AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tibet Avalanche: ಟಿಬೆಟ್ ಹಿಮಪಾತದಲ್ಲಿ 8 ಜನ ಸಾವು; ರಕ್ಷಣಾ ತಂಡವನ್ನು ಕಳುಹಿಸಿದ ಚೀನಾ

ಈ ಭೀಕರ ಹಿಮಪಾತದಲ್ಲಿ ಮೃತಪಟ್ಟವರ ದೇಹಗಳನ್ನು ಪತ್ತೆ ಮಾಡಲು ಹಾಗೂ ಇನ್ನೂ ಕಾಣೆಯಾಗಿರುವ ಜನರನ್ನು ಹುಡುಕಲು ಸಹಾಯ ಮಾಡಲು ಚೀನಾ ಸರ್ಕಾರ ರಕ್ಷಣಾ ತಂಡವನ್ನು ಕಳುಹಿಸಿದೆ.

Tibet Avalanche: ಟಿಬೆಟ್ ಹಿಮಪಾತದಲ್ಲಿ 8 ಜನ ಸಾವು; ರಕ್ಷಣಾ ತಂಡವನ್ನು ಕಳುಹಿಸಿದ ಚೀನಾ
ಟಿಬೆಟ್ ಹಿಮಪಾತ
TV9 Web
| Edited By: |

Updated on: Jan 19, 2023 | 11:30 AM

Share

ಬೀಜಿಂಗ್: ಟಿಬೆಟ್‌ನ ನೈಋತ್ಯ ಪ್ರದೇಶದ ನೈಂಗ್‌ಚಿ (Nyingchi) ನಗರದಲ್ಲಿ ಸಂಭವಿಸಿದ ಹಿಮಪಾತದಲ್ಲಿ (Avalanche) 8 ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ಹಿಮಪಾತದಲ್ಲಿ ಮೃತಪಟ್ಟವರ ದೇಹಗಳನ್ನು ಪತ್ತೆ ಮಾಡಲು ಹಾಗೂ ಇನ್ನೂ ಕಾಣೆಯಾಗಿರುವ ಜನರನ್ನು ಹುಡುಕಲು ಸಹಾಯ ಮಾಡಲು ಚೀನಾ ಸರ್ಕಾರ (China Government) ರಕ್ಷಣಾ ತಂಡವನ್ನು ಕಳುಹಿಸಿದೆ.

  1. ಮೈನ್ಲಿಂಗ್ ಕೌಂಟಿಯ ಪೈ ಗ್ರಾಮದ ನಡುವಿನ ರಸ್ತೆಯ ಒಂದು ವಿಭಾಗದಲ್ಲಿ ಮತ್ತು ಮೆಡಾಗ್ ಕೌಂಟಿಯ ಡೊಕ್ಸಾಂಗ್ ಲಾ ಸುರಂಗದ ದ್ವಾರದಲ್ಲಿ ಹಿಮಕುಸಿತ ಸಂಭವಿಸಿದೆ.
  2. ಮಂಗಳವಾರ ರಾತ್ರಿ 8 ಗಂಟೆಗೆ ಈ ಹಿಮಪಾತ ಸಂಭವಿಸಿದೆ. ಜನರು ಮತ್ತು ವಾಹನಗಳು ಹಿಮಪಾತದಲ್ಲಿ ಸಿಕ್ಕಿಹಾಕಿಕೊಂಡಿವೆ.
  3. ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾದವರ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಬಿಡುಗಡೆ ಮಾಡಿಲ್ಲ.
  4. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ 131 ಜನರನ್ನು ಮತ್ತು 28 ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
  5. ಚೀನಾದ ತುರ್ತು ನಿರ್ವಹಣಾ ಸಚಿವಾಲಯವು ಹಿಮಕುಸಿತದ ನಂತರ ನೈಋತ್ಯ ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶಕ್ಕೆ ರಕ್ಷಣಾ ತಂಡವನ್ನು ಕಳುಹಿಸಿದೆ.
  6. ತುರ್ತು ರಕ್ಷಣಾ ಪ್ರಧಾನ ಕಚೇರಿಯು 246 ರಕ್ಷಣಾ ಸಿಬ್ಬಂದಿ, 70ಕ್ಕೂ ಹೆಚ್ಚು ವಾಹನಗಳು, 10 ದೊಡ್ಡ ಪ್ರಮಾಣದ ಉಪಕರಣಗಳು ಮತ್ತು 994 ಶೋಧ ಸಾಧನಗಳನ್ನು ಸ್ಥಳಕ್ಕೆ ಕಳುಹಿಸಿದೆ.
  7. ನೈಂಗ್ಚಿಯು ಸರಾಸರಿ ಸುಮಾರು 9,300 ಅಡಿ ಎತ್ತರದಲ್ಲಿದೆ. ಈ ಸ್ಥಳವನ್ನು ಟಿಬೆಟ್‌ನ ಸ್ವಿಟ್ಜರ್ಲೆಂಡ್ ಎಂದೂ ಕರೆಯುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!