Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿಯೇ ಹುಟ್ಟಿದ ಶಿಶು; ಅಮ್ಮ ಪಡೆದ ವ್ಯಾಕ್ಸಿನ್​ನಿಂದ ಶಕ್ತಿ ಪಡೆದ ಅಮೆರಿಕದ ಮೊದಲ ಮಗು ಇದು..

ಅದಾಗ್ಯೂ ಕೂಡ ಗರ್ಭಿಣಿಯರಿಗೆ ಕೊರೊನಾ ಲಸಿಕೆ ಎಷ್ಟು ಸುರಕ್ಷಿತ ಮತ್ತು ಪರಿಣಾಮಕಾರಿ ಎಂಬ ಬಗ್ಗೆ ಇನ್ನೂ ಅನೇಕ ರೀತಿಯ ಸಂಶೋಧನೆಗಳು ಆಗಬೇಕು ಎಂದು ವೈದ್ಯರಾದ ಡಾ. ಪೌಲ್ ಗಿಬ್ಲೆಟ್​ ಮತ್ತು ಡಾ. ಚಾಡ್​ ರುಡ್ನಿಕ್ ತಿಳಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿಯೇ ಹುಟ್ಟಿದ ಶಿಶು; ಅಮ್ಮ ಪಡೆದ ವ್ಯಾಕ್ಸಿನ್​ನಿಂದ ಶಕ್ತಿ ಪಡೆದ ಅಮೆರಿಕದ ಮೊದಲ ಮಗು ಇದು..
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Mar 18, 2021 | 1:02 PM

ಫ್ಲೋರಿಡಾ: ಮೊಡೆರ್ನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದ ದಕ್ಷಿಣ ಫ್ಲೋರಿಡಾದ ಗರ್ಭಿಣಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ. ಇನ್ನೂ ಒಂದು ಅಚ್ಚರಿಯ ಸಂಗತಿಯೆಂದರೆ, ಈ ಮಗು ದೇಹದಲ್ಲಿ ಕೊರೊನಾ ಪ್ರತಿಕಾಯಗಳನ್ನು (ಆ್ಯಂಟಿಬಾಡೀಸ್​) ಒಳಗೊಂಡೇ ಜನಿಸಿದೆ. ಯುಎಸ್​​ನಲ್ಲಿ, ಕೊರೊನಾ ಪ್ರತಿಕಾಯಗಳೊಂದಿಗೆ ಹುಟ್ಟಿದ ಮೊದಲ ಮಗು ಇದು ಎಂದು ವೈದ್ಯರು ಹೇಳಿದ್ದಾರೆ.

ಮಹಿಳೆ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. 36 ವಾರಗಳ ಗರ್ಭಿಣಿಯಾಗಿದ್ದಾಗ ಮೊದಲ ಡೋಸ್​​ ಮಾಡೆರ್ನಾ ಲಸಿಕೆ ಪಡೆದಿದ್ದರು. ಅದಾದ ಬಳಿಕ ಮೂರುವಾರಗಳಲ್ಲಿ ಇವರ ಹೆರಿಗೆಯಾಗಿ, ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗುವನ್ನು ತಪಾಸಣೆ ಮಾಡಿದಾಗ ಅದರ ದೇಹದಲ್ಲಿ ಐಜಿಜಿ ಪ್ರತಿಕಾಯಗಳು ಇರುವುದು ಪತ್ತೆಯಾಗಿದೆ. ಇದೊಂದು ವಿಧದ ಪ್ರೋಟಿನ್​ ಆಗಿದ್ದು, ಕೊರೊನಾ ವೈರಸ್​ ವಿರುದ್ಧ ರಕ್ಷಣೆ ನೀಡುತ್ತದೆ. ಹಾಗೇ, ಈ ಪ್ರತಿಕಾಯಗಳು ದೇಹದಲ್ಲಿ ಒಂದು ತಿಂಗಳಿಂದ..ಒಂದು ವರ್ಷದವರೆಗೂ ಉಳಿಯಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಡಾ. ಪೌಲ್ ಗಿಬ್ಲೆಟ್​ ಮತ್ತು ಡಾ. ಚಾಡ್​ ರುಡ್ನಿಕ್​ ಅವರು ಅಧ್ಯಯನ ಮಾಡಿದ್ದಾರೆ. ಮಹಿಳೆಯರ ಹೆರಿಗೆ ಮಾಡಿದ ಬಳಿಕ ಮಗುವಿನ ಹೊಕ್ಕಳಬಳ್ಳಿಯನ್ನು ತಕ್ಷಣವೇ ತೆಗದುಕೊಂಡು, ರಕ್ತ ತಪಾಸಣೆ ಮಾಡಲಾಗಿತ್ತು. ಈ ವೇಳೆ SARS-CoV-2 IgG ಪ್ರತಿಕಾಯಗಳು ಮಗುವಿನ ದೇಹದಲ್ಲಿ ಇರುವುದು ಸ್ಪಷ್ಟವಾಯಿತು ಎಂದು ಅವರು ತಿಳಿಸಿದ್ದಾರೆ. ತಾಯಿ ಪಡೆದ ಲಸಿಕೆ, ಈ ಮಗುವಿಗೆ ಕೊರೊನಾ ಸೋಂಕಿನ ಅಪಾಯವನ್ನು ಕಡಿಮೆ ಮಾಡಬಹುದು ಎಂದೂ ಹೇಳಿದ್ದಾರೆ.

ಅದಾಗ್ಯೂ ಕೂಡ ಗರ್ಭಿಣಿಯರಿಗೆ ಕೊರೊನಾ ಲಸಿಕೆ ಎಷ್ಟು ಸುರಕ್ಷಿತ ಮತ್ತು ಪರಿಣಾಮಕಾರಿ ಎಂಬ ಬಗ್ಗೆ ಇನ್ನೂ ಅನೇಕ ರೀತಿಯ ಸಂಶೋಧನೆಗಳು ಆಗಬೇಕು. ಇನ್ನು ಈ ಮಗುವಿನಲ್ಲಿ ಆ್ಯಂಟಿಬಾಡಿ ಇದ್ದರೂ ಕೂಡ ಅದರ ಪ್ರಮಾಣ ಕಡಿಮೆ ಇದೆ. ಹಾಗಾಗಿ ಕಾಳಜಿಯನ್ನು ವಹಿಸಲೇಬೇಕು. ಇನ್ನು ಮಹಿಳೆಗೆ ಪ್ರಸವದ ನಂತರ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Coronavirus Case Updates: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾರ್ಭಟ; ಒಂದು ದಿನದಲ್ಲಿ 35 ಸಾವಿರ ಕೇಸ್​ಗಳು ದಾಖಲು..ಮತ್ತೆ ಅಪಾಯದಲ್ಲಿ ಮಹಾರಾಷ್ಟ್ರ

ಬೆಂಗಳೂರಿನಲ್ಲಿ ಇಂದು 930 ಜನರಿಗೆ ಕೊರೊನಾ ದೃಢ

ಸರ್ಕಾರದ ಕೊವಿಡ್​ ಮಾರ್ಗಸೂಚಿಗೆ ಕ್ಯಾರೇ ಅನ್ನದ ಜನ: ಸಾವಿರದ ಸನಿಹಕ್ಕೆ ತಲುಪಿದ ಕೊರೊನಾ ಕೇಸ್​!

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ