AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಶಿಶುವಿಹಾರದಲ್ಲಿ ಚಾಕುವಿನಿಂದ ದಾಳಿ: ಮೂರು ಸಾವು, 6 ಮಂದಿಗೆ ಗಾಯ

ಸ್ಥಳೀಯ ಸಮಯ ಬೆಳಗ್ಗೆ 10:00 ಗಂಟೆಗೆ (0200 GMT) ಆನ್‌ಫು ಕೌಂಟಿಯ ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್ ಧರಿಸಿದ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

ಚೀನಾದ ಶಿಶುವಿಹಾರದಲ್ಲಿ ಚಾಕುವಿನಿಂದ ದಾಳಿ: ಮೂರು ಸಾವು, 6 ಮಂದಿಗೆ ಗಾಯ
ಚೀನಾದಲ್ಲಿ ಚಾಕು ದಾಳಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 03, 2022 | 2:55 PM

Share

ಬೀಜಿಂಗ್: ಆಗ್ನೇಯ ಚೀನಾದ (China) ಜಿಯಾಂಕ್ಸಿ ಪ್ರಾಂತ್ಯದ ಶಿಶುವಿಹಾರದಲ್ಲಿ(kindergarten) ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ  ಗಾಯಗೊಂಡಿದ್ದಾರೆ. ಸ್ಥಳೀಯ ಸಮಯ ಬೆಳಗ್ಗೆ 10:00 ಗಂಟೆಗೆ (0200 GMT) ಆನ್‌ಫು ಕೌಂಟಿಯ ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್  ಧರಿಸಿದ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್‌ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.

ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ನಡೆಯುತ್ತಿಲೆ. ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.

ಕಳೆದ ಏಪ್ರಿಲ್‌ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ  ನಡೆದ ಚಾಕು ದಾಳಿಯಲ್ಲಿ  ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.

Published On - 2:36 pm, Wed, 3 August 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು