AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವರ್ಗ ಸಿಗುತ್ತೆ, ಏಸುವನ್ನು ನೋಡಬಹುದು ಎಂಬ ಪಾದ್ರಿ ಮಾತು ನಂಬಿ ಜೀವಂತ ಸಮಾಧಿಯಾದವರ ಸಂಖ್ಯೆ 110ಕ್ಕೆ ಏರಿಕೆ

ಉಪವಾಸವಿದ್ದು ಜೀವಂತ ಸಮಾಧಿಯಾದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ, ಏಸುವನ್ನು ನೋಡಬಹುದು ಎಂದು ಪಾದ್ರಿಯೊಬ್ಬರು ಹೇಳಿದ್ದ ಮಾತು ನಂಬಿ ಮಕ್ಕಳು ಸಮೇತ ಜೀವಂತ ಸಮಾಧಿಯಾದವರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ.

ಸ್ವರ್ಗ ಸಿಗುತ್ತೆ, ಏಸುವನ್ನು ನೋಡಬಹುದು ಎಂಬ ಪಾದ್ರಿ ಮಾತು ನಂಬಿ ಜೀವಂತ ಸಮಾಧಿಯಾದವರ ಸಂಖ್ಯೆ 110ಕ್ಕೆ ಏರಿಕೆ
ಕೀನ್ಯಾ ಜೀವಂತ ಸಮಾಧಿ
ನಯನಾ ರಾಜೀವ್
|

Updated on: May 02, 2023 | 7:46 AM

Share

ಉಪವಾಸವಿದ್ದು ಜೀವಂತ ಸಮಾಧಿಯಾದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ, ಏಸುವನ್ನು ನೋಡಬಹುದು ಎಂದು ಪಾದ್ರಿಯೊಬ್ಬರು ಹೇಳಿದ್ದ ಮಾತು ನಂಬಿ ಮಕ್ಕಳು ಸಮೇತ ಜೀವಂತ ಸಮಾಧಿಯಾದವರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ. ಕೀನ್ಯಾದ ಕರಾವಳಿ ಪಟ್ಟಣವಾದ ಮಲಿಂಡಿ ಬಳಿ ಪೊಲೀಸರು ಕನಿಷ್ಠ 110 ಶವಗಳನ್ನು ಹೊರತೆಗೆದಿದ್ದಾರೆ, ಮತ್ತಷ್ಟು ಮೃತದೇಹಗಳು ದೊರೆಯುವ ನಿರೀಕ್ಷೆ ಇದೆ. ಆಸ್ಪತ್ರೆಯ ಶವಾಗಾರ ತುಂಬಿದ್ದರಿಂದ ನಾಲ್ಕು ದಿನಗಳ ಕಾಲ ಶವಗಳ ಹುಡುಕಾಟವನ್ನು ನಿಲ್ಲಿಸಲಾಗಿತ್ತು. ಕಳೆದ ಎರಡು ದಿನಗಳಲ್ಲಿ ಐವರು ಜೀವಂತವಾಗಿ ಪತ್ತೆಯಾಗಿದ್ದಾರೆ.

ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ. ಯಾರಾದರೂ ಬದುಕಿರಬಹುದೆಂಬ ನಿರೀಕ್ಷೆಯಲ್ಲಿ ಪೊಲೀಸರು ಸಮಾಧಿಯನ್ನು ಅಗೆಯುತ್ತಿದ್ದಾರೆ. ಆ ಮೃತದೇಹಗಳಲ್ಲಿ ಮಕ್ಕಳೂ ಇದ್ದಾರೆ.

ಮತ್ತಷ್ಟು ಓದಿ: ಪಾದ್ರಿಯೊಬ್ಬರ ಜಮೀನಿನಲ್ಲಿ ಪತ್ತೆಯಾಯ್ತು 47 ಶವಗಳು, ಭಯ ಹುಟ್ಟಿಸುತ್ತೆ ಈ ಸಾವಿನ ಹಿಂದಿರುವ ಕಾರಣ

ಬಹಿರಂಗವಾದ ನಂತರ, ಪೊಲೀಸರು ಪಾಲ್ ಮೆಕೆಂಜಿ ಎಂಬ ಪಾದ್ರಿಯನ್ನು ಬಂಧಿಸಿದ್ದಾರೆ. ಆತ್ಮಹತ್ಯೆಗೆ ಪ್ರೇರೇಪಿಸಲಿಲ್ಲ ಎಂದು ಅವರು ಹೇಳಿದ್ದಾರೆ. 2019ರಲ್ಲೇ ಚರ್ಚ್​ ಅನ್ನು ಮುಚ್ಚಲಾಗಿದೆ ಎಂದಿದ್ದಾರೆ. ಪೊಲೀಸರು ಈಗ ಎಲ್ಲಾ ದೇಹಗಳಿಂದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ.

ಇದರಿಂದ ಜನರು ಹಸಿವಿನಿಂದ ಸತ್ತರು ಎಂದು ಸಾಬೀತುಪಡಿಸಬಹುದು. ಈ ಹಿಂದೆ ಇಬ್ಬರು ಮಕ್ಕಳ ಸಾವಿಗೆ ಪಾದ್ರಿ ಪಾಲ್ ಮೆಕೆಂಜಿ ಕಾರಣರಾಗಿದ್ದರು . ನಂತರ ಪೋಷಕರ ದೂರಿನ ಮೇರೆಗೆ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ