AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Titanic Submarine: ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿ

ಅಟ್ಲಾಂಟಿಕ್ ಮಹಾಸಾಗರದಲ್ಲಿ ಮುಳುಗಿದ್ದ ಟೈಟಾನಿಕ್(Titanic) ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Titanic Submarine: ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿ
ಟೈಟಾನಿಕ್ ಜಲಾಂತರ್ಗಾಮಿ
ನಯನಾ ರಾಜೀವ್
|

Updated on: Jun 23, 2023 | 7:12 AM

Share

ಅಟ್ಲಾಂಟಿಕ್ ಮಹಾಸಾಗರದಲ್ಲಿ ಮುಳುಗಿದ್ದ ಟೈಟಾನಿಕ್(Titanic) ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಓರ್ವ ಪೈಲಟ್, ನಾಲ್ವರು ಮಹಾಸಾಗರದಲ್ಲಿ ಜಲ ಸಮಾಧಿಯಾಗಿದ್ದಾರೆ. ಬ್ರಿಟನ್​ನ ಹಮೀಶ್ ಹಾರ್ಡಿಂಗ್, ಸ್ಟೋಕ್ಟನ್ ರಶ್, ಪಾಲ್ ಹೆನ್ರಿ, ಪಾಕಿಸ್ತಾನದ ಉದ್ಯಮಿ ಶಹಜಾದ್ ದಾವೂದ್ ಹಾಗೂ ಪುತ್ರ ಸುಲೇಮಾನ್ ಮೃತಪಟ್ಟಿದ್ದಾರೆ.

ಕಳೆದ 3-4 ದಿನಗಳಿಂದ ಅಮೆರಿಕ ಹಾಗೂ ಕೆನಡಾ ಕರಾವಳಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಫಲ ಕೊಡಲಿಲ್ಲ, ಕೆನಡಾದ ನ್ಯೂಫೌಂಡ್​ಲ್ಯಾಂಡ್​ ಕರಾವಳಿಯ ಭಾಗದಿಂದ 400 ಮೈಲಿ ದೂರದಲ್ಲಿ ಹಡಗು ಟೈಟಾನಿಕ್​ನ ಅವಶೇಷಗಳು ಬಿದ್ದಿವೆ. ಇಲ್ಲಿನ ಅವಶೇಷಗಳನ್ನು ನೋಡಲು ಹೋಗಿದ್ದವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ನಾಪತ್ತೆಯಾಗಿರುವ ಟೈಟಾನಿಕ್ ಸಬ್‌ಮೆರಿನ್​​ನಲ್ಲಿ ಖಾಲಿಯಾಗುತ್ತಾ ಬಂದಿದೆ ಆಕ್ಸಿಜನ್; ಪವಾಡಗಳು ನಡೆಯಬೇಕು ಎಂದ ತಜ್ಞರು

ಅಮೆರಿಕ ನೌಕಾಪಡೆಯ ಸಿಬ್ಬಂದಿಗೆ ನಾಪತ್ತೆಯಾಗಿರುವ ಟೈಟಾನಿಕ್ ಜಲಾಂತರ್ಗಾಮಿಯ ಅವಶೇಷಗಳು ಕಾಣಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿರುವ ಹಡಗಿನಲ್ಲಿ ಆಮ್ಲಜನಕ ಖಾಲಿಯಾಗಿತ್ತು, ಅಲ್ಲಿದ್ದವರಿಗೆ ಉಸಿರಾಡಲು ನಿನ್ನೆ ಸಂಜೆ 7 ಗಮಟೆಯವರೆಗೆ ಸಾಕಾಗುವಷ್ಟು ಮಾತ್ರ ಆಮ್ಲಜನಕವಿತ್ತು.

ಕೆನಡಾದ ನ್ಯೂಫೌಂಡ್​ಲ್ಯಾಂಡ್​ನ ಕರಾವಳಿಯಿಂದ 400 ಮೈಲಿ ದೂರದಲ್ಲಿ ಟೈಟಾನಿಕ್​ ಹಡಗುಗಳ ಅವಶೇಷಗಳಿವೆ. 100 ವರ್ಷಕ್ಕೂ ಹೆಚ್ಚು ಕಾಲದಿಂದ ಸಮುದ್ರದ 12,600 ಅಡಿ ಆಳದಲ್ಲಿ ಟೈಟಾನಿಕ್ ಅವಶೇಷಗಳಿವೆ. 1912ರ ಏಪ್ರಿಲ್ 14ರಂದು ಬೃಹತ್ ಟೈಟಾನಿಕ್ ಹಡಗು ಅಪಘಾತಕ್ಕೀಡಾಗಿತ್ತು, 1,500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಹಾಗೆಯೇ 700 ಮಂದಿ ಮಾತ್ರ ಪ್ರಾಣ ಉಳಿಸಿಕೊಂಡಿದ್ದರು. 1982ರಲ್ಲಿ ಟೈಟಾನಿಕ್ ಅವಶೇಷಗಳು ಪತ್ತೆಯಾಗಿತ್ತು. ಈಗ ಅದನ್ನು ನೋಡಲು ತೆರಳಿದ್ದ ಜೀವಗಳು ಕೂಡ ನೀರಿನ ಪಾಲಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?