೆ ಹೊರಗಿನಿಂದ ಆ ದೇಶವನ್ನು ಈಗ ನಿಯಂತ್ರಿಸಲು ಸಾಧ್ಯವಿಲ್ಲ. ಅಫ್ಘಾನ್​ನಲ್ಲಿ ಈಗ ಒಂದು ಹೊಸದಾದ ವಾಸ್ತವ ಸೃಷ್ಟಿಯಾಗಿದೆ. ಅಲ್ಲಿದ್ದ ಹಿಂದಿನ ಸರ್ಕಾರ ಬಹುತೇಕ ವಿದೇಶಿ ಆರ್ಥಿಕ ನೆರವನ್ನೇ ಅವಲಂಬಿಸಿತ್ತು. ಈಗ ತಾಲಿಬಾನಿಗಳ ಆಡಳಿತ ಶುರುವಾದ ತಕ್ಷಣ ನೆರವನ್ನು ನಿಲ್ಲಿಸಿದರೆ ಅಲ್ಲಿನ ಜನರಿಗೆ ಸಂಕಷ್ಟವಾಗುತ್ತದೆ. ಈ ಬಗ್ಗೆ ಯೋಚಿಸಬೇಕು ಎಂದಿದ್ದಾರೆ. ಇಂದಿನ ಶಾಂಘೈ ಸಹಕಾರ ಸಭೆಯಲ್ಲಿ ರಷ್ಯಾ, ಚೀನಾ, ಖಜಕಿಸ್ತಾನ್​, ಖರ್ಜಿಸ್ತಾನ್​, ತಜಕಿಸ್ತಾನ್​, ಉಜ್ಬೇಕಿಸ್ತಾನ್​, ಭಾರತ, ಪಾಕಿಸ್ತಾನಗಳು ಪಾಲ್ಗೊಂಡಿದ್ದವು.

ಶಾಂಘೈ ಸಹಕಾರ ಸಂಘಟೆಯ ಇಂದಿನ ಶೃಂಗಸಭೆಯಲ್ಲಿ ಅಫ್ಘಾನಿಸ್ತಾನದ ಬೆಳವಣಿಗೆಗಳೇ ಪ್ರಮುಖ ಚರ್ಚಾ ವಿಷಯಗಳಾಗಿದ್ದವು. ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ, ಅಫ್ಘಾನ್​ನಲ್ಲಿ ಆಡಳಿತಕ್ಕೆ ಬಂದ ತಾಲಿಬಾನಿಗಳ ಸರ್ಕಾರ ಅಂತರ್ಗತವಾಗಿಲ್ಲ. ಎಲ್ಲರನ್ನೂ ಒಳಗೊಂಡು ರಚಿಸಿದ್ದಲ್ಲ. ಶಾಂತಿ, ಭದ್ರತೆಗೆ ತೀವ್ರವಾದ ದೊಡ್ಡ ಸವಾಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 9 ವರ್ಷದ ದಲಿತ ಬಾಲಕಿ ಲೈಂಗಿಕ ದೌರ್ಜನ್ಯದ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ: ದೆಹಲಿ ಪೊಲೀಸ್

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಸರ್ಕಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತು..

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!