AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿಯೇ ಹುಟ್ಟಿದ ಶಿಶು; ಅಮ್ಮ ಪಡೆದ ವ್ಯಾಕ್ಸಿನ್​ನಿಂದ ಶಕ್ತಿ ಪಡೆದ ಅಮೆರಿಕದ ಮೊದಲ ಮಗು ಇದು..

ಅದಾಗ್ಯೂ ಕೂಡ ಗರ್ಭಿಣಿಯರಿಗೆ ಕೊರೊನಾ ಲಸಿಕೆ ಎಷ್ಟು ಸುರಕ್ಷಿತ ಮತ್ತು ಪರಿಣಾಮಕಾರಿ ಎಂಬ ಬಗ್ಗೆ ಇನ್ನೂ ಅನೇಕ ರೀತಿಯ ಸಂಶೋಧನೆಗಳು ಆಗಬೇಕು ಎಂದು ವೈದ್ಯರಾದ ಡಾ. ಪೌಲ್ ಗಿಬ್ಲೆಟ್​ ಮತ್ತು ಡಾ. ಚಾಡ್​ ರುಡ್ನಿಕ್ ತಿಳಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿಯೇ ಹುಟ್ಟಿದ ಶಿಶು; ಅಮ್ಮ ಪಡೆದ ವ್ಯಾಕ್ಸಿನ್​ನಿಂದ ಶಕ್ತಿ ಪಡೆದ ಅಮೆರಿಕದ ಮೊದಲ ಮಗು ಇದು..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 18, 2021 | 1:02 PM

Share

ಫ್ಲೋರಿಡಾ: ಮೊಡೆರ್ನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದ ದಕ್ಷಿಣ ಫ್ಲೋರಿಡಾದ ಗರ್ಭಿಣಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ. ಇನ್ನೂ ಒಂದು ಅಚ್ಚರಿಯ ಸಂಗತಿಯೆಂದರೆ, ಈ ಮಗು ದೇಹದಲ್ಲಿ ಕೊರೊನಾ ಪ್ರತಿಕಾಯಗಳನ್ನು (ಆ್ಯಂಟಿಬಾಡೀಸ್​) ಒಳಗೊಂಡೇ ಜನಿಸಿದೆ. ಯುಎಸ್​​ನಲ್ಲಿ, ಕೊರೊನಾ ಪ್ರತಿಕಾಯಗಳೊಂದಿಗೆ ಹುಟ್ಟಿದ ಮೊದಲ ಮಗು ಇದು ಎಂದು ವೈದ್ಯರು ಹೇಳಿದ್ದಾರೆ.

ಮಹಿಳೆ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. 36 ವಾರಗಳ ಗರ್ಭಿಣಿಯಾಗಿದ್ದಾಗ ಮೊದಲ ಡೋಸ್​​ ಮಾಡೆರ್ನಾ ಲಸಿಕೆ ಪಡೆದಿದ್ದರು. ಅದಾದ ಬಳಿಕ ಮೂರುವಾರಗಳಲ್ಲಿ ಇವರ ಹೆರಿಗೆಯಾಗಿ, ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗುವನ್ನು ತಪಾಸಣೆ ಮಾಡಿದಾಗ ಅದರ ದೇಹದಲ್ಲಿ ಐಜಿಜಿ ಪ್ರತಿಕಾಯಗಳು ಇರುವುದು ಪತ್ತೆಯಾಗಿದೆ. ಇದೊಂದು ವಿಧದ ಪ್ರೋಟಿನ್​ ಆಗಿದ್ದು, ಕೊರೊನಾ ವೈರಸ್​ ವಿರುದ್ಧ ರಕ್ಷಣೆ ನೀಡುತ್ತದೆ. ಹಾಗೇ, ಈ ಪ್ರತಿಕಾಯಗಳು ದೇಹದಲ್ಲಿ ಒಂದು ತಿಂಗಳಿಂದ..ಒಂದು ವರ್ಷದವರೆಗೂ ಉಳಿಯಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಡಾ. ಪೌಲ್ ಗಿಬ್ಲೆಟ್​ ಮತ್ತು ಡಾ. ಚಾಡ್​ ರುಡ್ನಿಕ್​ ಅವರು ಅಧ್ಯಯನ ಮಾಡಿದ್ದಾರೆ. ಮಹಿಳೆಯರ ಹೆರಿಗೆ ಮಾಡಿದ ಬಳಿಕ ಮಗುವಿನ ಹೊಕ್ಕಳಬಳ್ಳಿಯನ್ನು ತಕ್ಷಣವೇ ತೆಗದುಕೊಂಡು, ರಕ್ತ ತಪಾಸಣೆ ಮಾಡಲಾಗಿತ್ತು. ಈ ವೇಳೆ SARS-CoV-2 IgG ಪ್ರತಿಕಾಯಗಳು ಮಗುವಿನ ದೇಹದಲ್ಲಿ ಇರುವುದು ಸ್ಪಷ್ಟವಾಯಿತು ಎಂದು ಅವರು ತಿಳಿಸಿದ್ದಾರೆ. ತಾಯಿ ಪಡೆದ ಲಸಿಕೆ, ಈ ಮಗುವಿಗೆ ಕೊರೊನಾ ಸೋಂಕಿನ ಅಪಾಯವನ್ನು ಕಡಿಮೆ ಮಾಡಬಹುದು ಎಂದೂ ಹೇಳಿದ್ದಾರೆ.

ಅದಾಗ್ಯೂ ಕೂಡ ಗರ್ಭಿಣಿಯರಿಗೆ ಕೊರೊನಾ ಲಸಿಕೆ ಎಷ್ಟು ಸುರಕ್ಷಿತ ಮತ್ತು ಪರಿಣಾಮಕಾರಿ ಎಂಬ ಬಗ್ಗೆ ಇನ್ನೂ ಅನೇಕ ರೀತಿಯ ಸಂಶೋಧನೆಗಳು ಆಗಬೇಕು. ಇನ್ನು ಈ ಮಗುವಿನಲ್ಲಿ ಆ್ಯಂಟಿಬಾಡಿ ಇದ್ದರೂ ಕೂಡ ಅದರ ಪ್ರಮಾಣ ಕಡಿಮೆ ಇದೆ. ಹಾಗಾಗಿ ಕಾಳಜಿಯನ್ನು ವಹಿಸಲೇಬೇಕು. ಇನ್ನು ಮಹಿಳೆಗೆ ಪ್ರಸವದ ನಂತರ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Coronavirus Case Updates: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾರ್ಭಟ; ಒಂದು ದಿನದಲ್ಲಿ 35 ಸಾವಿರ ಕೇಸ್​ಗಳು ದಾಖಲು..ಮತ್ತೆ ಅಪಾಯದಲ್ಲಿ ಮಹಾರಾಷ್ಟ್ರ

ಬೆಂಗಳೂರಿನಲ್ಲಿ ಇಂದು 930 ಜನರಿಗೆ ಕೊರೊನಾ ದೃಢ

ಸರ್ಕಾರದ ಕೊವಿಡ್​ ಮಾರ್ಗಸೂಚಿಗೆ ಕ್ಯಾರೇ ಅನ್ನದ ಜನ: ಸಾವಿರದ ಸನಿಹಕ್ಕೆ ತಲುಪಿದ ಕೊರೊನಾ ಕೇಸ್​!

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು