AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಇಯಲ್ಲಿ ತೆರೆದ ಮಸೀದಿ: ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿ

ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಶುಕ್ರವಾರದ ಪ್ರಾರ್ಥನೆಗಾಗಿ ಮಸೀದಿಗಳನ್ನು ತೆರೆಯಬೇಕು ಎಂದು ಸರ್ಕಾರ ಮಸೀದಿಗಳಿಗೆ ಆದೇಶಿಸಿತ್ತು.

ಯುಎಇಯಲ್ಲಿ ತೆರೆದ ಮಸೀದಿ: ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 04, 2020 | 6:10 PM

Share

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ (ಯುಎಇ) ಕೋವಿಡ್-19 ಆತಂಕದ ಹಿನ್ನೆಲೆಯಲ್ಲಿ ಸುಮಾರು 8 ತಿಂಗಳುಗಳಿಂದ ಮುಚ್ಚಿದ್ದ ಮಸೀದಿಗಳು ಶುಕ್ರವಾರದ ಪ್ರಾರ್ಥನೆಗಾಗಿ ತೆರೆದಿವೆ. ಇಂದು  ನಡೆದ ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಶುಕ್ರವಾರದ ಪ್ರಾರ್ಥನೆಗಾಗಿ ಮಸೀದಿಗಳನ್ನು ತೆರೆಯಬೇಕು ಎಂದು ಸರ್ಕಾರ ಮಸೀದಿಗಳಿಗೆ ಆದೇಶಿಸಿತ್ತು. ಪ್ರಾರ್ಥನೆಗೆ ಶೇ.30ರಷ್ಚು ಮಂದಿಗೆ ಅವಕಾಶ ನೀಡಿದ್ದು, ಪ್ರಾರ್ಥನೆ ವೇಳೆ ಅಂತರ ಕಾಯ್ದುಕೊಳ್ಳಲಾಗಿತ್ತು.

ವೈರಸ್ ಹರಡದಂತೆ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ದುಬೈಯಲ್ಲಿನ ಇಸ್ಲಾಮಿಕ್ ವ್ಯವಹಾರ ಮತ್ತು ಸಹಾಯಾರ್ಥ ಚಟುವಟಿಕೆ ವಿಭಾಗದ ಪ್ರಧಾನ ನಿರ್ದೇಶಕ ಡಾ. ಹಮದ್ ಅಲ್ ಶೇಖ್ ಅಹ್ಮದ್ ಅಲ್ ಶೈಬನಿ ಹೇಳಿದ್ದಾರೆ.

ದುಬೈನಲ್ಲಿರುವ ಜನರಿಗೆ ಪ್ರಾರ್ಥನೆಗಾಗಿ 60 ತಾತ್ಕಾಲಿಕ ಮಸೀದಿಗಳನ್ನು ನಿರ್ಮಿಸಲಾಗುವುದು. ಪ್ರಾರ್ಥನೆ 10 ನಿಮಿಷಕ್ಕಿಂತ ಹೆಚ್ಚು ಹೊತ್ತು ಇರಬಾರದು. ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪ್ರಾರ್ಥನೆಗೆ ಬಳಸುವ ಚಾಪೆಯನ್ನು ಅವರೇ ತರಬೇಕು. ಮಸೀದಿಗೆ ಬರುವವರನ್ನು ನಿಯಂತ್ರಿಸಲು ಎಲ್ಲ ಮಸೀದಿಗಳಲ್ಲಿಯೂ ವ್ಯಕ್ತಿಯೊಬ್ಬನನ್ನು ನಿಯೋಜನೆ ಮಾಡಬೇಕು ಎಂದಿದ್ದಾರೆ ಅವರು.

ಗುರುವಾರ ಯುಎಇನಲ್ಲಿ 132,380 ಕೋವಿಡ್ ಪರೀಕ್ಷೆ ನಡೆಸಿದ್ದು 1,317 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮರಳುಗಾಡಿನಲ್ಲಿ ಕನ್ನಡದ ಕಂಪು.. ದುಬೈನಲ್ಲಿ ತೆರೆದಿದೆ ಕನ್ನಡ ಪಾಠ ಶಾಲೆ!

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ