AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Titanic Submarine: ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿ

ಅಟ್ಲಾಂಟಿಕ್ ಮಹಾಸಾಗರದಲ್ಲಿ ಮುಳುಗಿದ್ದ ಟೈಟಾನಿಕ್(Titanic) ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Titanic Submarine: ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿ
ಟೈಟಾನಿಕ್ ಜಲಾಂತರ್ಗಾಮಿ
Follow us
ನಯನಾ ರಾಜೀವ್
|

Updated on: Jun 23, 2023 | 7:12 AM

ಅಟ್ಲಾಂಟಿಕ್ ಮಹಾಸಾಗರದಲ್ಲಿ ಮುಳುಗಿದ್ದ ಟೈಟಾನಿಕ್(Titanic) ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಓರ್ವ ಪೈಲಟ್, ನಾಲ್ವರು ಮಹಾಸಾಗರದಲ್ಲಿ ಜಲ ಸಮಾಧಿಯಾಗಿದ್ದಾರೆ. ಬ್ರಿಟನ್​ನ ಹಮೀಶ್ ಹಾರ್ಡಿಂಗ್, ಸ್ಟೋಕ್ಟನ್ ರಶ್, ಪಾಲ್ ಹೆನ್ರಿ, ಪಾಕಿಸ್ತಾನದ ಉದ್ಯಮಿ ಶಹಜಾದ್ ದಾವೂದ್ ಹಾಗೂ ಪುತ್ರ ಸುಲೇಮಾನ್ ಮೃತಪಟ್ಟಿದ್ದಾರೆ.

ಕಳೆದ 3-4 ದಿನಗಳಿಂದ ಅಮೆರಿಕ ಹಾಗೂ ಕೆನಡಾ ಕರಾವಳಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಫಲ ಕೊಡಲಿಲ್ಲ, ಕೆನಡಾದ ನ್ಯೂಫೌಂಡ್​ಲ್ಯಾಂಡ್​ ಕರಾವಳಿಯ ಭಾಗದಿಂದ 400 ಮೈಲಿ ದೂರದಲ್ಲಿ ಹಡಗು ಟೈಟಾನಿಕ್​ನ ಅವಶೇಷಗಳು ಬಿದ್ದಿವೆ. ಇಲ್ಲಿನ ಅವಶೇಷಗಳನ್ನು ನೋಡಲು ಹೋಗಿದ್ದವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ನಾಪತ್ತೆಯಾಗಿರುವ ಟೈಟಾನಿಕ್ ಸಬ್‌ಮೆರಿನ್​​ನಲ್ಲಿ ಖಾಲಿಯಾಗುತ್ತಾ ಬಂದಿದೆ ಆಕ್ಸಿಜನ್; ಪವಾಡಗಳು ನಡೆಯಬೇಕು ಎಂದ ತಜ್ಞರು

ಅಮೆರಿಕ ನೌಕಾಪಡೆಯ ಸಿಬ್ಬಂದಿಗೆ ನಾಪತ್ತೆಯಾಗಿರುವ ಟೈಟಾನಿಕ್ ಜಲಾಂತರ್ಗಾಮಿಯ ಅವಶೇಷಗಳು ಕಾಣಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿರುವ ಹಡಗಿನಲ್ಲಿ ಆಮ್ಲಜನಕ ಖಾಲಿಯಾಗಿತ್ತು, ಅಲ್ಲಿದ್ದವರಿಗೆ ಉಸಿರಾಡಲು ನಿನ್ನೆ ಸಂಜೆ 7 ಗಮಟೆಯವರೆಗೆ ಸಾಕಾಗುವಷ್ಟು ಮಾತ್ರ ಆಮ್ಲಜನಕವಿತ್ತು.

ಕೆನಡಾದ ನ್ಯೂಫೌಂಡ್​ಲ್ಯಾಂಡ್​ನ ಕರಾವಳಿಯಿಂದ 400 ಮೈಲಿ ದೂರದಲ್ಲಿ ಟೈಟಾನಿಕ್​ ಹಡಗುಗಳ ಅವಶೇಷಗಳಿವೆ. 100 ವರ್ಷಕ್ಕೂ ಹೆಚ್ಚು ಕಾಲದಿಂದ ಸಮುದ್ರದ 12,600 ಅಡಿ ಆಳದಲ್ಲಿ ಟೈಟಾನಿಕ್ ಅವಶೇಷಗಳಿವೆ. 1912ರ ಏಪ್ರಿಲ್ 14ರಂದು ಬೃಹತ್ ಟೈಟಾನಿಕ್ ಹಡಗು ಅಪಘಾತಕ್ಕೀಡಾಗಿತ್ತು, 1,500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಹಾಗೆಯೇ 700 ಮಂದಿ ಮಾತ್ರ ಪ್ರಾಣ ಉಳಿಸಿಕೊಂಡಿದ್ದರು. 1982ರಲ್ಲಿ ಟೈಟಾನಿಕ್ ಅವಶೇಷಗಳು ಪತ್ತೆಯಾಗಿತ್ತು. ಈಗ ಅದನ್ನು ನೋಡಲು ತೆರಳಿದ್ದ ಜೀವಗಳು ಕೂಡ ನೀರಿನ ಪಾಲಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ