Tibet Avalanche: ಟಿಬೆಟ್ ಹಿಮಪಾತದಲ್ಲಿ 8 ಜನ ಸಾವು; ರಕ್ಷಣಾ ತಂಡವನ್ನು ಕಳುಹಿಸಿದ ಚೀನಾ

ಈ ಭೀಕರ ಹಿಮಪಾತದಲ್ಲಿ ಮೃತಪಟ್ಟವರ ದೇಹಗಳನ್ನು ಪತ್ತೆ ಮಾಡಲು ಹಾಗೂ ಇನ್ನೂ ಕಾಣೆಯಾಗಿರುವ ಜನರನ್ನು ಹುಡುಕಲು ಸಹಾಯ ಮಾಡಲು ಚೀನಾ ಸರ್ಕಾರ ರಕ್ಷಣಾ ತಂಡವನ್ನು ಕಳುಹಿಸಿದೆ.

Tibet Avalanche: ಟಿಬೆಟ್ ಹಿಮಪಾತದಲ್ಲಿ 8 ಜನ ಸಾವು; ರಕ್ಷಣಾ ತಂಡವನ್ನು ಕಳುಹಿಸಿದ ಚೀನಾ
ಟಿಬೆಟ್ ಹಿಮಪಾತ
Follow us
| Updated By: ಸುಷ್ಮಾ ಚಕ್ರೆ

Updated on: Jan 19, 2023 | 11:30 AM

ಬೀಜಿಂಗ್: ಟಿಬೆಟ್‌ನ ನೈಋತ್ಯ ಪ್ರದೇಶದ ನೈಂಗ್‌ಚಿ (Nyingchi) ನಗರದಲ್ಲಿ ಸಂಭವಿಸಿದ ಹಿಮಪಾತದಲ್ಲಿ (Avalanche) 8 ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ಹಿಮಪಾತದಲ್ಲಿ ಮೃತಪಟ್ಟವರ ದೇಹಗಳನ್ನು ಪತ್ತೆ ಮಾಡಲು ಹಾಗೂ ಇನ್ನೂ ಕಾಣೆಯಾಗಿರುವ ಜನರನ್ನು ಹುಡುಕಲು ಸಹಾಯ ಮಾಡಲು ಚೀನಾ ಸರ್ಕಾರ (China Government) ರಕ್ಷಣಾ ತಂಡವನ್ನು ಕಳುಹಿಸಿದೆ.

  1. ಮೈನ್ಲಿಂಗ್ ಕೌಂಟಿಯ ಪೈ ಗ್ರಾಮದ ನಡುವಿನ ರಸ್ತೆಯ ಒಂದು ವಿಭಾಗದಲ್ಲಿ ಮತ್ತು ಮೆಡಾಗ್ ಕೌಂಟಿಯ ಡೊಕ್ಸಾಂಗ್ ಲಾ ಸುರಂಗದ ದ್ವಾರದಲ್ಲಿ ಹಿಮಕುಸಿತ ಸಂಭವಿಸಿದೆ.
  2. ಮಂಗಳವಾರ ರಾತ್ರಿ 8 ಗಂಟೆಗೆ ಈ ಹಿಮಪಾತ ಸಂಭವಿಸಿದೆ. ಜನರು ಮತ್ತು ವಾಹನಗಳು ಹಿಮಪಾತದಲ್ಲಿ ಸಿಕ್ಕಿಹಾಕಿಕೊಂಡಿವೆ.
  3. ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾದವರ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಬಿಡುಗಡೆ ಮಾಡಿಲ್ಲ.
  4. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ 131 ಜನರನ್ನು ಮತ್ತು 28 ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
  5. ಚೀನಾದ ತುರ್ತು ನಿರ್ವಹಣಾ ಸಚಿವಾಲಯವು ಹಿಮಕುಸಿತದ ನಂತರ ನೈಋತ್ಯ ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶಕ್ಕೆ ರಕ್ಷಣಾ ತಂಡವನ್ನು ಕಳುಹಿಸಿದೆ.
  6. ತುರ್ತು ರಕ್ಷಣಾ ಪ್ರಧಾನ ಕಚೇರಿಯು 246 ರಕ್ಷಣಾ ಸಿಬ್ಬಂದಿ, 70ಕ್ಕೂ ಹೆಚ್ಚು ವಾಹನಗಳು, 10 ದೊಡ್ಡ ಪ್ರಮಾಣದ ಉಪಕರಣಗಳು ಮತ್ತು 994 ಶೋಧ ಸಾಧನಗಳನ್ನು ಸ್ಥಳಕ್ಕೆ ಕಳುಹಿಸಿದೆ.
  7. ನೈಂಗ್ಚಿಯು ಸರಾಸರಿ ಸುಮಾರು 9,300 ಅಡಿ ಎತ್ತರದಲ್ಲಿದೆ. ಈ ಸ್ಥಳವನ್ನು ಟಿಬೆಟ್‌ನ ಸ್ವಿಟ್ಜರ್ಲೆಂಡ್ ಎಂದೂ ಕರೆಯುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ