AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tibet Avalanche: ಟಿಬೆಟ್ ಹಿಮಪಾತದಲ್ಲಿ 8 ಜನ ಸಾವು; ರಕ್ಷಣಾ ತಂಡವನ್ನು ಕಳುಹಿಸಿದ ಚೀನಾ

ಈ ಭೀಕರ ಹಿಮಪಾತದಲ್ಲಿ ಮೃತಪಟ್ಟವರ ದೇಹಗಳನ್ನು ಪತ್ತೆ ಮಾಡಲು ಹಾಗೂ ಇನ್ನೂ ಕಾಣೆಯಾಗಿರುವ ಜನರನ್ನು ಹುಡುಕಲು ಸಹಾಯ ಮಾಡಲು ಚೀನಾ ಸರ್ಕಾರ ರಕ್ಷಣಾ ತಂಡವನ್ನು ಕಳುಹಿಸಿದೆ.

Tibet Avalanche: ಟಿಬೆಟ್ ಹಿಮಪಾತದಲ್ಲಿ 8 ಜನ ಸಾವು; ರಕ್ಷಣಾ ತಂಡವನ್ನು ಕಳುಹಿಸಿದ ಚೀನಾ
ಟಿಬೆಟ್ ಹಿಮಪಾತ
TV9 Web
| Edited By: |

Updated on: Jan 19, 2023 | 11:30 AM

Share

ಬೀಜಿಂಗ್: ಟಿಬೆಟ್‌ನ ನೈಋತ್ಯ ಪ್ರದೇಶದ ನೈಂಗ್‌ಚಿ (Nyingchi) ನಗರದಲ್ಲಿ ಸಂಭವಿಸಿದ ಹಿಮಪಾತದಲ್ಲಿ (Avalanche) 8 ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ಹಿಮಪಾತದಲ್ಲಿ ಮೃತಪಟ್ಟವರ ದೇಹಗಳನ್ನು ಪತ್ತೆ ಮಾಡಲು ಹಾಗೂ ಇನ್ನೂ ಕಾಣೆಯಾಗಿರುವ ಜನರನ್ನು ಹುಡುಕಲು ಸಹಾಯ ಮಾಡಲು ಚೀನಾ ಸರ್ಕಾರ (China Government) ರಕ್ಷಣಾ ತಂಡವನ್ನು ಕಳುಹಿಸಿದೆ.

  1. ಮೈನ್ಲಿಂಗ್ ಕೌಂಟಿಯ ಪೈ ಗ್ರಾಮದ ನಡುವಿನ ರಸ್ತೆಯ ಒಂದು ವಿಭಾಗದಲ್ಲಿ ಮತ್ತು ಮೆಡಾಗ್ ಕೌಂಟಿಯ ಡೊಕ್ಸಾಂಗ್ ಲಾ ಸುರಂಗದ ದ್ವಾರದಲ್ಲಿ ಹಿಮಕುಸಿತ ಸಂಭವಿಸಿದೆ.
  2. ಮಂಗಳವಾರ ರಾತ್ರಿ 8 ಗಂಟೆಗೆ ಈ ಹಿಮಪಾತ ಸಂಭವಿಸಿದೆ. ಜನರು ಮತ್ತು ವಾಹನಗಳು ಹಿಮಪಾತದಲ್ಲಿ ಸಿಕ್ಕಿಹಾಕಿಕೊಂಡಿವೆ.
  3. ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾದವರ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಬಿಡುಗಡೆ ಮಾಡಿಲ್ಲ.
  4. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ 131 ಜನರನ್ನು ಮತ್ತು 28 ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
  5. ಚೀನಾದ ತುರ್ತು ನಿರ್ವಹಣಾ ಸಚಿವಾಲಯವು ಹಿಮಕುಸಿತದ ನಂತರ ನೈಋತ್ಯ ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶಕ್ಕೆ ರಕ್ಷಣಾ ತಂಡವನ್ನು ಕಳುಹಿಸಿದೆ.
  6. ತುರ್ತು ರಕ್ಷಣಾ ಪ್ರಧಾನ ಕಚೇರಿಯು 246 ರಕ್ಷಣಾ ಸಿಬ್ಬಂದಿ, 70ಕ್ಕೂ ಹೆಚ್ಚು ವಾಹನಗಳು, 10 ದೊಡ್ಡ ಪ್ರಮಾಣದ ಉಪಕರಣಗಳು ಮತ್ತು 994 ಶೋಧ ಸಾಧನಗಳನ್ನು ಸ್ಥಳಕ್ಕೆ ಕಳುಹಿಸಿದೆ.
  7. ನೈಂಗ್ಚಿಯು ಸರಾಸರಿ ಸುಮಾರು 9,300 ಅಡಿ ಎತ್ತರದಲ್ಲಿದೆ. ಈ ಸ್ಥಳವನ್ನು ಟಿಬೆಟ್‌ನ ಸ್ವಿಟ್ಜರ್ಲೆಂಡ್ ಎಂದೂ ಕರೆಯುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು