AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಇಯಲ್ಲಿ ತೆರೆದ ಮಸೀದಿ: ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿ

ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಶುಕ್ರವಾರದ ಪ್ರಾರ್ಥನೆಗಾಗಿ ಮಸೀದಿಗಳನ್ನು ತೆರೆಯಬೇಕು ಎಂದು ಸರ್ಕಾರ ಮಸೀದಿಗಳಿಗೆ ಆದೇಶಿಸಿತ್ತು.

ಯುಎಇಯಲ್ಲಿ ತೆರೆದ ಮಸೀದಿ: ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 04, 2020 | 6:10 PM

Share

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ (ಯುಎಇ) ಕೋವಿಡ್-19 ಆತಂಕದ ಹಿನ್ನೆಲೆಯಲ್ಲಿ ಸುಮಾರು 8 ತಿಂಗಳುಗಳಿಂದ ಮುಚ್ಚಿದ್ದ ಮಸೀದಿಗಳು ಶುಕ್ರವಾರದ ಪ್ರಾರ್ಥನೆಗಾಗಿ ತೆರೆದಿವೆ. ಇಂದು  ನಡೆದ ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಶುಕ್ರವಾರದ ಪ್ರಾರ್ಥನೆಗಾಗಿ ಮಸೀದಿಗಳನ್ನು ತೆರೆಯಬೇಕು ಎಂದು ಸರ್ಕಾರ ಮಸೀದಿಗಳಿಗೆ ಆದೇಶಿಸಿತ್ತು. ಪ್ರಾರ್ಥನೆಗೆ ಶೇ.30ರಷ್ಚು ಮಂದಿಗೆ ಅವಕಾಶ ನೀಡಿದ್ದು, ಪ್ರಾರ್ಥನೆ ವೇಳೆ ಅಂತರ ಕಾಯ್ದುಕೊಳ್ಳಲಾಗಿತ್ತು.

ವೈರಸ್ ಹರಡದಂತೆ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ದುಬೈಯಲ್ಲಿನ ಇಸ್ಲಾಮಿಕ್ ವ್ಯವಹಾರ ಮತ್ತು ಸಹಾಯಾರ್ಥ ಚಟುವಟಿಕೆ ವಿಭಾಗದ ಪ್ರಧಾನ ನಿರ್ದೇಶಕ ಡಾ. ಹಮದ್ ಅಲ್ ಶೇಖ್ ಅಹ್ಮದ್ ಅಲ್ ಶೈಬನಿ ಹೇಳಿದ್ದಾರೆ.

ದುಬೈನಲ್ಲಿರುವ ಜನರಿಗೆ ಪ್ರಾರ್ಥನೆಗಾಗಿ 60 ತಾತ್ಕಾಲಿಕ ಮಸೀದಿಗಳನ್ನು ನಿರ್ಮಿಸಲಾಗುವುದು. ಪ್ರಾರ್ಥನೆ 10 ನಿಮಿಷಕ್ಕಿಂತ ಹೆಚ್ಚು ಹೊತ್ತು ಇರಬಾರದು. ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪ್ರಾರ್ಥನೆಗೆ ಬಳಸುವ ಚಾಪೆಯನ್ನು ಅವರೇ ತರಬೇಕು. ಮಸೀದಿಗೆ ಬರುವವರನ್ನು ನಿಯಂತ್ರಿಸಲು ಎಲ್ಲ ಮಸೀದಿಗಳಲ್ಲಿಯೂ ವ್ಯಕ್ತಿಯೊಬ್ಬನನ್ನು ನಿಯೋಜನೆ ಮಾಡಬೇಕು ಎಂದಿದ್ದಾರೆ ಅವರು.

ಗುರುವಾರ ಯುಎಇನಲ್ಲಿ 132,380 ಕೋವಿಡ್ ಪರೀಕ್ಷೆ ನಡೆಸಿದ್ದು 1,317 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಮರಳುಗಾಡಿನಲ್ಲಿ ಕನ್ನಡದ ಕಂಪು.. ದುಬೈನಲ್ಲಿ ತೆರೆದಿದೆ ಕನ್ನಡ ಪಾಠ ಶಾಲೆ!

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ