AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ಭೀಕರ ರಸ್ತೆ ಅಪಘಾತ; ಮೂವರು ಭಾರತೀಯರು ಸಾವು

ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿನ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಭಾರತೀಯ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿಯಾದ ವೇಗದಿಂದ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ: ಭೀಕರ ರಸ್ತೆ ಅಪಘಾತ; ಮೂವರು ಭಾರತೀಯರು ಸಾವು
ಭೀಕರ ರಸ್ತೆ ಅಪಘಾತ; ಮೂವರು ಭಾರತೀಯರು ಸಾವು
ಅಕ್ಷತಾ ವರ್ಕಾಡಿ
|

Updated on: Apr 28, 2024 | 10:21 AM

Share

ದಕ್ಷಿಣ ಕೆರೊಲಿನಾ, ಏಪ್ರಿಲ್ 28:  ಅಮೆರಿಕದ ಸೌತ್ ಕೆರೊಲಿನಾದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಮೂವರು ಗುಜರಾತಿ ಮಹಿಳೆಯರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಗುಜರಾತ್‌ನ ಆನಂದ್ ಜಿಲ್ಲೆಯವರು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ. ಮೃತರು ಪ್ರಯಾಣಿಸುತ್ತಿದ್ದ ಎಸ್‌ಯುವಿ ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಸ್ ಯುವಿ ಹಲವು ಬಾರಿ ರಸ್ತೆಯಲ್ಲಿ ಪಲ್ಟಿಯಾಗಿ ಮರದ ಮೇಲೆ ಸಿಲುಕಿಕೊಂಡಿತ್ತು. ಆ ವೇಳೆ ಕಾರು ಸುಮಾರು 20 ಅಡಿ ಎತ್ತರಕ್ಕೆ ಏರಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರು ವೇಗದ ಮಿತಿಯನ್ನು ಮೀರಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯಲ್ಲಿ ಬೇರೆ ಯಾವುದೇ ವಾಹನಗಳು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮತ್ತಷ್ಟು ಓದಿ: ಗಾಜಾದ ಆಸ್ಪತ್ರೆಯಲ್ಲಿ ಸಾಮೂಹಿಕ ಸಮಾಧಿ, 200ಕ್ಕೂ ಅಧಿಕ ಶವಗಳು ಪತ್ತೆ

ಸೌತ್ ಕೆರೊಲಿನಾ ಹೈವೇ ಪೆಟ್ರೋಲ್, ಗ್ಯಾಂಟ್ ಫೈರ್, ರೆಸ್ಕ್ಯೂ, ಮತ್ತು ಗ್ರೀನ್‌ವಿಲ್ಲೆ ಕೌಂಟಿ ಇಎಂಎಸ್ ಘಟಕಗಳು ಸೇರಿದಂತೆ ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ನೆರವು ನೀಡಿವೆ. ಈ ವೇಳೆ ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬದುಕುಳಿದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್