AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಇಯಲ್ಲಿ ತೆರೆದ ಮಸೀದಿ: ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿ

ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಶುಕ್ರವಾರದ ಪ್ರಾರ್ಥನೆಗಾಗಿ ಮಸೀದಿಗಳನ್ನು ತೆರೆಯಬೇಕು ಎಂದು ಸರ್ಕಾರ ಮಸೀದಿಗಳಿಗೆ ಆದೇಶಿಸಿತ್ತು.

ಯುಎಇಯಲ್ಲಿ ತೆರೆದ ಮಸೀದಿ: ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 04, 2020 | 6:10 PM

Share

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ (ಯುಎಇ) ಕೋವಿಡ್-19 ಆತಂಕದ ಹಿನ್ನೆಲೆಯಲ್ಲಿ ಸುಮಾರು 8 ತಿಂಗಳುಗಳಿಂದ ಮುಚ್ಚಿದ್ದ ಮಸೀದಿಗಳು ಶುಕ್ರವಾರದ ಪ್ರಾರ್ಥನೆಗಾಗಿ ತೆರೆದಿವೆ. ಇಂದು  ನಡೆದ ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಶುಕ್ರವಾರದ ಪ್ರಾರ್ಥನೆಗಾಗಿ ಮಸೀದಿಗಳನ್ನು ತೆರೆಯಬೇಕು ಎಂದು ಸರ್ಕಾರ ಮಸೀದಿಗಳಿಗೆ ಆದೇಶಿಸಿತ್ತು. ಪ್ರಾರ್ಥನೆಗೆ ಶೇ.30ರಷ್ಚು ಮಂದಿಗೆ ಅವಕಾಶ ನೀಡಿದ್ದು, ಪ್ರಾರ್ಥನೆ ವೇಳೆ ಅಂತರ ಕಾಯ್ದುಕೊಳ್ಳಲಾಗಿತ್ತು.

ವೈರಸ್ ಹರಡದಂತೆ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ದುಬೈಯಲ್ಲಿನ ಇಸ್ಲಾಮಿಕ್ ವ್ಯವಹಾರ ಮತ್ತು ಸಹಾಯಾರ್ಥ ಚಟುವಟಿಕೆ ವಿಭಾಗದ ಪ್ರಧಾನ ನಿರ್ದೇಶಕ ಡಾ. ಹಮದ್ ಅಲ್ ಶೇಖ್ ಅಹ್ಮದ್ ಅಲ್ ಶೈಬನಿ ಹೇಳಿದ್ದಾರೆ.

ದುಬೈನಲ್ಲಿರುವ ಜನರಿಗೆ ಪ್ರಾರ್ಥನೆಗಾಗಿ 60 ತಾತ್ಕಾಲಿಕ ಮಸೀದಿಗಳನ್ನು ನಿರ್ಮಿಸಲಾಗುವುದು. ಪ್ರಾರ್ಥನೆ 10 ನಿಮಿಷಕ್ಕಿಂತ ಹೆಚ್ಚು ಹೊತ್ತು ಇರಬಾರದು. ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪ್ರಾರ್ಥನೆಗೆ ಬಳಸುವ ಚಾಪೆಯನ್ನು ಅವರೇ ತರಬೇಕು. ಮಸೀದಿಗೆ ಬರುವವರನ್ನು ನಿಯಂತ್ರಿಸಲು ಎಲ್ಲ ಮಸೀದಿಗಳಲ್ಲಿಯೂ ವ್ಯಕ್ತಿಯೊಬ್ಬನನ್ನು ನಿಯೋಜನೆ ಮಾಡಬೇಕು ಎಂದಿದ್ದಾರೆ ಅವರು.

ಗುರುವಾರ ಯುಎಇನಲ್ಲಿ 132,380 ಕೋವಿಡ್ ಪರೀಕ್ಷೆ ನಡೆಸಿದ್ದು 1,317 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮರಳುಗಾಡಿನಲ್ಲಿ ಕನ್ನಡದ ಕಂಪು.. ದುಬೈನಲ್ಲಿ ತೆರೆದಿದೆ ಕನ್ನಡ ಪಾಠ ಶಾಲೆ!

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​