AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಲ್ಲಿ ಲಕ್ಷಾಂತರ ಮಕ್ಕಳು ಹಸಿದ ಹೊಟ್ಟೆಯೊಂದಿಗೆ ಮಲಗುತ್ತಿದ್ದಾರೆ: ವಿಶ್ವಸಂಸ್ಥೆ

ದ್ವೀಪರಾಷ್ಟ್ರದಲ್ಲಿ ಆಹಾರ ಪದಾರ್ಥಗಳಾದ ಅಕ್ಕಿ, ಬೇಳೆ, ಖಾದ್ಯ ತೈಲ ಮತ್ತು ಇತರ ಸರಕುಗಳ ಬೆಲೆ ಗಗನಕ್ಕೆ ಮುಟ್ಟಿರುವ ಕಾರಣ ಬಡ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳು ಹಸಿದ ಹೊಟ್ಟೆಯಲ್ಲಿ ಮಲಗುತ್ತಿವೆ ಎಂದು ವಿಶ್ವಸಂಸ್ಥೆಯ ಮಕ್ಕಳ ಅಂಗವಾಗಿರುವ ಯುನಿಸೆಫ್ (UNICEF) ದಕ್ಷಿಣ ಏಷ್ಯಾ ನಿರ್ದೇಶಕ ಲರಿಯಾ ಅಡ್ಜೀ ಹೇಳಿದ್ದಾರೆ.

ಶ್ರೀಲಂಕಾದಲ್ಲಿ ಲಕ್ಷಾಂತರ ಮಕ್ಕಳು ಹಸಿದ ಹೊಟ್ಟೆಯೊಂದಿಗೆ ಮಲಗುತ್ತಿದ್ದಾರೆ: ವಿಶ್ವಸಂಸ್ಥೆ
ಶ್ರೀಲಂಕಾದ ಮಕ್ಕಳು ಉಪವಾಸ ಮಲಗುತ್ತಿದ್ದಾರೆ
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Aug 28, 2022 | 8:02 AM

Share

ಕೊಲಂಬೋ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಮಕ್ಕಳು ಬರಿಹೊಟ್ಟೆಯಲ್ಲಿ ರಾತ್ರಿ ಹಾಸಿಗೆಗೆ ಹೋಗುತ್ತಿದ್ದಾರೆ ಎಂದು ಶುಕ್ರವಾರ ಹೇಳಿರುವ ವಿಶ್ವಸಂಸ್ಥೆಯು ಮುಂಬರುವ ದಿನಗಳಲ್ಲಿ ದಕ್ಷಿಣ ಏಷ್ಯಾದ ಬೇರೆ ರಾಷ್ಟ್ರಗಳಲ್ಲೂ ಸಹ ಇದೇ ಸ್ಥಿತಿ ಎದುರಾಗಬಹುದು ಅಂತ ಎಚ್ಚರಿಸಿದೆ. ರಫ್ತುಗಳನ್ನು ಖರೀದಿಸಲು ತೀವ್ರ ಸ್ವರೂಪದ ವಿದೇಶಿ ವಿನಿಮಯದ ಕೊರತೆಯನ್ನು ಶ್ರೀಲಂಕಾ ಸರ್ಕಾರ ಎದುರಿಸುತ್ತಿರುವುದರಿಂದ ಅಹಾರ ಸರಬರಾಜು, ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಅಭಾವ ಉಂಟಾಗಿದೆ.

ದ್ವೀಪರಾಷ್ಟ್ರದಲ್ಲಿ ಆಹಾರ ಪದಾರ್ಥಗಳಾದ ಅಕ್ಕಿ, ಬೇಳೆ, ಖಾದ್ಯ ತೈಲ ಮತ್ತು ಇತರ ಸರಕುಗಳ ಬೆಲೆ ಗಗನಕ್ಕೆ ಮುಟ್ಟಿರುವ ಕಾರಣ ಬಡ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳು ಹಸಿದ ಹೊಟ್ಟೆಯಲ್ಲಿ ಮಲಗುತ್ತಿವೆ ಎಂದು ವಿಶ್ವಸಂಸ್ಥೆಯ ಮಕ್ಕಳ ಅಂಗವಾಗಿರುವ ಯುನಿಸೆಫ್ (UNICEF) ದಕ್ಷಿಣ ಏಷ್ಯಾ ನಿರ್ದೇಶಕ ಲರಿಯಾ ಅಡ್ಜೀ ಹೇಳಿದ್ದಾರೆ.

‘ಮಕ್ಕಳು ಬರಿ ಹೊಟ್ಟೆಯಲ್ಲಿ ಮಲಗುತ್ತಿದ್ದಾರೆ. ಬೆಳಗ್ಗೆ ಊಟ ಸಿಕ್ಕೀತೋ ಅಥವಾ ತಮ್ಮಲ್ಲಿಗೆ ಅದು ಎಲ್ಲಿಂದ ಬಂದೀತು ಎಂಬ ಯೋಚನೆಯಲ್ಲೇ ಅವರು ಹಾಸಿಗೆಗೆ ಹೋಗುತ್ತಿದ್ದಾರೆ,’ ಎಂದು ಅವರು ಸುದ್ದಿಗಾರರಿಗೆ ಹೇಳಿದ್ದಾರೆ.

ಕಳೆದ ಏಪ್ರಿಲ್ ನಲ್ಲಿ ₹51 ಬಿಲಿಯನ್ ವಿದೇಶಿ ಸಾಲ ತೀರಿಸಬೇಕಿದ್ದ ಶ್ರೀಲಂಕಾ ಕೈ ಚೆಲ್ಲಿಬಿಟ್ಟಿತ್ತು. ಸದ್ಯದ ಬಿಕ್ಕಟ್ಟಿನಿಂದ ಪಾರು ಮಾಡಲು ಅಲ್ಲಿನ ಸರ್ಕಾರ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಯೊಂದಿಗೆ ಮಾತುಕತೆ ನಡೆಸುತ್ತಿದೆ.

ಉಕ್ರೇನ್ ಮೇಲೆ ರಷ್ಯಾ ನಡೆಸಿದ ಆಕ್ರಮಣದಿಂದ ಇಂಧನದ ಬೆಲೆ ಅಂಕೆ ಮೀರಿದ್ದು ಅದು ನೆರೆಹೊರೆಯ ರಾಷ್ಟ್ರಗಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ ಎಂದು ಹೇಳಿರುವ ಲರಿಯಾ ಅಡ್ಜೀ ದಕ್ಷಿಣ ಏಷ್ಯಾ ಪ್ರಾಂತ್ಯದ ಇತರ ದೇಶಗಳಲ್ಲೂ ಅಹಾರ ಕೊರತೆಯ ಸಮಸ್ಯೆ ಎದುರಾಗಬಹುದು ಎಂದಿದ್ದಾರೆ.

‘ದಕ್ಷಿಣ ಏಷ್ಯಾದಾದ್ಯಂತ ತೀವ್ರ ಆರ್ಥಿಕ ಅನಿಶ್ಚಿತತೆ ಮತ್ತು ಹಣದುಬ್ಬರವು ಮಕ್ಕಳ ಜೀವಕ್ಕೆ ಮತ್ತಷ್ಟು ಅಪಾಯವನ್ನುಂಟು ಮಾಡಲಿದೆ ಎಂದು ಅವರು ಹೇಳಿದ್ದಾರೆ.

‘ಶ್ರೀಲಂಕಾದಲ್ಲಿ ನಾನೀಗ ನೋಡುತ್ತಿರುವುವುದುದ ದಕ್ಷಿಣ ಏಷ್ಯಾದ ಇತರ ದೇಶಗಳಿಗೆ ಎಚ್ಚರಿಕೆ ಗಂಟೆಯಾಗಿದೆ,’ ಎಂದು ಅಡ್ಜೀ ಹೇಳಿದ್ದಾರೆ.

ಶ್ರೀಲಂಕಾದ ಕನಿಷ್ಠ ಅರ್ಧದಷ್ಟು ಮಕ್ಕಳ ಜನಸಂಖ್ಯೆಯ ತುರ್ತು ಅಗತ್ಯಗಳನ್ನು ಪೂರೈಸಲು $25 ಮಿಲಿಯನ್‌ಗೆ ಹಣಕಾಸಿನ ನೆರವಿಗಾಗಿ ಯುನಿಸೆಫ್ ಅಪೀಲ್ ಮಾಡಿದೆ.

ಮಕ್ಕಳಲ್ಲಿ ಅತಿ ವೇಗವಾಗಿ ಹೆಚ್ಚುತ್ತಿರುವ ಅಪೌಷ್ಟಿಕತೆಯನ್ನು ನಿಭಾಯಿಸಲು ಸರ್ಕಾರವು ಈ ತಿಂಗಳು ತನ್ನದೇ ಆದ ಮನವಿಯೊಂದನ್ನು ಮಾಡಿದೆ.

2021ರ ಅಧಿಕೃತ ಅಂಕಿ-ಅಂಶಗಳ ಪ್ರಕಾರ ಲಂಕಾದ ಶಿಶುವಿಹಾರಗಳಲ್ಲಿ ದಾಖಲಾಗಿರುವ 5,70,000 ಮಕ್ಕಳಲ್ಲಿ 1,27,000 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಅದಾದ ನಂತರ ಎದುರಾಗಿರುವ ಆಹಾರದ ಅಭಾವ ಮತ್ತು ಹೆಚ್ಚುತ್ತಿರುವ ಹಣದುಬ್ಬರದಿಂದ ಈ ಅಂಕಿ ಅಂಶಗಳು ದ್ವಿಗುಣಗೊಂಡಿರಬಹುದೆಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಪ್ರಸಕ್ತ ಸ್ಥಿತಿಯಿಂದ ಕಂಗೆಟ್ಟು ಹತಾಷರಾಗಿದ್ದ ಸಾವಿರಾರು ಲಂಕನ್ನರು ಕಳೆದ ತಿಂಗಳು ಪ್ರತಿಭಟನೆಗಿಳಿದು ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿ ಒಳನುಗ್ಗಿ ದಾಂಧಲೆ ನಡೆಸಿದ ಬಳಿಕ ಶ್ರೀಲಂಕಾದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸಾ ದೇಶದಿಂದ ಪಲಾಯನ ಮಾಡಿ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ